ಅಟ್ಲಿ ಜೊತೆಗಿನ ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ರುತ್​ ಪ್ರಭು ನಾಯಕಿ?

ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರಿಗೆ ಹತ್ತು ಹಲವು ಆಫರ್​ಗಳು ಬರುತ್ತಿವೆ. ಪ್ಯಾನ್​ ಇಂಡಿಯಾ ಡೈರೆಕ್ಟರ್​ ಅಟ್ಲಿ ನಿರ್ದೇಶನ ಮಾಡಲಿರುವ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ಸಮಂತಾ ರುತ್​ ಪ್ರಭು ಅವರು ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ. ಸಮಂತಾ ಬಗ್ಗೆ ಈ ರೀತಿ ಅಂತೆ-ಕಂತೆಗಳು ಹಬ್ಬಲು ಒಂದಷ್ಟು ಕಾರಣಗಳಿವೆ.

ಅಟ್ಲಿ ಜೊತೆಗಿನ ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ರುತ್​ ಪ್ರಭು ನಾಯಕಿ?
ಅಟ್ಲಿ, ಸಮಂತಾ ರುತ್​ ಪ್ರಭು, ಅಲ್ಲು ಅರ್ಜುನ್​
Follow us
|

Updated on: Apr 01, 2024 | 9:02 PM

ನಟ ಅಲ್ಲು ಅರ್ಜುನ್ (Allu Arjun) ಅವರ ಮುಂದಿನ ಪ್ರಾಜೆಕ್ಟ್​ಗಳ ಬಗ್ಗೆ ಹತ್ತಾರು ಗಾಸಿಪ್​ಗಳು ಕೇಳಿಬರುತ್ತಿವೆ. ಈಗ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ವಿಶೇಷ ಹಾಡಿನಲ್ಲಿ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಕುಣಿಯುವ ಸಾಧ್ಯತೆ ಇದೆ ಎಂದು ಕೇಳಲಾಗುತ್ತಿದೆ. ಈ ಬಗ್ಗೆ ಈಗಾಗಲೇ ವದಂತಿಗಳು ಹಬ್ಬಿವೆ. ಅದರ ಜೊತೆಗೆ, ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ (Atlee) ಅವರ ಕಾಂಬಿನೇಷನ್​ನಲ್ಲಿ ಬರಲಿರುವ ಹೊಸ ಸಿನಿಮಾದಲ್ಲಿ ನಾಯಕಿ ಪಾತ್ರ ಮಾಡಲು ಸಮಂತಾ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂದು ಗಾಸಿಪ್​ ಹಬ್ಬಿದೆ. ಅದಕ್ಕೆ ಕಾರಣ ಕೂಡ ಇದೆ.

ಅಟ್ಲಿ ಮತ್ತು ಅಲ್ಲು ಅರ್ಜುನ್​ ಅವರ ಸಿನಿಮಾವನ್ನು ‘AAA’ ಎಂದು ಕರೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಅಲ್ಲು ಅರ್ಜುನ್​ ಅವರ ಎಲ್ಲ ಪ್ರಾಜೆಕ್ಟ್‌ಗಳಿಗೆ ಸಂಬಂಧಿಸಿದಂತೆ ಸಮಂತಾ ರುತ್​ ಪ್ರಭು ಅವರ ಹೆಸರು ಯಾಕೆ ತಳುಕು ಹಾಕಿಕೊಳ್ಳುತ್ತಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಅದಕ್ಕೆ ಉತ್ತರ ಸಿಂಪಲ್​. ಇತ್ತೀಚೆಗೆ ಅಲ್ಲು ಅರ್ಜುನ್​ ಏನೇ ಮಾಡಿದರೂ ಅವರಿಗೆ ಸಮಂತಾ ವಿಶ್​ ಮಾಡುತ್ತಿದ್ದಾರೆ. ಗಾಸಿಪ್​ ಹಬ್ಬಲು ಇದು ಮೊದಲ ಕಾರಣ.

ಚಿತ್ರರಂಗದಲ್ಲಿ ಈ ರೀತಿ ಪರಸ್ಪರ ವಿಶ್​ ಮಾಡಿಕೊಂಡರೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಗುಮಾನಿ ಮೂಡುತ್ತದೆ. ಕೆಲವೇ ದಿನಗಳ ಹಿಂದೆ ದುಬೈನಲ್ಲಿ ಅಲ್ಲು ಅರ್ಜುನ್​ ಅವರ ಮೇಣದ ಪ್ರತಿಮೆ ಅನಾವರಣ ಆಯಿತು. ಆಗ ಅಲ್ಲು ಅರ್ಜುನ್‌ಗೆ ಸಮಂತಾ ಶುಭ ಹಾರೈಸಿದರು. ಹಾಗಾಗಿ ಅವರಿಬ್ಬರು ಮತ್ತೆ ಜೊತೆಯಾಗಿ ತೆರೆ ಹಂಚಿಕೊಳ್ಳಲಿದ್ದಾರೆ ಎಂದು ನೆಟ್ಟಿಗರು ಊಹಿಸಲು ಆರಂಭಿಸಿದರು.

ಇದನ್ನೂ ಓದಿ: ‘ಆ ಡ್ಯಾನ್ಸ್​ ಮಾಡುವಾಗ ಕಂಫರ್ಟ್​ ಇರಲಿಲ್ಲ’: ಈಗ ಬಾಯ್ಬಿಟ್ಟ ಸಮಂತಾ

ಇಲ್ಲಿ, ಇನ್ನೊಂದು ಇಂಟರೆಸ್ಟಿಂಗ್​ ಸಂಗತಿ ಇದೆ. ನಿರ್ದೇಶಕ ಅಟ್ಲಿ ಅವರು ಯಾವಾಗ ಹೊಸ ಸಿನಿಮಾ ಅನೌನ್ಸ್​ ಮಾಡಿದರೂ ಅದಕ್ಕೆ ಸಮಂತಾ ನಾಯಕಿ ಎಂಬ ಗಾಸಿಪ್​ ಹುಟ್ಟಿಕೊಳ್ಳುತ್ತದೆ. ಯಾಕೆಂದರೆ, ಅಟ್ಲಿ ಮತ್ತು ಸಮಂತಾ ಅವರು ‘ಥೇರಿ’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಬಾಲಿವುಡ್​​ನಲ್ಲಿ ಅಟ್ಲಿ ಮೊದಲ ಬಾರಿ ಆ್ಯಕ್ಷನ್​-ಕಟ್​ ಹೇಳಿದ ‘ಜವಾನ್​’ ಸಿನಿಮಾಗೂ ಸಮಂತಾ ನಾಯಕಿ ಆಗುತ್ತಾರೆ ಎಂಬ ಗಾಸಿಪ್​ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಈಗ ಅಲ್ಲು ಅರ್ಜುನ್​ ಮತ್ತು ಅಟ್ಲಿ ಕಾಂಬಿನೇಷನ್​ನ ಸಿನಿಮಾ ವಿಚಾರದಲ್ಲಿ ಸಮಂತಾ ಹೆಸರು ಕೇಳಿಬರುತ್ತಿದೆ. ಚಿತ್ರತಂಡದಿಂದ ಅಧಿಕೃತ ಹೇಳಿಕೆ ಹೊರಬೀಳುವ ತನಕ ಯಾವುದೂ ಖಚಿತವಲ್ಲ.

ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಮಾಜಿ ದಂಪತಿ ಸಮಂತಾ-ನಾಗ ಚೈತನ್ಯ? ಆದರೆ ಒಂದು ಟ್ವಿಸ್ಟ್​

ಇನ್ನೊಂದು ವಿಚಾರ ಏನೆಂದರೆ, ‘ಪುಷ್ಪ’ ಸಿನಿಮಾದಲ್ಲಿ ‘ಉ ಅಂಟಾವ ಮಾವ..’ ಹಾಡು ಸೂಪರ್ ಹಿಟ್ ಆಗಿತ್ತು. ಅದರಲ್ಲಿ ಸಮಂತಾ-ಅಲ್ಲು ಅರ್ಜುನ್​ ಅವರು ಬಿಂದಾಸ್​ ಆಗಿ ಹೆಜ್ಜೆ ಹಾಕಿ ಯಶಸ್ಸು ಕಂಡಿದ್ದರು. ಆ ಖ್ಯಾತಿಯನ್ನು ಮತ್ತೆ ಎನ್​ಕ್ಯಾಶ್​ ಮಾಡಿಕೊಳ್ಳಲು ‘ಪುಷ್ಪ 2’ ಸಿನಿಮಾದಲ್ಲೂ ಸಮಂತಾ ಅವರ ಐಟಂ ಡ್ಯಾನ್ಸ್​ ಇಡಲು ನಿರ್ದೇಶಕ ಸುಕುಮಾರ್ ಆಲೋಚಿಸಿರಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!