AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ?

ಮೇ 19ರಂದು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಜೈಲಿನ ಅಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಆ ಕುರಿತು ಡಿಜಿಪಿ ಅಲೋಕ್ ಕುಮಾರ್ ಅವರು ಮಾತನಾಡಿದ್ದಾರೆ.

ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ?
Darshan, Vijayalakshmi, Vineesh, Alok Kumar
ಕಿರಣ ಹೆಚ್​. ವಿ.
| Edited By: |

Updated on: May 18, 2026 | 6:25 PM

Share

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಮುಖಾಮುಖಿ ಭೇಟಿ ಮಾಡಲು ಅವಕಾಶ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ‘ವಿಜಯಲಕ್ಷ್ಮಿ ಅವರು ಬಂದು ಕೇಳಿಕೊಂಡಿದ್ದಾರೆ. ಮೇ 19ರಂದು ಅವರ ವಿವಾಹ ವಾರ್ಷಿಕೋತ್ಸವ (Darshan Wedding Anniversary) ಇದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ. ನಮಗೆ ಮನವಿ ಕೊಟ್ಟಿದ್ದಾರೆ. ಸಂಜೆಯೊಳಗೆ ನಾವು ಒಂದು ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

‘ಜೈಲಿನಲ್ಲಿ ಎಲ್ಲ ಕೈದಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಸರಿಯಾಗಿ ಇರಬೇಕು. ನಡತೆ ಸರಿ ಇರುವ ಕೈದಿಗಳ ಕುಟುಂಬದವರನ್ನು ಭೇಟಿ ಮಾಡಿಸುತ್ತೇನೆ. ವಯಸ್ಸಾದ ತಂದೆ-ತಾಯಿ ಇದ್ದರೆ, ಗರ್ಭಿಣಿ ಪತ್ನಿ ಇದ್ದರೆ ಭೇಟಿ ಮಾಡಿಸುತ್ತೇವೆ. ಯಾಕೆಂದರೆ ಇಲ್ಲಿ ಎಲ್ಲರ ಮಾನಸಿಕ ಆರೋಗ್ಯ ಸರಿಯಾಗಿ ಇರಬೇಕು’ ಎಂದಿದ್ದಾರೆ ಡಿಜಿಪಿ ಅಲೋಕ್ ಕುಮಾರ್.

ಇಷ್ಟು ದಿನಗಳ ಕಾಲ ವಿಜಯಲಕ್ಷ್ಮಿ ಅವರು ಪ್ರತಿ ವಾರ ಬಂದು ದರ್ಶನ್ ಅವರನ್ನು ಭೇಟಿ ಮಾಡುತ್ತಿದ್ದರು. ಆದರೆ ಈಗ ಅವರು ಮನವಿ ಮಾಡಿರುವ ಭೇಟಿ ಯಾವ ರೀತಿ ಇರಲಿದೆ ಎಂಬ ಬಗ್ಗೆಯೂ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ‘ಸಾಮಾನ್ಯ ಭೇಟಿಯಲ್ಲಿ ಕೈದಿಗಳ ಹಾಗೂ ಕುಟುಂಬದವರ ನಡುವೆ ಗಾಜಿನ ಗೋಡೆ ಇರುತ್ತದೆ. ಇಂಟರ್​ಕಾಮ್ ಮೂಲಕ ಮಾತನಾಡಬೇಕು. ಆದರೆ ವಿಶೇಷ ಸಂದರ್ಭದಲ್ಲಿ ಆ ಗೋಡೆ ಇಲ್ಲದೇ ಮುಖಾಮುಖಿಯಾಗಿ ಭೇಟಿ ಮಾಡಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ವಯಸ್ಸಾದವರು, ಚಿಕ್ಕ ಮಕ್ಕಳು, ಗರ್ಭಿಣಿಯರು, ದಿವ್ಯಾಂಗರು ಇದ್ದಾಗ ನಾವು ಸೌಕರ್ಯ ನೀಡುತ್ತೇವೆ. ಈ ರೀತಿಯ ಭೇಟಿಯಿಂದಾಗಿ ಕೈದಿಗಳಿಗೆ ತಮ್ಮ ಅಪರಾಧದ ಬಗ್ಗೆ ಆತ್ಮಾವಲೋಕನ ಮಾಡಲು ಅವಕಾಶ ಸಿಗುತ್ತದೆ. ಮುಂದಿನ ಬದುಕನ್ನು ಅವರು ತಿದ್ದಿಕೊಳ್ಳುತ್ತಾರೆ. ಆ ಉದ್ದೇಶದಿಂದ ನಾವು ಈ ರೀತಿಯ ಭೇಟಿಯನ್ನು ಉತ್ತೇಜಿಸುತ್ತೇವೆ’ ಎಂದು ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ದರ್ಶನ್ ಅವರನ್ನು ಕ್ವಾರೆಂಟೈನ್ ಸೆಲ್​ನಲ್ಲಿ ಇಡಲಾಗಿದೆ ಎಂಬ ಆರೋಪ ಬಂದಿತ್ತು. ಅದು ತಪ್ಪು ತಿಳಿವಳಿಕೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ‘ಕೋವಿಡ್ ಸಮಯದಲ್ಲಿ ಅದು ಕ್ವಾರಂಟೈನ್ ಸೆಲ್ ಆಗಿತ್ತು. ಆದರೆ ಅದು ಹೊಸ ಕಟ್ಟಡ. ಅದನ್ನು ಎನ್​ಎಕ್ಸ್ 1 ಎಂದು ಕರೆಯಬಹುದು. ಅದನ್ನು ಕ್ವಾರಂಟೈನ್ ಸೆಲ್ ಎಂದು ಹೇಳುವುದು ಸರಿಯಲ್ಲ. ಅಲ್ಲಿ ಎಲ್ಲ ಸೌಲಭ್ಯ ಇದೆ. ಆದರೆ ಕ್ವಾರಂಟೈನ್ ಸೆಲ್ ಎಂಬ ಹೆಸರಿನ ಕಾರಣಕ್ಕೆ ಜನರಿಗೆ ತಪ್ಪು ಭಾವನೆ ಬರುತ್ತಿದೆ’ ಎಂದಿದ್ದಾರೆ ಅಲೋಕ್ ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ