AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ತೆರಳಲಿದ್ದಾರೆ ನಾಗ ಚೈತನ್ಯ-ಶೋಭಿತಾ

ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿರುವ ನಾಗ ಚೈತನ್ಯ ಹಾಗೂ ಹಾಟ್ ನಟಿ ಶೋಭಿತಾ ಧುಲಿಪಾಲ ಬಿಗ್​ಬಾಸ್​ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಮನೆ ಸದಸ್ಯರಾಗಿ ಅಲ್ಲ ಬದಲಿಗೆ ಅತಿಥಿಗಳಾಗಿ. ಅಂದಹಾಗೆ ನಾಗ ಚೈತನ್ಯ-ಶೋಭಿತಾ ಹೋಗಲಿರುವ ತೆಲುಗು ಬಿಗ್​ಬಾಸ್​ ಅನ್ನು ನಾಗ ಚೈತನ್ಯ ತಂದೆ ನಾಗಾರ್ಜುನ ನಿರೂಪಣೆ ಮಾಡುತ್ತಾರೆ. ಹಿಂದೊಮ್ಮೆ ಸಮಂತಾ ಸಹ ನಿರೂಪಣೆ ಮಾಡಿದ್ದರು.

ಬಿಗ್ ಬಾಸ್ ಮನೆಗೆ ತೆರಳಲಿದ್ದಾರೆ ನಾಗ ಚೈತನ್ಯ-ಶೋಭಿತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 04, 2024 | 3:16 PM

Share

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಅವರು ಇತ್ತೀಚೆಗೆ ಟಾಕ್ ಆಫ್ ದಿ ಟೌಟ್ ಆಗಿರೋದು ಗೊತ್ತೇ ಇದೆ. ಈ ಜೋಡಿ ಎಂಗೇಜ್ಮೆಂಟ್ ಮಾಡಿಕೊಳ್ಳುವ ಮೂಲಕ ಹಲ್ಚಲ್ ಎಬ್ಬಿಸಿತು. ಇವರ ಮದುವೆಗೆ ಫ್ಯಾನ್ಸ್ ಕಾದಿರುವಾಗಲೇ ಒಂದು ಬಿಸಿಬಿಸಿ ಸುದ್ದಿ ಹರಿದಾಡಿದೆ. ಅದೇನು ಅಂತೀರಾ? ಈ ಜೋಡಿ ಶೀಘ್ರವೇ ‘ಬಿಗ್ ಬಾಸ್ ತೆಲುಗು ಸೀಸನ್ 8’ರ ಮನೆಗೆ ಕಾಲಿಡುತ್ತಾರಂತೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಅವರು ಕಳೆದ ತಿಂಗಳು ನಿಶ್ಚಿತಾರ್ಥ ಮಾಡಿಕೊಂಡರು. ಇವರ ಲವ್ ವಿಚಾರ ಇಷ್ಟು ದಿನ ಗುಟ್ಟಾಗಿಯೇ ಇತ್ತು. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಾ ಇದ್ದರು. ಹೀಗಿರುವಾಗಲೇ ಇವರು ನಿಶ್ಚಿತಾರ್ಥ ಮಾಡಿಕೊಂಡರು. ನಾಗ ಚೈತನ್ಯ ಹಾಗೂ ಶೋಭಿತಾ ಜೋಡಿ ಬಿಗ್ ಬಾಸ್ ಮನೆಗೆ ಅತಿಥಿಗಳಾಗಿ ತೆರಳಲಿದ್ದಾರಂತೆ.

ಇದನ್ನೂ ಓದಿ:ಮದುವೆ ಹೇಗಿರಬೇಕು? ಕನಸು ರಿವೀಲ್ ಮಾಡಿದ ನಾಗ ಚೈತನ್ಯ

ವೀಕೆಂಡ್ನಲ್ಲಿ ಅತಿಥಿಗಳನ್ನು ಕರೆಸೋ ಪದ್ಧತಿ ಮೊದಲಿನಿಂದಲೂ ಬಿಗ್ ಬಾಸ್ನಲ್ಲಿ ಚಾಲ್ತಿಯಲ್ಲಿ ಇದೆ. ಈಗ ನಾಗ ಚೈತನ್ಯ ಹಾಗೂ ಶೋಭಿತಾ ಅವರು ತೆರಳಲಿದ್ದಾರಂತೆ. ಇವರು ಮನೆ ಒಳಗೇ ಹೋಗುತ್ತಾರಾ ಅಥವಾ ವೇದಿಕೆ ಮೇಲೆ ಬಂದು ಹೋಸ್ಟ್ ಅಕ್ಕಿನೇನಿ ನಾಗಾರ್ಜುನ ಜೊತೆ ಮಾತನಾಡಿ ತೆರಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ನಾಗ ಚೈತನ್ಯ ಹಾಗೂ ಶೋಭಿತಾ ಈವರೆಗೆ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಒಂದೊಮ್ಮೆ ಬಿಗ್ ಬಾಸ್ಗೆ ಅವರು ಬಂದರೆ ಸಹಜವಾಗಿಯೇ ಟಿಆರ್ಪಿ ಹೆಚ್ಚುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡೂ ಈ ರೀತಿ ಮಾಡಲಾಗಿದೆ ಎಂದು ವರದಿ ಆಗಿದೆ. ಈ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇತ್ತೀಚೆಗೆ ತೆಲುಗು ಬಿಗ್ ಬಾಸ್ ಆರಂಭ ಆಗಿದೆ. ಅಕ್ಕಿನೇನಿ ನಾಗಾರ್ಜುನ ಅವರು ಇದನ್ನು ಹೋಸ್ಟ್ ಮಾಡುತ್ತಿದ್ದಾರೆ. ವೀಕೆಂಡ್ನಲ್ಲಿ ಅವರು ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಹಲವು ಟ್ವಿಸ್ಟ್ಗಳನ್ನು ಕೂಡ ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ