ಮೋದಿ ಪಾತ್ರದಲ್ಲಿ ಕಟ್ಟಪ್ಪ ಅಲಿಯಾಸ್ ಸತ್ಯರಾಜ್​? ಬರಲಿದೆ ಹೊಸ ಬಯೋಪಿಕ್​

|

Updated on: May 20, 2024 | 10:55 PM

ಮತ್ತೊಮ್ಮೆ ನರೇಂದ್ರ ಮೋದಿ ಅವರ ಜೀವನದ ಕುರಿತು ಸಿನಿಮಾ ಮಾಡಲು ಸಿದ್ಧತೆ ನಡೆದಿದೆ. ಈ ಬಾರಿ ಮೋದಿ ಪಾತ್ರವನ್ನು ಖ್ಯಾತ ನಟ ಸತ್ಯರಾಜ್​ ಅವರು ಮಾಡಲಿದ್ದಾರೆ ಎನ್ನಲಾಗಿದೆ. ಕಟ್ಟಪ್ಪನ ಪಾತ್ರದಲ್ಲಿ ಮಿಂಚಿದ ಅವರು ಈಗ ನರೇಂದ್ರ ಮೋದಿಯ ಪಾತ್ರವನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ.

ಮೋದಿ ಪಾತ್ರದಲ್ಲಿ ಕಟ್ಟಪ್ಪ ಅಲಿಯಾಸ್ ಸತ್ಯರಾಜ್​? ಬರಲಿದೆ ಹೊಸ ಬಯೋಪಿಕ್​
ನರೇಂದ್ರ ಮೋದಿ, ಸತ್ಯರಾಜ್​
Follow us on

ನರೇಂದ್ರ ಮೋದಿ (Narendra Modi) ಅವರ ಜೀವನದ ಕುರಿತು ಈಗಾಗಲೇ ಸಿನಿಮಾ ಬಂದಿದೆ. ಆದರೆ ಆ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಾಣಲಿಲ್ಲ. ಈಗ ಮತ್ತೊಮ್ಮೆ ನರೇಂದ್ರ ಮೋದಿ ಬಯೋಪಿಕ್​ (Narendra Modi Biopic) ಮಾಡಲು ತಯಾರಿ ನಡೆದಿದೆ. ಆ ಸಿನಿಮಾಗೆ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ಕೂಡ ಚಾಲ್ತಿಯಲ್ಲಿದೆ. ವರದಿಗಳ ಪ್ರಕಾರ ಸತ್ಯರಾಜ್​ ಅವರು ನರೇಂದ್ರ ಮೋದಿಯ ಪಾತ್ರವನ್ನು ನಿಭಾಯಿಸಲಿದ್ದಾರೆ. ‘ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪನ ಪಾತ್ರ ಮಾಡುವ ಮೂಲಕ ಸತ್ಯರಾಜ್​ (Sathyaraj) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಪಡೆದಿದ್ದರು. ಈಗ ಅವರಿಗೆ ದೊಡ್ಡ ಆಫರ್​ ನೀಡಲಾಗಿದೆ ಎಂಬ ಸುದ್ದಿ ಹರಡಿದೆ.

ವಿವೇಕ್ ಒಬೆರಾಯ್​ ನಟಿಸಿದ ‘ಪಿಎಂ ನರೇಂದ್ರ ಮೋದಿ’ ಸಿನಿಮಾ 2019ರಲ್ಲಿ ಬಿಡುಗಡೆ ಆಗಿತ್ತು. ಆ ಚಿತ್ರದಲ್ಲಿ ವಿವೇಕ್​ ಒಬೆರಾಯ್​ ಅವರು ಮೋದಿಯ ಪಾತ್ರ ಮಾಡಿದ್ದರು. ವಿವೇಕ್​ ಒಬೆರಾಯ್ ಅವರ ಲುಕ್​ ಸರಿ ಇರಲಿಲ್ಲ ಹಾಗೂ ಅವರ ನಟನೆ ಕೂಡ ಚೆನ್ನಾಗಿಲ್ಲ ಎಂದು ಪ್ರೇಕ್ಷಕರು ಆ ಸಿನಿಮಾವನ್ನು ತಿರಸ್ಕರಿಸಿದ್ದರು. ಈಗ ಮತ್ತೆ ನರೇಂದ್ರ ಮೋದಿ ಅವರ ಜೀವನಾಧಾರಿತ ಸಿನಿಮಾವನ್ನು ನಿರ್ಮಿಸಲಾಗುತ್ತಿದೆ.

ಸತ್ಯರಾಜ್​ ಅವರು ನರೇಂದ್ರ ಮೋದಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರೆ ಎಂದು ಹೇಳಲಾಗುತ್ತಿದೆಯಾದರೂ ಈ ಬಗ್ಗೆ ಚಿತ್ರತಂಡದ ಯಾರಿಂದಲೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಹಾಗಾಗಿ ಈ ಸುದ್ದಿ ಸದ್ಯಕ್ಕೆ ಅಂತೆ-ಕಂತೆಗಳ ಹಂತದಲ್ಲೇ ಹರಿದಾಡುತ್ತಿದೆ. ಈ ಸಿನಿಮಾಗೆ ನಿರ್ದೇಶನ ಮಾಡುವವರು ಯಾರು? ನಿರ್ಮಾಣದ ಹೊಣೆಯನ್ನು ಯಾರು ಹೊತ್ತುಕೊಂಡಿದ್ದಾರೆ ಎಂಬಿತ್ಯಾದಿ ಮಾಹಿತಿಗಳು ಕೂಡ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನೂ ಓದಿ: ‘ಬಾಹುಬಲಿ’ ಹೊಸ ಕಥೆ; ‘ಕ್ರೌನ್​ ಆಫ್​ ಬ್ಲಡ್​’ ಟ್ರೇಲರ್​ನಲ್ಲಿದೆ ಝಲಕ್​

ಬಹುಭಾಷೆಯ ಸಿನಿಮಾಗಳಲ್ಲಿ ನಟಿಸಿ ಸತ್ಯರಾಜ್​ ಅವರು ಫೇಮಸ್​ ಆಗಿದ್ದಾರೆ. ‘ಬಾಹುಬಲಿ’ ಸಿನಿಮಾದಿಂದ ಅವರು ಹೆಚ್ಚು ಫೇಮಸ್​ ಆದರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಒಂದು ವೇಳೆ ಅವರಿಗೆ ಮೋದಿ ಪಾತ್ರವನ್ನು ಮಾಡುವ ಅವಕಾಶ ಸಿಕ್ಕಿದ್ದು ಹೌದಾದರೆ ಅದನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಮೊದಲ ಪೆರಿಯಾರ್​ ಇವಿ ರಾಮಸ್ವಾಮಿ ಅವರ ಪಾತ್ರವನ್ನು ಮಾಡಿ ಸತ್ಯರಾಜ್​ ಸೈ ಎನಿಸಿಕೊಂಡಿದ್ದರು. ಆ ಪಾತ್ರಕ್ಕಾಗಿ ಅವರು ತಮಿಳುನಾಡು ಸರ್ಕಾರದ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:48 am, Sun, 19 May 24