AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​
ಚಿರಂಜೀವಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jan 31, 2024 | 11:26 AM

Share

ಒಂದು ಸಿನಿಮಾ ಸೂಪರ್​ ಹಿಟ್​ ಆದರೆ ಅದಕ್ಕೆ ಸೀಕ್ವೆಲ್​ ಮಾಡಲು ನಿರ್ಮಾಪಕರು ಧೈರ್ಯ ತೋರಿಸುತ್ತಾರೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಾರೆ. ಸ್ಟಾರ್​ ಕಲಾವಿದರನ್ನು ಸೀಕ್ವೆಲ್​ನ ಪಾತ್ರವರ್ಗಕ್ಕೆ ಸೇರಿಸಿಕೊಳ್ಳುವ ಆಲೋಚನೆ ಬರುತ್ತದೆ. ಸದ್ಯಕ್ಕೆ ತೇಜ ಸಜ್ಜಾ ನಟನೆಯ ಹನುಮಾನ್​’ (Hanuman) ಚಿತ್ರತಂಡ ಕೂಡ ಅದೇ ರೀತಿ ಪ್ಲ್ಯಾನ್ ಮಾಡುತ್ತಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅದಕ್ಕೆ ‘ಜೈ ಹನುಮಾನ್​’ (Jai Hanuman) ಶೀರ್ಷಿಕೆಯಲ್ಲಿ ಸೀಕ್ವೆಲ್​ ಸಿದ್ಧಪಡಿಸಲಾಗುತ್ತಿದೆ. ಈ ಸೀಕ್ವೆಲ್​ನಲ್ಲಿ ಮಹೇಶ್​ ಬಾಬು ಮತ್ತು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರು ನಟಿಸಬೇಕು ಎಂದು ನಿರ್ದೇಶಕ ಪ್ರಶಾಂತ್​ ವರ್ಮಾ ಆಸೆಪಟ್ಟಿದ್ದಾರೆ.

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಆಂಜನೇಯನ ಕೃಪೆಯಿಂದ ಸೂಪರ್​ ಪವರ್​ ಪಡೆಯುವ ಹಳ್ಳಿ ಹುಡುಗನ ಕಹಾನಿ ಈ ಸಿನಿಮಾದಲ್ಲಿ ಇದೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾದ ಸೀಕ್ವೆಲ್​ಗೆ ಸ್ಕ್ರಿಪ್ಟ್ ಪೂಜೆ; ಪ್ರಾಣ ಪ್ರತಿಷ್ಠಾಪನೆ ದಿನ ಒಳ್ಳೆಯ ಕಾರ್ಯ

ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ವರ್ಮಾ ಅವರು ಈ ಮಾತುಗಳನ್ನು ಹೇಳಿದ್ದಾರೆ. ‘ಮಹೇಶ್​ ಬಾಬು ಅವರು ಶ್ರೀರಾಮನ ಪಾತ್ರ ಮಾಡಿದರೆ ತುಂಬಾ ಚೆನ್ನಾಗಿರುತ್ತದೆ. ಅದು ನನ್ನ ಮನಸ್ಸಿನಲ್ಲಿದೆ. ನಮ್ಮ ಆಫೀಸ್​ನಲ್ಲಿ ಅವರ ಲುಕ್​ ಬಗ್ಗೆ ಕೆಲವು ಎಡಿಟ್​ಗಳನ್ನು ಮಾಡಿದ್ದೇವೆ. ಮುಂದೇನು ಆಗುತ್ತದೆಯೋ ನೋಡೋಣ’ ಎಂದು ಪ್ರಶಾಂತ್​ ವರ್ಮಾ ಹೇಳಿದ್ದಾರೆ. ‘ಹನುಮಾನ್​’ ಸಿನಿಮಾದಲ್ಲಿ ಸೂಪರ್​ ಹೀರೋ ಪಾತ್ರ ಮಾಡಿದ ತೇಜ ಸಜ್ಜಾ ಅವರು ‘ಜೈ ಹನುಮಾನ್​’ ಚಿತ್ರದ ಪ್ರಮುಖ ಪಾತ್ರದಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

ಹನುಮಂತನ ಪಾತ್ರವನ್ನು ಚಿರಂಜೀವಿ ಅವರು ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ ಪ್ರಶಾಂತ್​ ವರ್ಮಾ. ಇತ್ತೀಚೆಗೆ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು. ಆ ಬಳಿಕ ಅವರು ತುಂಬ ಬ್ಯುಸಿ ಆಗಿದ್ದಾರೆ. ಸಾಧ್ಯವಾದಾಗ ಅವರನ್ನು ಭೇಟಿ ಮಾಡುವುದಾಗಿ ಪ್ರಶಾಂತ್ ವರ್ಮಾ ಹೇಳಿದ್ದಾರೆ. ಒಂದು ವೇಳೆ ಮಹೇಶ್​ ಬಾಬು ಮತ್ತು ಚಿರಂಜೀವಿ ಅವರು ಈ ಪಾತ್ರಗಳನ್ನು ಒಪ್ಪಿಕೊಂಡರೆ ‘ಜೈ ಹನುಮಾನ್​’ ಸಿನಿಮಾದ ಸ್ಟಾರ್​ ಮೆರುಗು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ