ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ಹೀರೋಗಳು. ಆದಾಗ್ಯೂ ಯಾವ ಪಾತ್ರವು ಕಡಿಮೆ ಎಂದು ಕಾಣಿಸಿಲ್ಲ. ಈಗ ನರ್ತನ್ ಮಾಡುತ್ತಿರುವ ಸಿನಿಮಾದಲ್ಲೂ ಇಬ್ಬರು ಹೀರೋಗಳು ಇರಲಿದ್ದಾರೆ ಎನ್ನುತ್ತಿವೆ ಮೂಲಗಳು.

ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ
ರಾಮ್ ಚರಣ್-ನರ್ತನ್-ಯಶ್
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 26, 2022 | 9:19 AM

‘ಮಫ್ತಿ’ ಹಿಟ್ ಆದ ನಂತರದಲ್ಲಿ ನಿರ್ದೇಶಕ ನರ್ತನ್ (Nartan) ಅವರು ಸೈಲೆಂಟ್ ಆದರು. ಯಾರ ಜತೆಗೂ ಸಿನಿಮಾ ಮಾಡಿಲ್ಲ. ಶಿವಣ್ಣ ಹಾಗೂ ನರ್ತನ್ ಮತ್ತೊಮ್ಮೆ ಕೈ ಜೋಡಿಸಬೇಕಿತ್ತು. ಆದರೆ, ಅದು ಮುಂದಕ್ಕೆ ಹೋಗಿದೆ. ಈಗ ನರ್ತನ್ ಹಾಗೂ ಯಶ್ (Yash) ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಇದೆ. ಯಶ್ ಹಾಗೂ ರಾಮ್ ಚರಣ್ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಕಥೆ ಕೇಳಿದ್ದ ರಾಮ್ ಚರಣ್ ಅವರು ಹೋಲ್ಡ್​ನಲ್ಲಿ ಇಟ್ಟಿದ್ದರು ಎನ್ನಲಾಗಿದೆ. ಈಗ ಈ ಬಗ್ಗೆ ಹೊಸ ಸುದ್ದಿ ಹೊರ ಬಿದ್ದಿದೆ. ರಾಮ್ ಚರಣ್ ಅವರು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಟಾಲಿವುಡ್ ಅಂಗಳದಲ್ಲಿ ಸುದ್ದಿ ಹರಿದಾಡಿದೆ.

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ಹೀರೋಗಳು. ಆದಾಗ್ಯೂ ಯಾವ ಪಾತ್ರವು ಕಡಿಮೆ ಎಂದು ಕಾಣಿಸಿಲ್ಲ. ಈಗ ನರ್ತನ್ ಮಾಡುತ್ತಿರುವ ಸಿನಿಮಾದಲ್ಲೂ ಇಬ್ಬರು ಹೀರೋಗಳು ಇರಲಿದ್ದಾರೆ ಎನ್ನುತ್ತಿವೆ ಮೂಲಗಳು. ಯಶ್ ಹಾಗೂ ರಾಮ್ ಚರಣ್ ಕಾಂಬಿನೇಷನ್ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇಬ್ಬರು ಸ್ಟಾರ್​​ಗಳ ಜತೆ ಸಿನಿಮಾ ಮಾಡೋದು ನರ್ತನ್​ಗೆ ಹೊಸದಲ್ಲ. ‘ಮಫ್ತಿ’ ಚಿತ್ರದಲ್ಲಿ ಈ ಪ್ರಯೋಗ ಮಾಡಿ ಯಶಸ್ಸು ಕಂಡಿದ್ದರು. ಈಗ ಅವರು ಮತ್ತದೇ ಪ್ರಯೋಗ ಮಾಡಲು ಮುಂದೆ ಬಂದಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಬಗ್ಗೆ ಶೀಘ್ರವೇ ಅಪ್​​ಡೇಟ್​ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
RRR 2: ಆರ್​ಆರ್​ಆರ್​ ಸೀಕ್ವೆಲ್​ ಮಾಡಲು ಉತ್ಸಾಹ ತೋರಿದ ರಾಜಮೌಳಿ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್
Image
RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

ರಾಮ್ ಚರಣ್ ಟಾಲಿವುಡ್​ನಲ್ಲಿ ಸೂಪರ್ ಸ್ಟಾರ್​. ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರು ಅವರ ಕಾಲ್​ಶೀಟ್ ಪಡೆಯಲು ಕಾದು ಕೂತಿದ್ದಾರೆ. ಆದರೆ, ಅದು ಅಷ್ಟು ಸುಲಭಕ್ಕೆ ಸಿಗೋದಲ್ಲ. ನರ್ತನ್​ ಕೂಡ ಅಷ್ಟೇ, ಮೊದಲ ಸಿನಿಮಾ ತೆರೆಕಂಡ ಬಳಿಕ ಸಾಕಷ್ಟು ಗ್ಯಾಪ್ ತೆಗೆದುಕೊಂಡಿದ್ದಾರೆ. ಈಗ ಇಬ್ಬರೂ ಒಂದಾಗುತ್ತಿರುವ ವಿಚಾರ ಸಹಜವಾಗಿಯೇ ಕುತೂಹಲ ಮೂಡಿಸಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

ಇದನ್ನೂ ಓದಿ: ನಿಂತೇ ಹೋಯ್ತು ರಾಮ್ ಚರಣ್ ಹೊಸ ಸಿನಿಮಾ?; ರಾಜಮೌಳಿ ಎಫೆಕ್ಟ್​ ಎಂದು ದೂಷಿಸಿದ ಫ್ಯಾನ್ಸ್

‘ಕೆಜಿಎಫ್ 2’ ತೆರೆಗೆ ಬಂದ ಬಳಿಕ ಯಶ್ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಅವರ ಮುಂದಿನ ಚಿತ್ರ ಯಾವುದು ಎಂದು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.

Published On - 7:08 am, Wed, 26 October 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ