AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋಗ್ತಾರಾ ಯಶ್? ನೇರವಾಗಿ ಉತ್ತರಿಸಿದ ರಾಕಿಂಗ್​ಸ್ಟಾರ್

ತಮ್ಮ ಫಿಟ್ನೆಸ್​ ಟ್ರೇನರ್ ಕಿಟ್ಟಿ ಜಿಮ್ ಉದ್ಘಾಟನೆಗೆ ಯಶ್ ಆಗಮಿಸಿದ್ದಾರೆ. ಈ ವೇಳೆ ಅವರು ಮಾಧ್ಯಮದ ಜೊತೆಗೆ ಮಾತಿಗೆ ಸಿಕ್ಕರು. ಆಗ ರಾಜಕೀಯದ ಬಗ್ಗೆ ಅವರಿ ಪ್ರಶ್ನೆ ಮಾಡಲಾಗಿದೆ. ‘ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಯಶ್ ಉತ್ತರಿಸಿದ್ದಾರೆ.

ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋಗ್ತಾರಾ ಯಶ್? ನೇರವಾಗಿ ಉತ್ತರಿಸಿದ ರಾಕಿಂಗ್​ಸ್ಟಾರ್
ಸುಮಲತಾ-ಯಶ್
ರಾಜೇಶ್ ದುಗ್ಗುಮನೆ
|

Updated on: Feb 15, 2024 | 6:58 AM

Share

ಲೋಕಸಭೆ ಚುನಾವಣೆ ಹತ್ತಿರ ಬಂದಿದೆ. ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಯಾರಿಗೆ ಟಿಕೆಟ್ ಸಿಗುತ್ತದೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಅನೇಕ ಪಕ್ಷಗಳು ಸ್ಟಾರ್​ಗಳನ್ನು ಪ್ರಚಾರಕ್ಕೆ ಕರೆತರುವ ಆಲೋಚನೆಯಲ್ಲಿ ಇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಯಶ್ ಅವರು ಸುಮಲತಾ ಪರವಾಗಿ ಪ್ರಚಾರ ಮಾಡಿದ್ದರು. ಈಗ ಯಶ್ (Yash) ಜನಪ್ರಿಯತೆ ಹೆಚ್ಚಿದೆ. ಹೀಗಾಗಿ, ಅವರು ಲೋಕಸಭೆ ಚುನಾವಣೆ ಪ್ರಮೋಷನ್​ನಲ್ಲಿ ಭಾಗಿ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಆ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಹಾಗಂತ ಅವರು ಸುಮ್ಮನೆ ಕೂತಿಲ್ಲ. ಅದಕ್ಕೆ ಏನು ಬೇಕೋ ಆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರ ಗೆಳೆಯ, ಫಿಟ್ನೆಸ್​ ಟ್ರೇನರ್ ಕಿಟ್ಟಿ ಅವರ ಜಿಮ್ ಉದ್ಘಾಟನೆ ನಡೆದಿದೆ. ಇದಕ್ಕೆ ಯಶ್ ತೆರಳಿದ್ದರು. ಈ ವೇಳೆ ಅವರು ಮಾಧ್ಯಮದ ಜೊತೆಗೆ ಮಾತಿಗೆ ಸಿಕ್ಕರು. ಆಗ ರಾಜಕೀಯದ ಬಗ್ಗೆ ಅವರಿ ಪ್ರಶ್ನೆ ಮಾಡಲಾಗಿದೆ.

‘ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಯಶ್ ಉತ್ತರಿಸಿದ್ದಾರೆ. ‘ರಾಜಕೀಯದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ, ನನ್ನ ಗುರಿ ಬೇರೆಯೇ ಇದೆ’ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಾಗಿ ಈ ಬಾರಿ ರಾಜಕೀಯದಿಂದ ದೂರವೇ ಇರುವುದಾಗಿ ಹೇಳಿದ್ದಾರೆ. ಸದ್ಯ ಅವರ ಗಮನ ಸಂಪೂರ್ಣವಾಗಿ ಸಿನಿಮಾ ಮೇಲೆ ಇದೆ.

ಇದನ್ನೂ ಓದಿ: 60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ ಅಂಬರೀಷ್​; ಬರ್ತ್​ಡೇ ಪಾರ್ಟಿಯಲ್ಲಿ ಸ್ಟಾರ್​ ಕಲಾವಿದರ ಸಂಗಮ

ಕಳೆದ ವರ್ಷ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ನಿಖಿಲ್ ಕುಮಾರ್ ಸುಮಲತಾ ವಿರುದ್ಧ ಕಣಕ್ಕೆ ಇಳಿದಿದ್ದರು. ನಿಖಿಲ್ ವಿರುದ್ಧ ಸುಮಲತಾ ದೊಡ್ಡ ಮಟ್ಟದ ಗೆಲುವು ಕಂಡಿದ್ದರು. ಇದಕ್ಕೆ ಯಶ್ ಹಾಗೂ ದರ್ಶನ್ ಒಟ್ಟಾಗಿ ಮಾಡಿದ ಪ್ರಚಾರವೂ ಕಾರಣವಾಗಿತ್ತು. ಈ ಬಾರಿಯೂ ಸುಮಲತಾ ಅವರು ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಈ ಬಗ್ಗೆ ಅವರೇ ಅಧಿಕೃತ ಘೋಷಣೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More