AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​
ಚಿರಂಜೀವಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jan 31, 2024 | 11:26 AM

Share

ಒಂದು ಸಿನಿಮಾ ಸೂಪರ್​ ಹಿಟ್​ ಆದರೆ ಅದಕ್ಕೆ ಸೀಕ್ವೆಲ್​ ಮಾಡಲು ನಿರ್ಮಾಪಕರು ಧೈರ್ಯ ತೋರಿಸುತ್ತಾರೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಾರೆ. ಸ್ಟಾರ್​ ಕಲಾವಿದರನ್ನು ಸೀಕ್ವೆಲ್​ನ ಪಾತ್ರವರ್ಗಕ್ಕೆ ಸೇರಿಸಿಕೊಳ್ಳುವ ಆಲೋಚನೆ ಬರುತ್ತದೆ. ಸದ್ಯಕ್ಕೆ ತೇಜ ಸಜ್ಜಾ ನಟನೆಯ ಹನುಮಾನ್​’ (Hanuman) ಚಿತ್ರತಂಡ ಕೂಡ ಅದೇ ರೀತಿ ಪ್ಲ್ಯಾನ್ ಮಾಡುತ್ತಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅದಕ್ಕೆ ‘ಜೈ ಹನುಮಾನ್​’ (Jai Hanuman) ಶೀರ್ಷಿಕೆಯಲ್ಲಿ ಸೀಕ್ವೆಲ್​ ಸಿದ್ಧಪಡಿಸಲಾಗುತ್ತಿದೆ. ಈ ಸೀಕ್ವೆಲ್​ನಲ್ಲಿ ಮಹೇಶ್​ ಬಾಬು ಮತ್ತು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರು ನಟಿಸಬೇಕು ಎಂದು ನಿರ್ದೇಶಕ ಪ್ರಶಾಂತ್​ ವರ್ಮಾ ಆಸೆಪಟ್ಟಿದ್ದಾರೆ.

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಆಂಜನೇಯನ ಕೃಪೆಯಿಂದ ಸೂಪರ್​ ಪವರ್​ ಪಡೆಯುವ ಹಳ್ಳಿ ಹುಡುಗನ ಕಹಾನಿ ಈ ಸಿನಿಮಾದಲ್ಲಿ ಇದೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾದ ಸೀಕ್ವೆಲ್​ಗೆ ಸ್ಕ್ರಿಪ್ಟ್ ಪೂಜೆ; ಪ್ರಾಣ ಪ್ರತಿಷ್ಠಾಪನೆ ದಿನ ಒಳ್ಳೆಯ ಕಾರ್ಯ

ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ವರ್ಮಾ ಅವರು ಈ ಮಾತುಗಳನ್ನು ಹೇಳಿದ್ದಾರೆ. ‘ಮಹೇಶ್​ ಬಾಬು ಅವರು ಶ್ರೀರಾಮನ ಪಾತ್ರ ಮಾಡಿದರೆ ತುಂಬಾ ಚೆನ್ನಾಗಿರುತ್ತದೆ. ಅದು ನನ್ನ ಮನಸ್ಸಿನಲ್ಲಿದೆ. ನಮ್ಮ ಆಫೀಸ್​ನಲ್ಲಿ ಅವರ ಲುಕ್​ ಬಗ್ಗೆ ಕೆಲವು ಎಡಿಟ್​ಗಳನ್ನು ಮಾಡಿದ್ದೇವೆ. ಮುಂದೇನು ಆಗುತ್ತದೆಯೋ ನೋಡೋಣ’ ಎಂದು ಪ್ರಶಾಂತ್​ ವರ್ಮಾ ಹೇಳಿದ್ದಾರೆ. ‘ಹನುಮಾನ್​’ ಸಿನಿಮಾದಲ್ಲಿ ಸೂಪರ್​ ಹೀರೋ ಪಾತ್ರ ಮಾಡಿದ ತೇಜ ಸಜ್ಜಾ ಅವರು ‘ಜೈ ಹನುಮಾನ್​’ ಚಿತ್ರದ ಪ್ರಮುಖ ಪಾತ್ರದಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

ಹನುಮಂತನ ಪಾತ್ರವನ್ನು ಚಿರಂಜೀವಿ ಅವರು ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ ಪ್ರಶಾಂತ್​ ವರ್ಮಾ. ಇತ್ತೀಚೆಗೆ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು. ಆ ಬಳಿಕ ಅವರು ತುಂಬ ಬ್ಯುಸಿ ಆಗಿದ್ದಾರೆ. ಸಾಧ್ಯವಾದಾಗ ಅವರನ್ನು ಭೇಟಿ ಮಾಡುವುದಾಗಿ ಪ್ರಶಾಂತ್ ವರ್ಮಾ ಹೇಳಿದ್ದಾರೆ. ಒಂದು ವೇಳೆ ಮಹೇಶ್​ ಬಾಬು ಮತ್ತು ಚಿರಂಜೀವಿ ಅವರು ಈ ಪಾತ್ರಗಳನ್ನು ಒಪ್ಪಿಕೊಂಡರೆ ‘ಜೈ ಹನುಮಾನ್​’ ಸಿನಿಮಾದ ಸ್ಟಾರ್​ ಮೆರುಗು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು