AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ಹೀರೋಗಳು. ಆದಾಗ್ಯೂ ಯಾವ ಪಾತ್ರವು ಕಡಿಮೆ ಎಂದು ಕಾಣಿಸಿಲ್ಲ. ಈಗ ನರ್ತನ್ ಮಾಡುತ್ತಿರುವ ಸಿನಿಮಾದಲ್ಲೂ ಇಬ್ಬರು ಹೀರೋಗಳು ಇರಲಿದ್ದಾರೆ ಎನ್ನುತ್ತಿವೆ ಮೂಲಗಳು.

ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ
ರಾಮ್ ಚರಣ್-ನರ್ತನ್-ಯಶ್
TV9 Web
| Edited By: |

Updated on:Oct 26, 2022 | 9:19 AM

Share

‘ಮಫ್ತಿ’ ಹಿಟ್ ಆದ ನಂತರದಲ್ಲಿ ನಿರ್ದೇಶಕ ನರ್ತನ್ (Nartan) ಅವರು ಸೈಲೆಂಟ್ ಆದರು. ಯಾರ ಜತೆಗೂ ಸಿನಿಮಾ ಮಾಡಿಲ್ಲ. ಶಿವಣ್ಣ ಹಾಗೂ ನರ್ತನ್ ಮತ್ತೊಮ್ಮೆ ಕೈ ಜೋಡಿಸಬೇಕಿತ್ತು. ಆದರೆ, ಅದು ಮುಂದಕ್ಕೆ ಹೋಗಿದೆ. ಈಗ ನರ್ತನ್ ಹಾಗೂ ಯಶ್ (Yash) ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಇದೆ. ಯಶ್ ಹಾಗೂ ರಾಮ್ ಚರಣ್ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಕಥೆ ಕೇಳಿದ್ದ ರಾಮ್ ಚರಣ್ ಅವರು ಹೋಲ್ಡ್​ನಲ್ಲಿ ಇಟ್ಟಿದ್ದರು ಎನ್ನಲಾಗಿದೆ. ಈಗ ಈ ಬಗ್ಗೆ ಹೊಸ ಸುದ್ದಿ ಹೊರ ಬಿದ್ದಿದೆ. ರಾಮ್ ಚರಣ್ ಅವರು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಟಾಲಿವುಡ್ ಅಂಗಳದಲ್ಲಿ ಸುದ್ದಿ ಹರಿದಾಡಿದೆ.

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ಹೀರೋಗಳು. ಆದಾಗ್ಯೂ ಯಾವ ಪಾತ್ರವು ಕಡಿಮೆ ಎಂದು ಕಾಣಿಸಿಲ್ಲ. ಈಗ ನರ್ತನ್ ಮಾಡುತ್ತಿರುವ ಸಿನಿಮಾದಲ್ಲೂ ಇಬ್ಬರು ಹೀರೋಗಳು ಇರಲಿದ್ದಾರೆ ಎನ್ನುತ್ತಿವೆ ಮೂಲಗಳು. ಯಶ್ ಹಾಗೂ ರಾಮ್ ಚರಣ್ ಕಾಂಬಿನೇಷನ್ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇಬ್ಬರು ಸ್ಟಾರ್​​ಗಳ ಜತೆ ಸಿನಿಮಾ ಮಾಡೋದು ನರ್ತನ್​ಗೆ ಹೊಸದಲ್ಲ. ‘ಮಫ್ತಿ’ ಚಿತ್ರದಲ್ಲಿ ಈ ಪ್ರಯೋಗ ಮಾಡಿ ಯಶಸ್ಸು ಕಂಡಿದ್ದರು. ಈಗ ಅವರು ಮತ್ತದೇ ಪ್ರಯೋಗ ಮಾಡಲು ಮುಂದೆ ಬಂದಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಬಗ್ಗೆ ಶೀಘ್ರವೇ ಅಪ್​​ಡೇಟ್​ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
RRR 2: ಆರ್​ಆರ್​ಆರ್​ ಸೀಕ್ವೆಲ್​ ಮಾಡಲು ಉತ್ಸಾಹ ತೋರಿದ ರಾಜಮೌಳಿ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್
Image
RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

ರಾಮ್ ಚರಣ್ ಟಾಲಿವುಡ್​ನಲ್ಲಿ ಸೂಪರ್ ಸ್ಟಾರ್​. ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರು ಅವರ ಕಾಲ್​ಶೀಟ್ ಪಡೆಯಲು ಕಾದು ಕೂತಿದ್ದಾರೆ. ಆದರೆ, ಅದು ಅಷ್ಟು ಸುಲಭಕ್ಕೆ ಸಿಗೋದಲ್ಲ. ನರ್ತನ್​ ಕೂಡ ಅಷ್ಟೇ, ಮೊದಲ ಸಿನಿಮಾ ತೆರೆಕಂಡ ಬಳಿಕ ಸಾಕಷ್ಟು ಗ್ಯಾಪ್ ತೆಗೆದುಕೊಂಡಿದ್ದಾರೆ. ಈಗ ಇಬ್ಬರೂ ಒಂದಾಗುತ್ತಿರುವ ವಿಚಾರ ಸಹಜವಾಗಿಯೇ ಕುತೂಹಲ ಮೂಡಿಸಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

ಇದನ್ನೂ ಓದಿ: ನಿಂತೇ ಹೋಯ್ತು ರಾಮ್ ಚರಣ್ ಹೊಸ ಸಿನಿಮಾ?; ರಾಜಮೌಳಿ ಎಫೆಕ್ಟ್​ ಎಂದು ದೂಷಿಸಿದ ಫ್ಯಾನ್ಸ್

‘ಕೆಜಿಎಫ್ 2’ ತೆರೆಗೆ ಬಂದ ಬಳಿಕ ಯಶ್ ಅವರು ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಅವರ ಮುಂದಿನ ಚಿತ್ರ ಯಾವುದು ಎಂದು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.

Published On - 7:08 am, Wed, 26 October 22

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್