AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​
ಚಿರಂಜೀವಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jan 31, 2024 | 11:26 AM

Share

ಒಂದು ಸಿನಿಮಾ ಸೂಪರ್​ ಹಿಟ್​ ಆದರೆ ಅದಕ್ಕೆ ಸೀಕ್ವೆಲ್​ ಮಾಡಲು ನಿರ್ಮಾಪಕರು ಧೈರ್ಯ ತೋರಿಸುತ್ತಾರೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಾರೆ. ಸ್ಟಾರ್​ ಕಲಾವಿದರನ್ನು ಸೀಕ್ವೆಲ್​ನ ಪಾತ್ರವರ್ಗಕ್ಕೆ ಸೇರಿಸಿಕೊಳ್ಳುವ ಆಲೋಚನೆ ಬರುತ್ತದೆ. ಸದ್ಯಕ್ಕೆ ತೇಜ ಸಜ್ಜಾ ನಟನೆಯ ಹನುಮಾನ್​’ (Hanuman) ಚಿತ್ರತಂಡ ಕೂಡ ಅದೇ ರೀತಿ ಪ್ಲ್ಯಾನ್ ಮಾಡುತ್ತಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅದಕ್ಕೆ ‘ಜೈ ಹನುಮಾನ್​’ (Jai Hanuman) ಶೀರ್ಷಿಕೆಯಲ್ಲಿ ಸೀಕ್ವೆಲ್​ ಸಿದ್ಧಪಡಿಸಲಾಗುತ್ತಿದೆ. ಈ ಸೀಕ್ವೆಲ್​ನಲ್ಲಿ ಮಹೇಶ್​ ಬಾಬು ಮತ್ತು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರು ನಟಿಸಬೇಕು ಎಂದು ನಿರ್ದೇಶಕ ಪ್ರಶಾಂತ್​ ವರ್ಮಾ ಆಸೆಪಟ್ಟಿದ್ದಾರೆ.

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಆಂಜನೇಯನ ಕೃಪೆಯಿಂದ ಸೂಪರ್​ ಪವರ್​ ಪಡೆಯುವ ಹಳ್ಳಿ ಹುಡುಗನ ಕಹಾನಿ ಈ ಸಿನಿಮಾದಲ್ಲಿ ಇದೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾದ ಸೀಕ್ವೆಲ್​ಗೆ ಸ್ಕ್ರಿಪ್ಟ್ ಪೂಜೆ; ಪ್ರಾಣ ಪ್ರತಿಷ್ಠಾಪನೆ ದಿನ ಒಳ್ಳೆಯ ಕಾರ್ಯ

ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ವರ್ಮಾ ಅವರು ಈ ಮಾತುಗಳನ್ನು ಹೇಳಿದ್ದಾರೆ. ‘ಮಹೇಶ್​ ಬಾಬು ಅವರು ಶ್ರೀರಾಮನ ಪಾತ್ರ ಮಾಡಿದರೆ ತುಂಬಾ ಚೆನ್ನಾಗಿರುತ್ತದೆ. ಅದು ನನ್ನ ಮನಸ್ಸಿನಲ್ಲಿದೆ. ನಮ್ಮ ಆಫೀಸ್​ನಲ್ಲಿ ಅವರ ಲುಕ್​ ಬಗ್ಗೆ ಕೆಲವು ಎಡಿಟ್​ಗಳನ್ನು ಮಾಡಿದ್ದೇವೆ. ಮುಂದೇನು ಆಗುತ್ತದೆಯೋ ನೋಡೋಣ’ ಎಂದು ಪ್ರಶಾಂತ್​ ವರ್ಮಾ ಹೇಳಿದ್ದಾರೆ. ‘ಹನುಮಾನ್​’ ಸಿನಿಮಾದಲ್ಲಿ ಸೂಪರ್​ ಹೀರೋ ಪಾತ್ರ ಮಾಡಿದ ತೇಜ ಸಜ್ಜಾ ಅವರು ‘ಜೈ ಹನುಮಾನ್​’ ಚಿತ್ರದ ಪ್ರಮುಖ ಪಾತ್ರದಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

ಹನುಮಂತನ ಪಾತ್ರವನ್ನು ಚಿರಂಜೀವಿ ಅವರು ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ ಪ್ರಶಾಂತ್​ ವರ್ಮಾ. ಇತ್ತೀಚೆಗೆ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು. ಆ ಬಳಿಕ ಅವರು ತುಂಬ ಬ್ಯುಸಿ ಆಗಿದ್ದಾರೆ. ಸಾಧ್ಯವಾದಾಗ ಅವರನ್ನು ಭೇಟಿ ಮಾಡುವುದಾಗಿ ಪ್ರಶಾಂತ್ ವರ್ಮಾ ಹೇಳಿದ್ದಾರೆ. ಒಂದು ವೇಳೆ ಮಹೇಶ್​ ಬಾಬು ಮತ್ತು ಚಿರಂಜೀವಿ ಅವರು ಈ ಪಾತ್ರಗಳನ್ನು ಒಪ್ಪಿಕೊಂಡರೆ ‘ಜೈ ಹನುಮಾನ್​’ ಸಿನಿಮಾದ ಸ್ಟಾರ್​ ಮೆರುಗು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ