AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​
ಚಿರಂಜೀವಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jan 31, 2024 | 11:26 AM

Share

ಒಂದು ಸಿನಿಮಾ ಸೂಪರ್​ ಹಿಟ್​ ಆದರೆ ಅದಕ್ಕೆ ಸೀಕ್ವೆಲ್​ ಮಾಡಲು ನಿರ್ಮಾಪಕರು ಧೈರ್ಯ ತೋರಿಸುತ್ತಾರೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಾರೆ. ಸ್ಟಾರ್​ ಕಲಾವಿದರನ್ನು ಸೀಕ್ವೆಲ್​ನ ಪಾತ್ರವರ್ಗಕ್ಕೆ ಸೇರಿಸಿಕೊಳ್ಳುವ ಆಲೋಚನೆ ಬರುತ್ತದೆ. ಸದ್ಯಕ್ಕೆ ತೇಜ ಸಜ್ಜಾ ನಟನೆಯ ಹನುಮಾನ್​’ (Hanuman) ಚಿತ್ರತಂಡ ಕೂಡ ಅದೇ ರೀತಿ ಪ್ಲ್ಯಾನ್ ಮಾಡುತ್ತಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅದಕ್ಕೆ ‘ಜೈ ಹನುಮಾನ್​’ (Jai Hanuman) ಶೀರ್ಷಿಕೆಯಲ್ಲಿ ಸೀಕ್ವೆಲ್​ ಸಿದ್ಧಪಡಿಸಲಾಗುತ್ತಿದೆ. ಈ ಸೀಕ್ವೆಲ್​ನಲ್ಲಿ ಮಹೇಶ್​ ಬಾಬು ಮತ್ತು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರು ನಟಿಸಬೇಕು ಎಂದು ನಿರ್ದೇಶಕ ಪ್ರಶಾಂತ್​ ವರ್ಮಾ ಆಸೆಪಟ್ಟಿದ್ದಾರೆ.

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಆಂಜನೇಯನ ಕೃಪೆಯಿಂದ ಸೂಪರ್​ ಪವರ್​ ಪಡೆಯುವ ಹಳ್ಳಿ ಹುಡುಗನ ಕಹಾನಿ ಈ ಸಿನಿಮಾದಲ್ಲಿ ಇದೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾದ ಸೀಕ್ವೆಲ್​ಗೆ ಸ್ಕ್ರಿಪ್ಟ್ ಪೂಜೆ; ಪ್ರಾಣ ಪ್ರತಿಷ್ಠಾಪನೆ ದಿನ ಒಳ್ಳೆಯ ಕಾರ್ಯ

ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ವರ್ಮಾ ಅವರು ಈ ಮಾತುಗಳನ್ನು ಹೇಳಿದ್ದಾರೆ. ‘ಮಹೇಶ್​ ಬಾಬು ಅವರು ಶ್ರೀರಾಮನ ಪಾತ್ರ ಮಾಡಿದರೆ ತುಂಬಾ ಚೆನ್ನಾಗಿರುತ್ತದೆ. ಅದು ನನ್ನ ಮನಸ್ಸಿನಲ್ಲಿದೆ. ನಮ್ಮ ಆಫೀಸ್​ನಲ್ಲಿ ಅವರ ಲುಕ್​ ಬಗ್ಗೆ ಕೆಲವು ಎಡಿಟ್​ಗಳನ್ನು ಮಾಡಿದ್ದೇವೆ. ಮುಂದೇನು ಆಗುತ್ತದೆಯೋ ನೋಡೋಣ’ ಎಂದು ಪ್ರಶಾಂತ್​ ವರ್ಮಾ ಹೇಳಿದ್ದಾರೆ. ‘ಹನುಮಾನ್​’ ಸಿನಿಮಾದಲ್ಲಿ ಸೂಪರ್​ ಹೀರೋ ಪಾತ್ರ ಮಾಡಿದ ತೇಜ ಸಜ್ಜಾ ಅವರು ‘ಜೈ ಹನುಮಾನ್​’ ಚಿತ್ರದ ಪ್ರಮುಖ ಪಾತ್ರದಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

ಹನುಮಂತನ ಪಾತ್ರವನ್ನು ಚಿರಂಜೀವಿ ಅವರು ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ ಪ್ರಶಾಂತ್​ ವರ್ಮಾ. ಇತ್ತೀಚೆಗೆ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು. ಆ ಬಳಿಕ ಅವರು ತುಂಬ ಬ್ಯುಸಿ ಆಗಿದ್ದಾರೆ. ಸಾಧ್ಯವಾದಾಗ ಅವರನ್ನು ಭೇಟಿ ಮಾಡುವುದಾಗಿ ಪ್ರಶಾಂತ್ ವರ್ಮಾ ಹೇಳಿದ್ದಾರೆ. ಒಂದು ವೇಳೆ ಮಹೇಶ್​ ಬಾಬು ಮತ್ತು ಚಿರಂಜೀವಿ ಅವರು ಈ ಪಾತ್ರಗಳನ್ನು ಒಪ್ಪಿಕೊಂಡರೆ ‘ಜೈ ಹನುಮಾನ್​’ ಸಿನಿಮಾದ ಸ್ಟಾರ್​ ಮೆರುಗು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ