AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​​ಆರ್ 2’ ಮಾಡಲ್ಲ’: ನಟರ ಕಾಟಕ್ಕೆ ಹೈರಾಣಾದ ರಾಜಮೌಳಿ

SS Rajamouli: ಈಗ ಭಾರಿ ಟ್ರೆಂಡ್​ನಲ್ಲಿರುವ ಸೀಕ್ವೆಲ್ ಸಿನಿಮಾ ಟ್ರೆಂಡ್ ಅನ್ನು ಪ್ರಾರಂಭ ಮಾಡಿದ್ದೆ ಎಸ್​ಎಸ್ ರಾಜಮೌಳಿ. ಆದರೆ ಅವರೇ ಈಗ ಅದನ್ನು ಫಾಲೋ ಮಾಡುತ್ತಿಲ್ಲ. ‘ಆರ್​ಆರ್​ಆರ್ 2’ ಸಿನಿಮಾ ಮಾಡುತ್ತೀರ ಎಂದು ಕೇಳಿದ್ದಕ್ಕೆ, ಖಂಡಿತ ಇಲ್ಲ ಎಂದಿದ್ದಾರೆ. ಆದರೆ ಅದಕ್ಕೆ ಕತೆ ಇಲ್ಲದಿರುವುದು ಕಾರಣವಲ್ಲ ಬದಲಿಗೆ ನಟರು ಕಾರಣ!

‘ಆರ್​ಆರ್​​ಆರ್ 2’ ಮಾಡಲ್ಲ’: ನಟರ ಕಾಟಕ್ಕೆ ಹೈರಾಣಾದ ರಾಜಮೌಳಿ
Movie
ಮಂಜುನಾಥ ಸಿ.
|

Updated on: May 15, 2025 | 11:03 AM

Share

ಈಗ ಬಹುತೇಕ ಸಿನಿಮಾ (Cinema) ತಂಡಗಳು ಸೀಕ್ವೆಲ್ ಮಾಡುತ್ತಿವೆ. ಇದು ಹೆಚ್ಚು ಲಾಭದಾಯಕ, ಒಂದು ಹಿಟ್ ಸಿನಿಮಾದ ಹೆಸರಿಟ್ಟುಕೊಂಡು ಎರಡು ಸಿನಿಮಾಗಳನ್ನು ಹಿಟ್ ಮಾಡಿಕೊಳ್ಳುವ ಅತಿ ಬುದ್ಧಿವಂತಿದೆ. ಆದರೆ ಈ ಟ್ರೆಂಡ್​ಗೆ ಶ್ರೀಕಾರ ಹಾಕಿದ್ದು ನಿರ್ದೇಶಕ ರಾಜಮೌಳಿ (SS Rajamouli). ‘ಬಾಹುಬಲಿ’, ‘ಬಾಹುಬಲಿ 2’ ಸಿನಿಮಾ ಮೂಲಕ ಸೀಕ್ವೆಲ್ ಟ್ರೆಂಡ್​ಗೆ ಶ್ರೀಕಾರ ಹಾಕಿದ್ದರು. ಈಗ ಎಲ್ಲರೂ ಅದನ್ನೇ ಪಾಲಿಸುತ್ತಿದ್ದಾರೆ. ‘ಬಾಹುಬಲಿ’ ಬಳಿಕ ‘ಆರ್​ಆರ್​ಆರ್’ ಸಿನಿಮಾ ಮಾಡಿದರು ರಾಜಮೌಳಿ ಆ ಸಿನಿಮಾ ಸೂಪರ್ ಹಿಟ್ ಆಯ್ತು. ಆದರೆ ಇತ್ತೀಚೆಗೆ ಆ ಸಿನಿಮಾದ ಸೀಕ್ವೆಲ್ ಮಾಡುತ್ತೀರ ಎಂದು ಕೇಳಿದ್ದಕ್ಕೆ ಯಾವ ಕಾರಣಕ್ಕೂ ಮಾಡುವುದಿಲ್ಲ ಎಂದಿದ್ದಾರೆ. ಅದಕ್ಕೆ ಕತೆ ಇಲ್ಲದಿರುವುದು ಕಾರಣವಲ್ಲ ಬದಲಿಗೆ ಸಿನಿಮಾದ ನಟರು ಕಾರಣ.

ಇತ್ತೀಚೆಗಷ್ಟೆ ಲಂಡನ್​ನಲ್ಲಿ ‘ಆರ್​ಆರ್​ಆರ್’ ಸಿನಿಮಾದ ಮ್ಯೂಸಿಕಲ್ ನೈಟ್ ನಡೆದಿತ್ತು. ಈ ಕಾರ್ಯಕ್ರಮಕ್ಕೆ ರಾಮ್ ಚರಣ್, ಜೂ ಎನ್​ಟಿಆರ್, ರಾಜಮೌಳಿ ಅವರುಗಳು ಹಾಜರಾಗಿದ್ದರು. ಕಾರ್ಯಕ್ರಮದಲ್ಲಿ ರಾಮ್ ಚರಣ್ ಪತ್ನಿ ಉಪಾಸನಾ ಮತ್ತು ಜೂ ಎನ್​ಟಿಆರ್ ಪತ್ನಿ ಲಕ್ಷ್ಮಿ ಪ್ರಣತಿ ಸಹ ಇದ್ದರು. ಕಾರ್ಯಕ್ರಮದ ಬಳಿಕ ಹೋಟೆಲ್​ ರೂಂನಲ್ಲಿ ಜೂ ಎನ್​ಟಿಆರ್, ರಾಮ್ ಚರಣ್ ಅವರುಗಳು ಯಥಾವತ್ತು ರಾಜಮೌಳಿಯವರನ್ನು ಗೋಳು ಹೊಯ್ದುಕೊಂಡರು. ಇಬ್ಬರೂ ಸೇರಿ ರಾಜಮೌಳಿಗೆ ಕಚಗುಳಿ ಇಡುತ್ತಾ ಅವರನ್ನು ಸೋಫಾ ಮೇಲೆ ಬೀಳಿಸಿ, ಸೊಂಟ ಹಿಡಿದು ಎತ್ತಿ ಗೋಳು ಹೊಯ್ದುಕೊಂಡರು.

ಈ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೋನಿಡೆಲ, ‘ಏನು ಸರ್, ಈಗ ‘ಆರ್​ಆರ್​ಆರ್ 2’ ಮಾಡುತ್ತೀರ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ರಾಜಮೌಳಿ ಖಂಡಿತ ಇಲ್ಲ’ ಇವರ ಕಾಟ ತಾಳಲು ಸಾಧ್ಯವಿಲ್ಲ ಎಂಬರ್ಥದ ಉತ್ತರ ನೀಡಿದ್ದಾರೆ. ಸಿನಿಮಾ ಸೆಟ್​ನಲ್ಲಿಯೂ ಸಹ ರಾಮ್ ಚರಣ್ ಹಾಗೂ ಜೂ ಎನ್​ಟಿಆರ್ ಪರಸ್ಪರ ತರ್ಲೆ, ತಮಾಷೆ ಮಾಡುತ್ತಲೇ ಸಮಯ ಕಳೆದಿದ್ದರು. ರಾಮ್ ಚರಣ್-ಜೂ ಎನ್​ಟಿಆರ್ ಅವರು ‘ಆರ್​ಆರ್​ಆರ್’ ಸೆಟ್​ನಲ್ಲಿ ಮಾಡಿದ ತರ್ಲೆ, ತಮಾಷೆಯ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಹರಿದಾಡುತ್ತಿವೆ.

ಇದನ್ನೂ ಓದಿ:ಅಂದು ಬಾಕ್ಸಿಂಗ್ ಚಾಂಪಿಯನ್, ಇಂದು ರಾಮ್ ಚರಣ್​ಗೆ ಬೌನ್ಸರ್; ಯಾರಿದು?

‘ಆರ್​​ಆರ್​​ಆರ್ 2’ ಸಿನಿಮಾದ ಬಗ್ಗೆ ಈ ಹಿಂದೆ ಸಿನಿಮಾದ ಕತೆಗಾರ ವಿಜಯೇಂದ್ರಪ್ರಸಾದ್ ಮಾತನಾಡಿದ್ದರು. ‘ಆರ್​​ಆರ್​ಆರ್ 2’ ಅನ್ನು ಮಾಡಬಹುದು ಬಹಳ ಕಷ್ಟದ ಕೆಲಸ ಏನಲ್ಲ. ಕೋಮರಂ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಪಾತ್ರವನ್ನು ಇನ್ನೊಂದು ರೆಸ್ಕ್ಯೂ ಆಪರೇಷನ್​ಗೆ ಹೊರ ದೇಶಕ್ಕೆ ಕಳಿಸಬಹುದು ಎಂದು ಕತೆಯ ಎಳೆಯನ್ನು ಅವರು ನೀಡಿದ್ದರು. ಆದರೆ ‘ಆರ್​ಆರ್​​ಆರ್ 2’ ನಿರ್ಮಾಣ ಮಾಡಲಾಗುತ್ತಿಲ್ಲ, ಪ್ರಸ್ತುತ ರಾಜಮೌಳಿ ಮಹೇಶ್ ಬಾಬು ಜೊತೆಗಿನ ಸಿನಿಮಾನಲ್ಲಿ ಬ್ಯುಸಿಯಾಗಿದ್ದಾರೆ. ಆ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ