AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ?

ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಆಗಲಿದೆ. ಚಿತ್ರರಂಗದ ಅನೇಕ ಗಣ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ. ಕನ್ನಡದ ಸೆಲೆಬ್ರಿಟಿಗಳನ್ನು ಕೂಡ ಆಹ್ವಾನಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆಹ್ವಾನಿತರ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಮೂಡಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ?
ರಿಷಬ್​ ಶೆಟ್ಟಿ, ಯಶ್​. ಪ್ರಭಾಸ್​. ರಣಬೀರ್​ ಕಪೂರ್​
ಮದನ್​ ಕುಮಾರ್​
| Edited By: |

Updated on:Dec 28, 2023 | 11:11 AM

Share

ಅಯೋಧ್ಯೆಯಲ್ಲಿ ನಿರ್ಮಾಣ ಆಗಿರುವ ರಾಮ ಮಂದಿರ (Ram Mandir) ಉದ್ಘಾಟನೆಗಾಗಿ ಭಕ್ತರು ಎದುರು ನೋಡುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾದಿದ್ದಾರೆ. ರಾಮ ಮಂದಿರ ಉದ್ಘಾಟನಾ (Ram Mandir Inauguration) ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದೆ. ಕೆಲವು ಸೆಲೆಬ್ರಿಟಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಆದರೆ ಎಲ್ಲರಿಗೂ ಅವಕಾಶ ಸಿಗುವುದು ಕಷ್ಟ. ಕೆಲವು ಸೆಲೆಬ್ರಿಟಿಗಳಿಗೆ ಅಧಿಕೃತವಾಗಿ ಆಹ್ವಾನ ಬಂದಿದೆ ಎಂದು ಹೇಳಲಾಗುತ್ತಿದೆ. ಯಶ್​ (Yash), ಪ್ರಭಾಸ್, ರಿಷಬ್​ ಶೆಟ್ಟಿ, ರಣಬೀರ್​ ಕಪೂರ್​ ಮುಂತಾದವರನ್ನು ಆಹ್ವಾನಿಸಲಾಗಿದೆ ಎಂದು ವರದಿ ಆಗಿದೆ.

ಈ ಕುರಿತು ‘ಬಾಲಿವುಡ್​ ಹಂಗಾಮಾ’ ವರದಿ ಪ್ರಕಟ ಮಾಡಿದೆ. ಆಲಿಯಾ ಭಟ್​, ರಣಬೀರ್​ ಕಪೂರ್​, ಟೈಗರ್​ ಶ್ರಾಫ್​, ಸನ್ನಿ ಡಿಯೋಲ್​, ಅಜಯ್​ ದೇವಗನ್​, ಆಯುಷ್ಮಾನ್​ ಖುರಾನಾ, ಪ್ರಭಾಸ್​ ಹಾಗೂ ಯಶ್​ ಅವರಿಗೆ ಆಹ್ವಾನ ಹೋಗಿರುವುದು ಖಚಿತ ಎಂದು ಈ ವರದಿಯಲ್ಲಿ ತಿಳಿಸಲಾಗಿದೆ. ಕನ್ನಡದ ಸೆಲೆಬ್ರಿಟಿಗಳನ್ನು ಕೂಡ ಆಹ್ವಾನಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುತ್ತಾರಾ ಖರ್ಗೆ-ಸೋನಿಯಾ ಗಾಂಧಿ?

ಬೇರೆ ವರದಿಗಳ ಪ್ರಕಾರ ಮುಖೇಶ್​ ಅಂಬಾನಿ, ಸಚಿನ್​ ತೆಂಡೂಲ್ಕರ್​, ವಿರಾಟ್​ ಕೊಹ್ಲಿ, ಗೌತಮ್​ ಅದಾನಿ, ರತನ್ ಟಾಟಾ ಮುಂತಾದವರಿಗೂ ಆಹ್ವಾನ ನೀಡಲಾಗಿದೆ. ಅಂದಾಜು 50 ದೇಶಗಳ ಪ್ರತಿನಿಧಿಗಳನ್ನು ಕೂಡ ಆಹ್ವಾನಿಸಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ ಮಂದಿರ ಉದ್ಘಾಟನಾ ಸಮಾರಂಭ ಬಹಳ ನಿರೀಕ್ಷೆ ಮೂಡಿಸಿದೆ. ಅಪಾರ ಸಂಖ್ಯೆಯಲ್ಲಿ ರಾಮನ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು

ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಆಗಲಿದೆ. ಚಿತ್ರರಂಗದ ಅನೇಕ ಗಣ್ಯರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​, ಮಾಧುರಿ ದೀಕ್ಷಿತ್​, ಅನುಪಮ್​ ಖೇರ್​, ಅಕ್ಷಯ್​ ಕುಮಾರ್​, ರಾಜ್​ಕುಮಾರ್​ ಹಿರಾನಿ, ಸಂಜಯ್​ ಲೀಲಾ ಬನ್ಸಾಲಿ, ರೋಹಿತ್​ ಶೆಟ್ಟಿ, ಮಹಾವೀರ್​ ಜೈನ್​, ರಜನಿಕಾಂತ್​, ಚಿರಂಜೀವಿ, ಮೋಹನ್​ಲಾಲ್​, ಧನುಶ್​ ಕೂಡ ಹಾಜರಿ ಹಾಕುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:48 pm, Mon, 25 December 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More