AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರಕ್ಕೆ ಎದುರಾಗಿದೆ ದೊಡ್ಡ ಸವಾಲು; ವಿವರಿಸಿದ ಯಶ್

ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಈವೆಂಟ್‌ನಲ್ಲಿ ಪಾಲ್ಗೊಂಡಿದ್ದ ನಟ ಯಶ್, ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರ ಮಾಡುತ್ತಿರುವುದು ತಮಗೆ ಸಿಕ್ಕ ದೊಡ್ಡ ಸಂತೋಷ ಎಂದಿದ್ದಾರೆ. ಎಲ್ಲರಿಗೂ ತಿಳಿದಿರುವ ಕಥೆಯನ್ನು ಜಾಗತಿಕ ಮಟ್ಟದಲ್ಲಿ ವಿಭಿನ್ನವಾಗಿ ಹಾಗೂ ನೈಜವಾಗಿ ಪ್ರಸ್ತುತಪಡಿಸುವುದು ದೊಡ್ಡ ಸವಾಲಾಗಿತ್ತು ಎಂದಿರುವ ಅವರು, ತಾವು ಈ ಚಿತ್ರಕ್ಕೆ ಸಹ-ನಿರ್ಮಾಪಕರೂ ಆಗಿರುವುದಾಗಿ ತಿಳಿಸಿದ್ದಾರೆ.

‘ರಾಮಾಯಣ’ ಚಿತ್ರಕ್ಕೆ ಎದುರಾಗಿದೆ ದೊಡ್ಡ ಸವಾಲು; ವಿವರಿಸಿದ ಯಶ್
ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 24, 2026 | 7:48 AM

Share

ಮುಖ್ಯಾಂಶಗಳು

  • ಕಾಮಿಕ್ ಕಾನ್ ವೇದಿಕೆಯಲ್ಲಿ ಯಶ್ ಅಬ್ಬರ
  • ರಾವಣನ ಪಾತ್ರದ ಬಗ್ಗೆ ಹಂಚಿಕೊಂಡ್ರು ಬಿಗ್ ಅಪ್ಡೇಟ್
  • ಭಾರತೀಯ ಕಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಯಶ್-ನಮಿತ್ ಕನಸು

ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ನಟ ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್‌ ಈವೆಂಟ್​ನಲ್ಲಿ ಯಶ್ ಭಾಗಿ ಆಗಿದ್ದಾರೆ. ಈ ವೇಳೆ ವಿದೇಶದ ಮಾಧ್ಯಮದ ಜೊತೆ ಮಾತನಾಡಿರುವ ಅವರು, ರಾವಣನ ಪಾತ್ರವನ್ನು ಬೆಳ್ಳಿತೆರೆಯ ಮೇಲೆ ತರುವುದು ತಮಗೆ ದೊರೆತ ದೊಡ್ಡ ಸಂತೋಷ ಎಂದು ಹೇಳಿದ್ದಾರೆ.

ಇದರೊಂದಿಗೆ ಚಿತ್ರದ ಸವಾಲುಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ರಾಮಾಯಣ ಪ್ರತಿಯೊಬ್ಬರಿಗೂ ತಿಳಿದಿರುವ ಕಥೆ. ಈ ಕಥೆಯನ್ನು ಈಗಾಗಲೇ ಹಳ್ಳಿಗಳ ಪುಟ್ಟ ನಾಟಕಗಳಿಂದ ಹಿಡಿದು ಟೆಲಿವಿಷನ್, ವಿವಿಧ ಭಾಷೆಗಳ ಸಿನಿಮಾಗಳವರೆಗೆ ಹಲವು ರೀತಿಯಲ್ಲಿ ಹೇಳಲಾಗಿದೆ. ಎಷ್ಟೋ ಜನರು ಈ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಹೀಗಿರುವಾಗ, ಈ ಚಿತ್ರದಲ್ಲಿ ಅದನ್ನು ಒಂದು ವಿಭಿನ್ನ ಹಾಗೂ ವಿಶಿಷ್ಟ ಶೈಲಿಯಲ್ಲಿ ಪ್ರಸ್ತುತಪಡಿಸುವುದು ಮತ್ತು ಅದು ಅಷ್ಟೇ ನೈಜವಾಗಿ ಕಾಣಿಸುವಂತೆ ಮಾಡುವುದು ನಮಗೆ ಇದ್ದ ದೊಡ್ಡ ಸವಾಲಾಗಿತ್ತು’ ಎಂದು ಯಶ್ ವಿವರಿಸಿದ್ದಾರೆ. ಪ್ರೇಕ್ಷಕರಿಗೆ ತುಂಬಾ ರೋಮಾಂಚನ ನೀಡುವಂತಹ ವಿಭಿನ್ನ ಪ್ರಯತ್ನವನ್ನು ತಾವು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಚಿತ್ರದ ಸಹ-ನಿರ್ಮಾಪಕರೂ ಹೌದು

ಯಶ್ ಈ ಚಿತ್ರಕ್ಕೆ ಕೇವಲ ನಟರಷ್ಟೇ ಅಲ್ಲದೆ, ನಮಿತ್ ಮಲ್ಹೋತ್ರಾ ಅವರೊಂದಿಗೆ ಸಹ-ನಿರ್ಮಾಪಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಭಾರತೀಯ ಚಿತ್ರರಂಗದ ಕಥೆಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ತಮ್ಮ ಮತ್ತು ನಮಿತ್ ಅವರ ಕನಸಾಗಿದ್ದು, ಈ ಚಿತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗ ಹೆಮ್ಮೆ ಪಡುವಂತಹ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಮಾಯಣದ ಮಹತ್ವ

ರಾಮಾಯಣ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಏಷ್ಯಾ ಹಾಗೂ ವಿಶ್ವದ ಹಲವು ದೇಶಗಳಲ್ಲಿ ಸಾಂಸ್ಕೃತಿಕವಾಗಿ ಆಳವಾಗಿ ಬೇರೂರಿದೆ. ಮಾನವ ಜೀವನದ ದೈನಂದಿನ ಗೊಂದಲಗಳು, ತಪ್ಪು-ಒಪ್ಪುಗಳ ನಡುವಿನ ಸಂಘರ್ಷ ಹಾಗೂ ನಾವು ತೆಗೆದುಕೊಳ್ಳುವ ನಿರ್ಧಾರಗಳು ನಮ್ಮ ವ್ಯಕ್ತಿತ್ವವನ್ನು ಹೇಗೆ ರೂಪಿಸುತ್ತವೆ ಎಂಬ ಆಳವಾದ ಜೀವನದ ಸತ್ಯವನ್ನು ರಾಮಾಯಣವು ಅತ್ಯಂತ ಸರಳವಾಗಿ ಮತ್ತು ಭವ್ಯವಾಗಿ ಹೇಳುತ್ತದೆ ಎಂದು ಯಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊನೆಯ ಕ್ಷಣದಲ್ಲಿ ‘ರಾಮಾಯಣ’ ಟ್ರೇಲರ್ ರಿಲೀಸ್ ರದ್ದು; ಕಾರಣ ಕೊಟ್ಟ ನಮಿತ್ ಮಲ್ಹೋತ್ರಾ

ನಮಿತ್ ಮಲ್ಹೋತ್ರಾ ನಿರ್ಮಾಣದ ಈ ‘ರಾಮಾಯಣ’ ಚಿತ್ರವು ಐಮ್ಯಾಕ್ಸ್ ತಂತ್ರಜ್ಞಾನದಲ್ಲಿ ಮೂಡಿಬರಲಿದೆ. ಈ ಚಿತ್ರ ದೀಪಾವಳಿಗೆ ರಿಲೀಸ್ ಆಗಲಿದೆ.

ಪ್ರಶ್ನೆ: ರಾಮಾಯಣ ರಿಲೀಸ್ ಯಾವಾಗ? ಉತ್ತರ: ದೀಪಾವಳಿ

ಪ್ರಶ್ನೆ: ರಾಮಾಯಣ ಟ್ರೇಲರ್ ಯಾವಾಗ ರಿಲೀಸ್ ಆಗಬೇಕಿತ್ತು? ಉತ್ತರ: ಜುಲೈ 24

ಪ್ರಶ್ನೆ: ರಾಮಾಯಣ ಟ್ರೇಲರ್ ರದ್ದಿಗೆ ಕಾರಣ ಏನು? ಉತ್ತರ: ಹೊಸ ಒಪ್ಪಂದವೇ ಕಾರಣ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ