AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಿಂದ ಹೊರ ಹೋಗಲಿದೆಯೇ ತೆಲುಗು ಚಿತ್ರರಂಗ

Tollywood: ಸಂಧ್ಯಾ ಚಿತ್ರಮಂದಿರದ ಪ್ರಕರಣ ಅಲ್ಲು ಅರ್ಜುನ್ vs ತೆಲಂಗಾಣ ಸರ್ಕಾರ ಎಂಬಂತಾಗಿದೆ. ಅಲ್ಲು ಅರ್ಜುನ್ ಪ್ರಕರಣವನ್ನು ನೆಪವಾಗಿಟ್ಟಿಕೊಂಡು ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ನೀಡಲಾಗುತ್ತಿದ್ದ ಸೌಲಭ್ಯಗಳಿಗೆ ಕತ್ತರಿ ಹಾಕಿದೆ. ಇದರ ಬೆನ್ನಲ್ಲೆ ಟಾಲಿವುಡ್ ಅನ್ನು ಹೈದರಾಬಾದ್​ನಿಂದ ಆಂಧ್ರ ಪ್ರದೇಶಕ್ಕೆ ಸ್ಥಳಾಂತರ ಮಾಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

ಹೈದರಾಬಾದ್​ನಿಂದ ಹೊರ ಹೋಗಲಿದೆಯೇ ತೆಲುಗು ಚಿತ್ರರಂಗ
Tollywood
ಮಂಜುನಾಥ ಸಿ.
|

Updated on: Dec 24, 2024 | 5:37 PM

Share

ಕಳೆದ ಹಲವು ವರ್ಷಗಳಿಂದ ಅತ್ಯುತ್ತಮ ಸಿನಿಮಾ, ಭಾರಿ ಬಾಕ್ಸ್ ಆಫೀಸ್ ಕಲೆಕ್ಷನ್​ ಮೂಲಕ ಸದ್ದಾಗಿದ್ದ ತೆಲುಗು ಚಿತ್ರರಂಗ ಇತ್ತೀಚೆಗೆ ಕೆಟ್ಟ ಕಾರಣಗಳಿಗೆ ಸುದ್ದಿಯಾಗಿದೆ. ಕೆಲ ವರ್ಷಗಳ ಹಿಂದೆ ಆಂಧ್ರ ಪ್ರದೇಶ ಸರ್ಕಾರ ತೆಲುಗು ಚಿತ್ರರಂಗಕ್ಕೆ ಬಿಸಿ ಮೇಲೆ ಬಿಸಿ ಮುಟ್ಟಿಸಿತ್ತು, ಈಗ ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ಬಿಸಿ ಮುಟ್ಟಿಸುತ್ತಿದೆ. ಅಲ್ಲು ಅರ್ಜುನ್​ಗೆ ಸಂಕಷ್ಟದ ಮೇಲೆ ಸಂಕಷ್ಟ ತಂದೊಡ್ಡುತ್ತಿರುವ ತೆಲಂಗಾಣ ಸರ್ಕಾರ, ತೆಲುಗು ಚಿತ್ರರಂಗಕ್ಕೆ ನೀಡಲಾಗುತ್ತಿದ್ದ ಸವಲತ್ತುಗಳನ್ನು ಸಹ ರದ್ದು ಮಾಡಿರುವುದಾಗಿ ಘೋಷಣೆ ಮಾಡಿದೆ. ಇದರ ಬೆನ್ನಲ್ಲೆ ಟಾಲಿವುಡ್ (ತೆಲುಗು ಚಿತ್ರರಂಗ) ತೆಲಂಗಾಣದ ಭಾಗವಾಗಿರುವ ಹೈದರಾಬಾದ್​ನಿಂದ ಹೊರಬಂದು ಆಂಧ್ರ ಪ್ರದೇಶದ ಯಾವುದಾದರೂ ನಗರದಲ್ಲಿ ನೆಲಗೊಳ್ಳಬೇಕು ಎಂಬ ಕೂಗು ಕೇಳಿ ಬರುತ್ತಿದೆ.

ಕನ್ನಡ ಚಿತ್ರರಂಗವನ್ನು ಬೆಂಗಳೂರಿನ ಗಾಂಧಿನಗರದಿಂದ ಗುರುತಿಸುವಂತೆ, ತೆಲುಗು ಚಿತ್ರರಂಗವನ್ನು ಹೈದರಾಬಾದ್​ನಿಂದ ಗುರುತಿಸಲಾಗುತ್ತದೆ. ಆದರೆ ಈಗ ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗ ಮೇಲೆ ಮಾಡುತ್ತಿರುವ ‘ವಿಚ್ ಹಂಟ್’ ನೋಡಿದ ಕೆಲವರು ತೆಲುಗು ಚಿತ್ರರಂಗ ಹೈದರಾಬಾದ್​ನಿಂದ ಹೊರಗೆ ಬರುವ ಮೂಲಕ ತೆಲಂಗಾಣ ಸರ್ಕಾರಕ್ಕೆ ಬುದ್ಧಿ ಕಲಿಸಬೇಕು ಎನ್ನುತ್ತಿದ್ದಾರೆ. ಕೆಲವರು ಇದರ ಪರವಾಗಿದ್ದರೆ ಕೆಲವು ಈ ವಾದದ ವಿರುದ್ಧ ಸಹ ಇದ್ದಾರೆ.

ಇದೇ ಸಂದರ್ಭದಲ್ಲಿ ಆಂಧ್ರದ ಕೆಲವು ಸಚಿವರು, ಮುಖಂಡರು, ತೆಲುಗು ಚಿತ್ರರಂಗದ ವಿರುದ್ಧ ತೆಲಂಗಾಣ ಸರ್ಕಾರ ಉದ್ದೇಶಪೂರ್ವಕ ದಾಳಿ ಮಾಡುತ್ತಿದ್ದು, ತೆಲುಗು ಸಿನಿಮಾ ಪ್ರಮುಖರು ಟಾಲಿವುಡ್​ ಕಾರ್ಯಕ್ರೇತ್ರವನ್ನು ಹೈದರಾಬಾದ್​ನಿಂದ ಆಂಧ್ರದ ವಿಶಾಖಪಟ್ಟಣ ಅಥವಾ ಇನ್ಯಾವುದೇ ನಗರಕ್ಕೆ ಬದಲಾಯಿಸಬೇಕು ಎಂದಿದ್ದಾರೆ. ಕೆಲ ದಿನಗಳ ಹಿಂದೆ ನಟ, ಆಂಧ್ರ ಉಪಮುಖ್ಯ ಮಂತ್ರಿ ಪವನ್ ಕಲ್ಯಾಣ್ ಸಹ ಆಂಧ್ರದಲ್ಲಿ ಪ್ರತ್ಯೇಕ ‘ಸಿನಿಮಾ ನಗರ’ ನಿರ್ಮಾಣ ಮಾಡುವ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ:ನನ್ನ ಶಾಪದಿಂದಲೇ ತೆಲುಗು ಚಿತ್ರರಂಗಕ್ಕೆ ಈ ಗತಿ ಬಂತು: ವೇಣುಸ್ವಾಮಿ

ಆದರೆ ಹೈದರಾಬಾದ್​ನಿಂದ ಟಾಲಿವುಡ್​ ಅನ್ನು ಹೊರಗೆ ತರುವುದು ಸುಲಭದ ಕಾರ್ಯವಲ್ಲ. ರಾಮೋಜಿ ಫಿಲಂ ಸಿಟಿ, ಅಣ್ಣಪೂರ್ಣ ಸ್ಟುಡಿಯೋ ಸೇರಿದಂತೆ ಹಲವು ಸಿನಿಮಾ ಸಂಬಂಧಿ ದೊಡ್ಡ ಸ್ಟುಡಿಯೋಗಳು, ಡಬ್ಬಿಂಗ್, ರೀರೆಕಾರ್ಡಿಂಗ್ ಸಿನಿಮಾಕ್ಕೆ ಸಂಬಂಧಿಸಿದ ಹಲವು ದೊಡ್ಡ ಸಂಸ್ಥೆಗಳು ಹೈದರಾಬಾದ್​ನಲ್ಲಿ ನೆಲೆಗೊಂಡಿವೆ. ಮೂಲಸೌಕರ್ಯದ ದೃಷ್ಟಿಯಿಂದಲೂ ಹೈದರಾಬಾದ್​ ಸಿನಿಮಾ ಮಂದಿಗೆ ಹೆಚ್ಚು ಅನುಕೂಲಕರ ಪ್ರದೇಶ, ಈಗ ಒಮ್ಮೆಲೆ ಚಿತ್ರರಂಗವನ್ನು ಸ್ಥಳಾಂತರಗೊಳಿಸುವುದು ಸುಲಭದ ಮಾತಲ್ಲ.

ಈ ಹಿಂದೆ ಆಂಧ್ರದಲ್ಲಿ ಜಗನ್ ಸರ್ಕಾರ ಇದ್ದಾಗಲೂ ಸಹ ಜಗನ್, ತೆಲುಗು ಚಿತ್ರರಂಗದ ಮೇಲೆ ಕೆಲ ಮಿತಿಗಳನ್ನು ಹೇರಿ ಚಿತ್ರರಂಗವನ್ನು ಸರ್ಕಾರದ ಮಿತಿಗೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದರು. ಆಗ ಚಿತ್ರರಂಗದ ಮಂದಿ ಜಗನ್ ಸರ್ಕಾರವನ್ನು ಟಕುವಾಗಿ ಟೀಕಿಸಿದ್ದು ಮಾತ್ರವೇ ಅಲ್ಲದೆ ಎಲ್ಲರೂ ಒಟ್ಟಾಗಿ ಸರ್ಕಾರವನ್ನು ಇಳಿಸುವಲ್ಲಿ ಮುಖ್ಯ ಪಾತ್ರವನ್ನೂ ವಹಿಸಿದ್ದರು. ಈಗ ತೆಲಂಗಾಣದ ಕಾಂಗ್ರೆಸ್ ಸರ್ಕಾರ ಸಹ ತೆಲುಗು ಚಿತ್ರರಂಗದ ವಿರೋಧ ಕಟ್ಟಿಕೊಳ್ಳುತ್ತಿದ್ದು, ಚಿತ್ರರಂಗದವರು ತೆಲಂಗಾಣ ಸರ್ಕಾರವನ್ನೂ ಇಳಿಸಲು ಶಕ್ತರಾಗುತ್ತಾರೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು