AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಲ್ ಸ್ಮಿತ್​ ಒಳ್ಳೆಯ ವ್ಯಕ್ತಿ’; ಸಂಗೀತ ನಿರ್ದೇಶಕ ಎ.ಆರ್​​. ರೆಹಮಾನ್ ಮೆಚ್ಚುಗೆಯ ಮಾತು

ವಿಲ್​ ಸ್ಮಿತ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ರೆಹಮಾನ್. ಇಬ್ಬರೂ ಒಮ್ಮೆ ಭೇಟಿ ಆಗಿದ್ದರು. ಆ ಸಂದರ್ಭದಲ್ಲಿ ಅವರು ವಿಲ್​ ಸ್ಮಿತ್​ ಜತೆ  ಫೋಟೋ ತೆಗೆಸಿಕೊಂಡಿದ್ದರು.

‘ವಿಲ್ ಸ್ಮಿತ್​ ಒಳ್ಳೆಯ ವ್ಯಕ್ತಿ’; ಸಂಗೀತ ನಿರ್ದೇಶಕ ಎ.ಆರ್​​. ರೆಹಮಾನ್ ಮೆಚ್ಚುಗೆಯ ಮಾತು
ವಿಲ್ ಸ್ಮಿತ್-ರೆಹಮಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 26, 2022 | 6:04 PM

Share

ನಟ ವಿಲ್​ ಸ್ಮಿತ್  (Will Smith) ಅವರು ಸಖತ್ ಸುದ್ದಿಯಲ್ಲಿದ್ದಾರೆ. ಅವರು ಇತ್ತೀಚೆಗೆ ವಿವಾದವನ್ನು ಮೈಮೇಲೆ ಎಳೆದುಕೊಂಡರು. ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ಹಾಸ್ಯ ನಟ ಕ್ರಿಸ್ ರಾಕ್ (Chris Rock)​ ಕೆನ್ನೆಗೆ ಹೊಡೆದಿದ್ದರು. ಈ ಮೂಲಕ ಅವರು 10 ವರ್ಷಗಳ ಕಾಲ ಅಕಾಡೆಮಿಯಿಂದ ಬ್ಯಾನ್ ಆಗಿದ್ದಾರೆ. ಈ ಘಟನೆ ವಿಲ್ ಸ್ಮಿತ್ ಅವರ ವೃತ್ತಿ ಜೀವನಕ್ಕೆ ದೊಡ್ಡ ಕಪ್ಪು ಚುಕ್ಕೆ. ವಿಲ್ ಸ್ಮಿತ್​ ಅವರು ನಡೆದುಕೊಂಡ ರೀತಿ ಸರಿ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಅದೇ ರೀತಿ ಈ ಒಂದು ಘಟನೆಯಿಂದ ವಿಲ್​ ಸ್ಮಿತ್ ಬಗ್ಗೆ ಈ ರೀತಿಯ ನಿರ್ಧಾರಕ್ಕೆ ಬರೋದು ಸರಿ ಅಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ. ಈಗ ವಿಲ್​ ಸ್ಮಿತ್ ಬಗ್ಗೆ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಹೇಳಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಸ್ಲಮ್​ಡಾಗ್​ ಮಿಲಿಯನೇರ್’​ ಸಿನಿಮಾಗಾಗಿ ರೆಹಮಾನ್​ಗೆ ಎರಡು ಅಕಾಡೆಮಿ ಅವಾರ್ಡ್ಸ್ ಬಂದಿದೆ. ಇದು ಅವರ ಪಾಲಿಗೆ ನಿಜಕ್ಕೂ ವಿಶೇಷವಾಗಿದೆ. ವಿಲ್​ ಸ್ಮಿತ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ರೆಹಮಾನ್. ಇಬ್ಬರೂ ಒಮ್ಮೆ ಭೇಟಿ ಆಗಿದ್ದರು. ಆ ಸಂದರ್ಭದಲ್ಲಿ ಅವರು ವಿಲ್​ ಸ್ಮಿತ್​ ಜತೆ  ಫೋಟೋ ತೆಗೆಸಿಕೊಂಡಿದ್ದರು. ಈ ವಿಚಾರದ ಬಗ್ಗೆ ರೆಹಮಾನ್ ಅವರು ‘ದಿ ಕಪಿಲ್ ಶರ್ಮಾ ಶೋ’ ಕಾರ್ಯಕ್ರಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ವಿಲ್​ ಸ್ಮಿತ್​ಗೆ ಒಳ್ಳೆಯ ಹೃದಯ ಇದೆ. ಅವರು ಒಳ್ಳೆಯ ವ್ಯಕ್ತಿ. ಕೆಲವೊಮ್ಮೆ ಈ ರೀತಿಯ ಘಟನೆಗಳು ನಡೆಯುತ್ತವೆ’ ಎಂದು ಹೇಳಿದ್ದಾರೆ ರೆಹಮಾನ್.

ಏಪ್ರಿಲ್​ 23ರಂದು ವಿಲ್​ ಸ್ಮಿತ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ನಗುನಗುತ್ತಾ ಕಾರಿನಿಂದ ಇಳಿಯುತ್ತಿರುವ ಫೋಟೋ ವೈರಲ್ ಆಗಿತ್ತು . ಅವರು ಭಾರತಕ್ಕೆ ಬಂದಿದ್ದು ಏಕೆ ಎನ್ನುವ ವಿಚಾರ ಹೊರಬಿದ್ದಿಲ್ಲ.

ವಿಲ್ ಸ್ಮಿತ್ ಭಾರತಕ್ಕೆ ಬಂದಿದ್ದು ಇದೇ ಮೊದಲೇನಲ್ಲ. 2019ರಲ್ಲಿ ವಿಲ್​ ಸ್ಮಿತ್ ಅವರು ಹರಿದ್ವಾರಕ್ಕೆ ಭೇಟಿ ನೀಡಿದ್ದರು. ‘ಫೇಸ್​ಬುಕ್ ವಾಚ್ ಸೀರಿಸ್’ ಉದ್ದೇಶದಿಂದ ಅವರು ಇಲ್ಲಿಗೇ ಭೇಟಿ ನೀಡಿದ್ದರು. ‘ದೇವರು ಅನುಭವದ ಮೂಲಕ ಕಲಿಸುತ್ತಾನೆ ಎಂದು ನನ್ನ ಅಜ್ಜಿ ಯಾವಾಗಲೂ ಹೇಳುತ್ತಿದ್ದರು. ಭಾರತಕ್ಕೆ ಭೇಟಿ ನೀಡುವುದು ಮತ್ತು ಇಲ್ಲಿನ ಬಣ್ಣಗಳು, ಜನರು ಮತ್ತು ನೈಸರ್ಗಿಕ ಸೌಂದರ್ಯವನ್ನು ಅನುಭವಿಸುವುದರಿಂದ ನನ್ನ, ನನ್ನ ಕಲೆಯ ಹೊಸ ತಿಳುವಳಿಕೆಯು ಜಾಗೃತಗೊಂಡಿದೆ ಎಂದು’ ಅವರು ಹೇಳಿದ್ದರು. ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದಲ್ಲಿ ಅವರು ಅತಿಥಿ ಮಾಡಿದ್ದರು. ಇದರ ಶೂಟಿಂಗ್​ಗಾಗಿ ಅವರು ಮುಂಬೈಗೆ ಬಂದಿದ್ದರು. ಭಾರತದ ಹಲವು ಸ್ಟಾರ್​ಗಳು ವಿಲ್ ಸ್ಮಿತ್ ಜತೆ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ವಿವಾದದ ಬಳಿಕ ಈ ಫೋಟೋಗಳು ವೈರಲ್ ಆಗಿದ್ದವು.

ಇದನ್ನೂ ಓದಿ: ಪತ್ನಿಗಾಗಿ ನಟನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​ಗೆ ಆಸ್ಕರ್​ನಿಂದ 10 ವರ್ಷ ಬ್ಯಾನ್​; ಅಕಾಡೆಮಿ ನಿರ್ಧಾರ

ಆಸ್ಕರ್ ವೇದಿಕೆಯ ಕಪಾಳಮೋಕ್ಷಕ್ಕೆ ಅಲೋಪೆಸಿಯಾ ಕಾರಣ?! ವಿಲ್ ಸ್ಮಿತ್ ಪತ್ನಿಯ ಕೂದಲು ಹಾಗಿರುವುದೇಕೆ?

Published On - 5:02 pm, Tue, 26 April 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!