AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ 2’ ಸಿನಿಮಾದಲ್ಲಿ ಅಖಿಲ್​ ಅಕ್ಕಿನೇನಿ? ಅನುಮಾನ ಮೂಡಿಸಿದ ವಿಡಿಯೋ

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ‘ಸಲಾರ್​’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಹಾಗಿದ್ದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್​ ಮಾಡಿದೆ. ಆ ಖುಷಿಯನ್ನು ಸಂಭ್ರಮಿಸಲು ಚಿತ್ರತಂಡದವರು ಸಕ್ಸಸ್​ ಪಾರ್ಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಈ ಪಾರ್ಟಿಗೆ ಅಖಿಲ್​ ಅಕ್ಕಿನೇನಿ ಕೂಡ ಹಾಜರಿ ಹಾಕಿದ್ದಾರೆ.

‘ಸಲಾರ್ 2’ ಸಿನಿಮಾದಲ್ಲಿ ಅಖಿಲ್​ ಅಕ್ಕಿನೇನಿ? ಅನುಮಾನ ಮೂಡಿಸಿದ ವಿಡಿಯೋ
ಅಖಿಲ್​ ಅಕ್ಕಿನೇನಿ
ಮದನ್​ ಕುಮಾರ್​
|

Updated on: Jan 17, 2024 | 7:00 PM

Share

ನಟ ಅಖಿಲ್​ ಅಕ್ಕಿನೇನಿ (Akhil Akkineni) ಅವರಿಗೆ ಈವರೆಗೂ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಅವರು ನಟಿಸಿದ ‘ಏಜೆಂಟ್​’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಆ ಸಿನಿಮಾ ಗೆಲ್ಲಲಿಲ್ಲ. ಸ್ಟಾರ್​ ಕುಟುಂಬದ ಕುಡಿ ಆಗಿದ್ದರೂ ಕೂಡ ಅಖಿಲ್​ ಅವರು ಪ್ರೇಕ್ಷಕರ ಮನ ಗೆಲ್ಲಲು ಕಷ್ಟಪಡುತ್ತಿದ್ದಾರೆ. ಈ ನಡುವೆ ಅವರ ಬಗ್ಗೆ ಹೊಸ ಗಾಸಿಪ್​ ಕೇಳಿಬರಲು ಆರಂಭಿಸಿದೆ. ‘ಸಲಾರ್​ 2’ (Salaar 2) ಸಿನಿಮಾದಲ್ಲಿ ಅಖಿಲ್​ ನಟಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಅದಕ್ಕೆಲ್ಲ ಕಾರಣ ಆಗಿರುವುದು ಒಂದು ವಿಡಿಯೋ. ಯಾವುದು ಆ ವಿಡಿಯೋ? ಇಲ್ಲಿದೆ ಉತ್ತರ..

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ ‘ಸಲಾರ್​’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಹಾಗಿದ್ದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್​ ಮಾಡಿದೆ. ಆ ಖುಷಿಯನ್ನು ಸಂಭ್ರಮಿಸಲು ಚಿತ್ರತಂಡದವರು ಸಕ್ಸಸ್​ ಪಾರ್ಟಿ ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಈ ಪಾರ್ಟಿಯಲ್ಲಿ ಅಖಿಲ್​ ಅಕ್ಕಿನೇನಿ ಕೂಡ ಕಾಣಿಸಿಕೊಂಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

‘ಸಲಾರ್​’ ನಟಿ ಶ್ರುತಿ ಹಾಸನ್​ ಗುಟ್ಟಾಗಿ ಮದುವೆ ಆಗಿದ್ದಾರಾ? ಸ್ಪಷ್ಟನೆ ನೀಡಿದ ಕಮಲ್​ ಪುತ್ರಿ

ಬೆಂಗಳೂರಿನ ಸ್ಟಾರ್​ ಹೋಟೆಲ್​ನಲ್ಲಿ ನಡೆದ ಪಾರ್ಟಿಯಲ್ಲಿ ಹೀರೋ ಪ್ರಭಾಸ್​, ನಿರ್ಮಾಪಕ ವಿಜಯ್​ ಕಿರಗಂದೂರು, ನಾಯಕಿ ಶ್ರುತಿ ಹಾಸನ್​, ನಿರ್ದೇಶಕ ಪ್ರಶಾಂತ್​ ನೀಲ್​, ನಟ ಜಗಪತಿ ಬಾಬು, ಸಂಗೀತ ನಿರ್ದೇಶಕ ರವಿ ಬಸ್ರೂರು, ನಟ ನವೀನ್​ ಶಂಕರ್​ ಮುಂತಾದವರು ಭಾಗಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ ಹಂಚಿಕೊಂಡಿದೆ. ಇದೇ ವಿಡಿಯೋದಲ್ಲಿ ಅಖಿಲ್​ ಅಕ್ಕಿನೇನಿ ಕೂಡ ಕಾಣಿಸಿಕೊಂಡಿದ್ದಾರೆ.

‘ಸಲಾರ್​’ ಸಿನಿಮಾಗೂ ಅಖಿಲ್​ ಅಕ್ಕಿನೇನಿ ಅವರಿಗೂ ಯಾವುದೇ ಸಂಬಂಧ ಇಲ್ಲ. ಹಾಗಿದ್ದರೂ ಕೂಡ ಅವರು ಸಕ್ಸಸ್​ ಪಾರ್ಟಿಯಲ್ಲಿ ಭಾಗಿ ಆಗಿರುವುದು ಸಿನಿಪ್ರಿಯರ ಕೌತುಕ ಕೆರಳಿಸಿದೆ. ‘ಸಲಾರ್ 2’ ಸಿನಿಮಾದಲ್ಲಿ ಅವರು ನಟಿಸಬಹುದು ಎಂಬ ಗಾಸಿಪ್​ ಹರಿದಾಡುತ್ತಿದೆ. ಒಂದು ವೇಳೆ ಅವರಿಗೆ ಚಾನ್ಸ್​ ಸಿಕ್ಕಿದ್ದೇ ಹೌದಾದರೆ ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ಸಿಕ್ಕಂತೆ ಆಗಲಿದೆ. ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ