ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಥೆ ಬರಹಗಾರ ಮಾಡಂಪು ಕುಂಜುಕುಟ್ಟನ್​ ಕೊರೊನಾದಿಂದ ನಿಧನ

Madampu Kunjukuttan Death: 80 ವರ್ಷ ದಾಟಿದ್ದರಿಂದ ಮಾಡಂಪು ಕುಂಜುಕುಟ್ಟನ್ ಅವರಿಗೆ ವಯೋಸಹಜ ಖಾಯಿಲೆಗಳು ಕೂಡ ಇದ್ದವು. ಸಂಸ್ಕೃತದಲ್ಲಿ ಶಿಕ್ಷಣ ಪಡೆದ ಅವರು ಸಂಸ್ಕೃತ ಶಿಕ್ಷಕನಾಗಿ ಕೆಲಸ ಮಾಡಿದ್ದರು. ಹಲವು ದೇವಾಲಯಗಳಲ್ಲಿ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಥೆ ಬರಹಗಾರ ಮಾಡಂಪು ಕುಂಜುಕುಟ್ಟನ್​ ಕೊರೊನಾದಿಂದ ನಿಧನ
ಮಾಡಂಪು ಕುಂಜುಕುಟ್ಟನ್

Updated on: May 11, 2021 | 12:16 PM

ಮಲಯಾಳಂ ಚಿತ್ರರಂಗದಲ್ಲಿ ಸಾಹಿತಿಯಾಗಿ, ನಟನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡಿದ್ದ ಮಾಡಂಪು ಕುಂಜುಕುಟ್ಟನ್​ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ತ್ರಿಶೂರ್​ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದಿದ್ದಾರೆ.

80 ವರ್ಷ ದಾಟಿದ್ದರಿಂದ ಮಾಡಂಪು ಕುಂಜುಕುಟ್ಟನ್ ಅವರಿಗೆ ವಯೋಸಹಜ ಖಾಯಿಲೆಗಳು ಕೂಡ ಇದ್ದವು. 1941ರಲ್ಲಿ ಜನಿಸಿದ್ದ ಅವರು ಸಂಸ್ಕೃತ ಮತ್ತು ಹಸ್ತ್ಯಾಯುರ್ವೇದದಲ್ಲಿ (ಆನೆಗಳ ಚಿಕಿತ್ಸೆ) ಶಿಕ್ಷಣ ಪಡೆದರು. ಸಂಸ್ಕೃತ ಶಿಕ್ಷಕನಾಗಿ ಕೆಲಸ ಮಾಡಿದ್ದರು. ಹಲವು ದೇವಾಲಯಗಳಲ್ಲಿ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು.

ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಮಾಡಂಪು ಕುಂಜುಕುಟ್ಟನ್ ಅವರಿಗೆ ಸಿಕ್ಕಿದ್ದವು. ಕರುಣಂ ಸಿನಿಮಾದ ಚಿತ್ರಕಥೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಖ್ಯಾತಿ ಮಾಡಂಪು ಕುಂಜುಕುಟ್ಟನ್ ಅವರದ್ದು. E4 Elephant ಎಂಬ ಟಿವಿ ಕಾರ್ಯಕ್ರಮದ ನಿರೂಪಣೆ ಮೂಲಕವೂ ಅವರು ಫೇಮಸ್​ ಆಗಿದ್ದರು. ಇಂಥ ಸಾಧಕನ ನಿಧನಕ್ಕೆ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರು ಈ ವರ್ಷ ಕೊವಿಡ್​ನಿಂದ ಮೃತರಾಗಿದ್ದಾರೆ.

ಇದನ್ನೂ ಓದಿ:

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ

ಕೊರೊನಾದಿಂದ ಟಾಲಿವುಡ್​ ನಟ TNR ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us