AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ 2’ ಸಿನಿಮಾದಲ್ಲಿ ಅಖಿಲ್​ ಅಕ್ಕಿನೇನಿ? ಅನುಮಾನ ಮೂಡಿಸಿದ ವಿಡಿಯೋ

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ‘ಸಲಾರ್​’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಹಾಗಿದ್ದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್​ ಮಾಡಿದೆ. ಆ ಖುಷಿಯನ್ನು ಸಂಭ್ರಮಿಸಲು ಚಿತ್ರತಂಡದವರು ಸಕ್ಸಸ್​ ಪಾರ್ಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಈ ಪಾರ್ಟಿಗೆ ಅಖಿಲ್​ ಅಕ್ಕಿನೇನಿ ಕೂಡ ಹಾಜರಿ ಹಾಕಿದ್ದಾರೆ.

‘ಸಲಾರ್ 2’ ಸಿನಿಮಾದಲ್ಲಿ ಅಖಿಲ್​ ಅಕ್ಕಿನೇನಿ? ಅನುಮಾನ ಮೂಡಿಸಿದ ವಿಡಿಯೋ
ಅಖಿಲ್​ ಅಕ್ಕಿನೇನಿ
ಮದನ್​ ಕುಮಾರ್​
|

Updated on: Jan 17, 2024 | 7:00 PM

Share

ನಟ ಅಖಿಲ್​ ಅಕ್ಕಿನೇನಿ (Akhil Akkineni) ಅವರಿಗೆ ಈವರೆಗೂ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಅವರು ನಟಿಸಿದ ‘ಏಜೆಂಟ್​’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಆ ಸಿನಿಮಾ ಗೆಲ್ಲಲಿಲ್ಲ. ಸ್ಟಾರ್​ ಕುಟುಂಬದ ಕುಡಿ ಆಗಿದ್ದರೂ ಕೂಡ ಅಖಿಲ್​ ಅವರು ಪ್ರೇಕ್ಷಕರ ಮನ ಗೆಲ್ಲಲು ಕಷ್ಟಪಡುತ್ತಿದ್ದಾರೆ. ಈ ನಡುವೆ ಅವರ ಬಗ್ಗೆ ಹೊಸ ಗಾಸಿಪ್​ ಕೇಳಿಬರಲು ಆರಂಭಿಸಿದೆ. ‘ಸಲಾರ್​ 2’ (Salaar 2) ಸಿನಿಮಾದಲ್ಲಿ ಅಖಿಲ್​ ನಟಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಅದಕ್ಕೆಲ್ಲ ಕಾರಣ ಆಗಿರುವುದು ಒಂದು ವಿಡಿಯೋ. ಯಾವುದು ಆ ವಿಡಿಯೋ? ಇಲ್ಲಿದೆ ಉತ್ತರ..

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ‘ಸಲಾರ್​’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಹಾಗಿದ್ದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್​ ಮಾಡಿದೆ. ಆ ಖುಷಿಯನ್ನು ಸಂಭ್ರಮಿಸಲು ಚಿತ್ರತಂಡದವರು ಸಕ್ಸಸ್​ ಪಾರ್ಟಿ ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಈ ಪಾರ್ಟಿಯಲ್ಲಿ ಅಖಿಲ್​ ಅಕ್ಕಿನೇನಿ ಕೂಡ ಕಾಣಿಸಿಕೊಂಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

‘ಸಲಾರ್​’ ನಟಿ ಶ್ರುತಿ ಹಾಸನ್​ ಗುಟ್ಟಾಗಿ ಮದುವೆ ಆಗಿದ್ದಾರಾ? ಸ್ಪಷ್ಟನೆ ನೀಡಿದ ಕಮಲ್​ ಪುತ್ರಿ

ಬೆಂಗಳೂರಿನ ಸ್ಟಾರ್​ ಹೋಟೆಲ್​ನಲ್ಲಿ ನಡೆದ ಪಾರ್ಟಿಯಲ್ಲಿ ಹೀರೋ ಪ್ರಭಾಸ್​, ನಿರ್ಮಾಪಕ ವಿಜಯ್​ ಕಿರಗಂದೂರು, ನಾಯಕಿ ಶ್ರುತಿ ಹಾಸನ್​, ನಿರ್ದೇಶಕ ಪ್ರಶಾಂತ್​ ನೀಲ್​, ನಟ ಜಗಪತಿ ಬಾಬು, ಸಂಗೀತ ನಿರ್ದೇಶಕ ರವಿ ಬಸ್ರೂರು, ನಟ ನವೀನ್​ ಶಂಕರ್​ ಮುಂತಾದವರು ಭಾಗಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ ಹಂಚಿಕೊಂಡಿದೆ. ಇದೇ ವಿಡಿಯೋದಲ್ಲಿ ಅಖಿಲ್​ ಅಕ್ಕಿನೇನಿ ಕೂಡ ಕಾಣಿಸಿಕೊಂಡಿದ್ದಾರೆ.

‘ಸಲಾರ್​’ ಸಿನಿಮಾಗೂ ಅಖಿಲ್​ ಅಕ್ಕಿನೇನಿ ಅವರಿಗೂ ಯಾವುದೇ ಸಂಬಂಧ ಇಲ್ಲ. ಹಾಗಿದ್ದರೂ ಕೂಡ ಅವರು ಸಕ್ಸಸ್​ ಪಾರ್ಟಿಯಲ್ಲಿ ಭಾಗಿ ಆಗಿರುವುದು ಸಿನಿಪ್ರಿಯರ ಕೌತುಕ ಕೆರಳಿಸಿದೆ. ‘ಸಲಾರ್ 2’ ಸಿನಿಮಾದಲ್ಲಿ ಅವರು ನಟಿಸಬಹುದು ಎಂಬ ಗಾಸಿಪ್​ ಹರಿದಾಡುತ್ತಿದೆ. ಒಂದು ವೇಳೆ ಅವರಿಗೆ ಚಾನ್ಸ್​ ಸಿಕ್ಕಿದ್ದೇ ಹೌದಾದರೆ ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ಸಿಕ್ಕಂತೆ ಆಗಲಿದೆ. ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್