AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಥೆ ಬರಹಗಾರ ಮಾಡಂಪು ಕುಂಜುಕುಟ್ಟನ್​ ಕೊರೊನಾದಿಂದ ನಿಧನ

Madampu Kunjukuttan Death: 80 ವರ್ಷ ದಾಟಿದ್ದರಿಂದ ಮಾಡಂಪು ಕುಂಜುಕುಟ್ಟನ್ ಅವರಿಗೆ ವಯೋಸಹಜ ಖಾಯಿಲೆಗಳು ಕೂಡ ಇದ್ದವು. ಸಂಸ್ಕೃತದಲ್ಲಿ ಶಿಕ್ಷಣ ಪಡೆದ ಅವರು ಸಂಸ್ಕೃತ ಶಿಕ್ಷಕನಾಗಿ ಕೆಲಸ ಮಾಡಿದ್ದರು. ಹಲವು ದೇವಾಲಯಗಳಲ್ಲಿ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಥೆ ಬರಹಗಾರ ಮಾಡಂಪು ಕುಂಜುಕುಟ್ಟನ್​ ಕೊರೊನಾದಿಂದ ನಿಧನ
ಮಾಡಂಪು ಕುಂಜುಕುಟ್ಟನ್
ಮದನ್​ ಕುಮಾರ್​
|

Updated on: May 11, 2021 | 12:16 PM

Share

ಮಲಯಾಳಂ ಚಿತ್ರರಂಗದಲ್ಲಿ ಸಾಹಿತಿಯಾಗಿ, ನಟನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡಿದ್ದ ಮಾಡಂಪು ಕುಂಜುಕುಟ್ಟನ್​ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ತ್ರಿಶೂರ್​ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದಿದ್ದಾರೆ.

80 ವರ್ಷ ದಾಟಿದ್ದರಿಂದ ಮಾಡಂಪು ಕುಂಜುಕುಟ್ಟನ್ ಅವರಿಗೆ ವಯೋಸಹಜ ಖಾಯಿಲೆಗಳು ಕೂಡ ಇದ್ದವು. 1941ರಲ್ಲಿ ಜನಿಸಿದ್ದ ಅವರು ಸಂಸ್ಕೃತ ಮತ್ತು ಹಸ್ತ್ಯಾಯುರ್ವೇದದಲ್ಲಿ (ಆನೆಗಳ ಚಿಕಿತ್ಸೆ) ಶಿಕ್ಷಣ ಪಡೆದರು. ಸಂಸ್ಕೃತ ಶಿಕ್ಷಕನಾಗಿ ಕೆಲಸ ಮಾಡಿದ್ದರು. ಹಲವು ದೇವಾಲಯಗಳಲ್ಲಿ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು.

ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಮಾಡಂಪು ಕುಂಜುಕುಟ್ಟನ್ ಅವರಿಗೆ ಸಿಕ್ಕಿದ್ದವು. ಕರುಣಂ ಸಿನಿಮಾದ ಚಿತ್ರಕಥೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಖ್ಯಾತಿ ಮಾಡಂಪು ಕುಂಜುಕುಟ್ಟನ್ ಅವರದ್ದು. E4 Elephant ಎಂಬ ಟಿವಿ ಕಾರ್ಯಕ್ರಮದ ನಿರೂಪಣೆ ಮೂಲಕವೂ ಅವರು ಫೇಮಸ್​ ಆಗಿದ್ದರು. ಇಂಥ ಸಾಧಕನ ನಿಧನಕ್ಕೆ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರು ಈ ವರ್ಷ ಕೊವಿಡ್​ನಿಂದ ಮೃತರಾಗಿದ್ದಾರೆ.

ಇದನ್ನೂ ಓದಿ:

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ

ಕೊರೊನಾದಿಂದ ಟಾಲಿವುಡ್​ ನಟ TNR ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?