AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ತೆರೆಯ ಮೇಲೆ ಮತ್ತೆ ಒಂದಾಗಲಿದ್ದಾರೆ ಚೈ- ಸ್ಯಾಮ್’; ಸಮಂತಾ- ನಾಗ ಚೈತನ್ಯ ಕುರಿತ ಈ ಸುದ್ದಿಯ ಅಸಲಿಯತ್ತೇನು?

Naga Chaitanya: ನಾಗ ಚೈತನ್ಯ ಹಾಗೂ ಸಮಂತಾ ವೈಯಕ್ತಿಕ ಕಾರಣಗಳಿಂದ ಬೇರೆಯಾಗಿದ್ದಾರೆ. ಈರ್ವರೂ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ. ಹೊಸ ಚಿತ್ರವೊಂದರಲ್ಲಿ ಈರ್ವರೂ ಜತೆಯಾಗಿ ತೆರೆಹಂಚಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದರ ಅಸಲಿಯತ್ತೇನು? ಇಲ್ಲಿದೆ ನೋಡಿ.

Samantha: ‘ತೆರೆಯ ಮೇಲೆ ಮತ್ತೆ ಒಂದಾಗಲಿದ್ದಾರೆ ಚೈ- ಸ್ಯಾಮ್’; ಸಮಂತಾ- ನಾಗ ಚೈತನ್ಯ ಕುರಿತ ಈ ಸುದ್ದಿಯ ಅಸಲಿಯತ್ತೇನು?
ಸಮಂತಾ, ನಾಗ ಚೈತನ್ಯ
TV9 Web
| Edited By: |

Updated on: Apr 05, 2022 | 9:39 AM

Share

ಸಮಂತಾ (Samantha) ಹಾಗೂ ನಾಗ ಚೈತನ್ಯ (Naga Chaitanya) ಟಾಲಿವುಡ್​ನ ಸ್ಟಾರ್ ಜೋಡಿಯಾಗಿದ್ದವರು. ಆದರೆ ವೈಯಕ್ತಿಕ ಕಾರಣಗಳಿಂದ ಈರ್ವರೂ 4 ವರ್ಷಗಳ ದಾಂಪತ್ಯ ಜೀವನವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದ್ದರು. ಇದೀಗ ಈರ್ವರೂ ತಮ್ಮ ತಮ್ಮ ವೈಯಕ್ತಿಕ ಬದುಕಿನಲ್ಲಿ ಮುಳುಗಿಹೋಗಿದ್ದಾರೆ. ಆದರೆ ಅಭಿಮಾನಿ ವಲಯದಲ್ಲಿ ಹೊಸ ಸುದ್ದಿ ಹರಡಿದ್ದು, ತೀವ್ರ ಸಂಚಲನ ಸೃಷ್ಟಿಸಿದೆ. ಕೆಲವು ವರದಿಗಳ ಪ್ರಕಾರ ಸ್ಯಾಮ್ ಹಾಗೂ ಚೈ ಮತ್ತೆ ಒಟ್ಟಾಗಿ ತೆರೆಯ ಮೇಲೆ ನಟಿಸಲಿದ್ದಾರಂತೆ. ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈರ್ವರೂ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂದು ಕೆಲವು ವರದಿಗಳಲ್ಲಿ ಹೇಳಲಾಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ಜೋಡಿ ಮತ್ತೆ ಒಂದಾಗುತ್ತಾರೆ ಎಂಬ ಸುದ್ದಿ ಕೇಳಿ ಥ್ರಿಲ್ ಆಗಿದ್ದರು. ಆದರೆ ಇದರ ಅಸಲಿಯತ್ತೇನು? ನಿಜವಾಗಿಯೂ ಸಮಂತಾ ಹಾಗೂ ನಾಗ ಚೈತನ್ಯ ಜತೆಯಾಗಿ ನಟಿಸುತ್ತಾರಾ? ಎಂಬ ಪ್ರಶ್ನೆಗಳಿಗೆ ಇದೀಗ ಉತ್ತರ ಲಭಿಸಿದೆ.

ವಿಚ್ಛೇದನ ಘೋಷಿಸಿದ ನಂತರ ಸಮಂತಾ ಮೊದಲಿಗಿಂತಲೂ ಭಿನ್ನ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಪುಷ್ಪ: ದಿ ರೈಸ್’ ಚಿತ್ರದ ಐಟಂ ಸಾಂಗ್​ನಲ್ಲಿ ನಟಿ ಹೆಜ್ಜೆಹಾಕಿದ್ದರು. ಇದು ಅವರಿಗೆ ಅಪಾರ ಖ್ಯಾತಿ ತಂದುಕೊಟ್ಟಿತ್ತು. ಇದಲ್ಲದೇ ನಟಿ ಮತ್ತೊಂದು ವೆಬ್​ ಸೀರೀಸ್​ನಲ್ಲಿ ನಟಿಸುತ್ತಿದ್ದಾರೆ. ಇಂಗ್ಲೀಷ್ ಚಿತ್ರವೊಂದರಲ್ಲೂ ನಟಿ ಬಣ್ಣಹಚ್ಚಲಿದ್ದಾರೆ.

ಇತ್ತ ನಾಗ ಚೈತನ್ಯ ಬಾಲಿವುಡ್ ಪ್ರವೇಶಕ್ಕೆ ಅಣಿಯಾಗಿದ್ದಾರೆ. ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಛಡ್ಡಾ’ದಲ್ಲಿ ನಾಗ ಚೈತನ್ಯ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಮೂಲಕ ಅವರಿಗೆ ಬಿಟೌನ್​ನಲ್ಲಿ ಮತ್ತಷ್ಟು ಅವಕಾಶಗಳು ಹುಡುಕಿಕೊಂಡು ಬರುವ ನಿರೀಕ್ಷೆಗಳಿವೆ. ಟಾಲಿವುಡ್​ನಲ್ಲೂ ನಾಗ ಚೈತನ್ಯ ಸಖತ್ ಬ್ಯುಸಿಯಾಗಿದ್ದಾರೆ.

ಸಮಂತಾ- ನಾಗ ಚೈತನ್ಯ ಹೊಸ ಚಿತ್ರದಲ್ಲಿ ಜತೆಯಾಗಿ ನಟಿಸುತ್ತಾರಾ?

ಈ ನಡುವೆ ಸಮಂತಾ ಹಾಗೂ ನಾಗ ಚೈತನ್ಯ ಮತ್ತೆ ಜತೆಯಾಗಿ ಬಣ್ಣಹಚ್ಚಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಟಾಲಿವುಡ್​ನಲ್ಲಿ ನಂದಿನಿ ರೆಡ್ಡಿ ಜನಪ್ರಿಯ ನಿರ್ದೇಶಕಿಯರಲ್ಲೊಬ್ಬರು. ಸಮಂತಾ ಹಾಗೂ ನಾಗ ಚೈತನ್ಯಗೆ ಅವರು ಆಪ್ತರು. ಈ ಹಿಂದೆ ನಂದಿನಿ ರೆಡ್ಡಿ ನಿರ್ದೇಶಿಸಿದ್ದ ‘ಓಹ್ ಬೇಬಿ’ ದೊಡ್ಡ ಹಿಟ್ ಆಗಿತ್ತು. ಅದರಲ್ಲಿ ಸಮಂತಾ ಕಾಣಿಸಿಕೊಂಡಿದ್ದರು. ಆ ಚಿತ್ರದ ಸಂದರ್ಭದಲ್ಲೇ ನಾಗ ಚೈತನ್ಯ ಹಾಗೂ ಸಮಂತಾಗೆ ಕತೆಯೊಂದನ್ನು ನಂದಿನಿ ಹೇಳಿದ್ದರಂತೆ. ಹೊಸ ಕತೆಗೆ ಸಂಬಂಧಪಟ್ಟಂತೆ ಸಮಂತಾ ಹಾಗೂ ನಾಗ ಚೈತನ್ಯರನ್ನು ತೆರೆಯತ ಮೇಲೆ ಒಂದಾಗಿಸಲು ನಂದಿನಿ ರೆಡ್ಡಿ ಪ್ರಯತ್ನಿಸುತ್ತಿದ್ದಾರೆ ಎಂದು ಹಲವು ವರದಿಗಳು ಹೇಳಿದ್ದವು.

ಆದರೆ ಈ ವರದಿಗಳ ಅಸಲಿಯತ್ತೇನು ಎಂಬುದು ಚರ್ಚೆಯಾಗುತ್ತಿದೆ. ಕಾರಣ, ಸ್ಯಾಮ್​ಗೆ ಆಪ್ತರಾಗಿರುವ ನಂದಿನಿ ರೆಡ್ಡಿ ಮತ್ತೆ ಸಮಂತಾ ಹಾಗೂ ನಾಗ ಚೈತನ್ಯರನ್ನು ತೆರೆಯ ಮೇಲೆ ತರುವುದು ಅನುಮಾನ. ಕಾರಣ, ಸಮಂತಾಗೆ ಮುಜುಗರ ಉಂಟಾಗುವ ಯಾವ ಸಂದರ್ಭಗಳಿಗೂ ನಂದಿನಿ ರೆಡ್ಡಿ ಕಾರಣರಾಗುವುದಿಲ್ಲ. ಹೀಗಾಗಿ ಹೊಸ ಕತೆಗೆ ನಾಗ ಚೈತನ್ಯರಿಗೆ ಹೊಸ ನಾಯಕಿಯನ್ನು ನಂದಿನಿ ಹುಡುಕಬಹುದು. ಈಗಾಗಲೇ ಅವರು ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಂದಿನಿ ರೆಡ್ಡಿ ಹೊಸ ಚಿತ್ರದ ಬಗ್ಗೆ ಹಾಗೂ ಪಾತ್ರದ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಗಳು ಆಗಬೇಕಿದೆ. ಹೀಗಾಗಿ ಸದ್ಯಕ್ಕಂತೂ ಸ್ಯಾಮ್ ಹಾಗೂ ನಾಗ ಚೈತನ್ಯ ತೆರೆಯ ಮೇಲೆ ಒಂದಾಗುವುದು ಕಷ್ಟ ಎನ್ನುತ್ತಿವೆ ವರದಿಗಳು.

ಇದನ್ನೂ ಓದಿ: Rashmika Mandanna: ಪಡ್ಡೆ ಹುಡುಗರ ನಿದ್ದೆಗೆಡಿಸುವ ರಶ್ಮಿಕಾ ಮಂದಣ್ಣ; ಇಲ್ಲಿವೆ ನಟಿಯ ಬೋಲ್ಡ್ ಫೋಟೋಗಳು

Shriya Saran: ಸಾಂಪ್ರದಾಯಿಕ ಗೆಟಪ್​ನಲ್ಲಿ ‘ಕಬ್ಜ’ ಬೆಡಗಿ ಶ್ರಿಯಾ ಶರಣ್; ಇಲ್ಲಿದೆ ಫೋಟೋ ಆಲ್ಬಂ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್