AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ?

ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಆಗಲಿದೆ. ಚಿತ್ರರಂಗದ ಅನೇಕ ಗಣ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ. ಕನ್ನಡದ ಸೆಲೆಬ್ರಿಟಿಗಳನ್ನು ಕೂಡ ಆಹ್ವಾನಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆಹ್ವಾನಿತರ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಮೂಡಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ?
ರಿಷಬ್​ ಶೆಟ್ಟಿ, ಯಶ್​. ಪ್ರಭಾಸ್​. ರಣಬೀರ್​ ಕಪೂರ್​
ಮದನ್​ ಕುಮಾರ್​
| Edited By: |

Updated on:Dec 28, 2023 | 11:11 AM

Share

ಅಯೋಧ್ಯೆಯಲ್ಲಿ ನಿರ್ಮಾಣ ಆಗಿರುವ ರಾಮ ಮಂದಿರ (Ram Mandir) ಉದ್ಘಾಟನೆಗಾಗಿ ಭಕ್ತರು ಎದುರು ನೋಡುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾದಿದ್ದಾರೆ. ರಾಮ ಮಂದಿರ ಉದ್ಘಾಟನಾ (Ram Mandir Inauguration) ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದೆ. ಕೆಲವು ಸೆಲೆಬ್ರಿಟಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಆದರೆ ಎಲ್ಲರಿಗೂ ಅವಕಾಶ ಸಿಗುವುದು ಕಷ್ಟ. ಕೆಲವು ಸೆಲೆಬ್ರಿಟಿಗಳಿಗೆ ಅಧಿಕೃತವಾಗಿ ಆಹ್ವಾನ ಬಂದಿದೆ ಎಂದು ಹೇಳಲಾಗುತ್ತಿದೆ. ಯಶ್​ (Yash), ಪ್ರಭಾಸ್, ರಿಷಬ್​ ಶೆಟ್ಟಿ, ರಣಬೀರ್​ ಕಪೂರ್​ ಮುಂತಾದವರನ್ನು ಆಹ್ವಾನಿಸಲಾಗಿದೆ ಎಂದು ವರದಿ ಆಗಿದೆ.

ಈ ಕುರಿತು ‘ಬಾಲಿವುಡ್​ ಹಂಗಾಮಾ’ ವರದಿ ಪ್ರಕಟ ಮಾಡಿದೆ. ಆಲಿಯಾ ಭಟ್​, ರಣಬೀರ್​ ಕಪೂರ್​, ಟೈಗರ್​ ಶ್ರಾಫ್​, ಸನ್ನಿ ಡಿಯೋಲ್​, ಅಜಯ್​ ದೇವಗನ್​, ಆಯುಷ್ಮಾನ್​ ಖುರಾನಾ, ಪ್ರಭಾಸ್​ ಹಾಗೂ ಯಶ್​ ಅವರಿಗೆ ಆಹ್ವಾನ ಹೋಗಿರುವುದು ಖಚಿತ ಎಂದು ಈ ವರದಿಯಲ್ಲಿ ತಿಳಿಸಲಾಗಿದೆ. ಕನ್ನಡದ ಸೆಲೆಬ್ರಿಟಿಗಳನ್ನು ಕೂಡ ಆಹ್ವಾನಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುತ್ತಾರಾ ಖರ್ಗೆ-ಸೋನಿಯಾ ಗಾಂಧಿ?

ಬೇರೆ ವರದಿಗಳ ಪ್ರಕಾರ ಮುಖೇಶ್​ ಅಂಬಾನಿ, ಸಚಿನ್​ ತೆಂಡೂಲ್ಕರ್​, ವಿರಾಟ್​ ಕೊಹ್ಲಿ, ಗೌತಮ್​ ಅದಾನಿ, ರತನ್ ಟಾಟಾ ಮುಂತಾದವರಿಗೂ ಆಹ್ವಾನ ನೀಡಲಾಗಿದೆ. ಅಂದಾಜು 50 ದೇಶಗಳ ಪ್ರತಿನಿಧಿಗಳನ್ನು ಕೂಡ ಆಹ್ವಾನಿಸಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ ಮಂದಿರ ಉದ್ಘಾಟನಾ ಸಮಾರಂಭ ಬಹಳ ನಿರೀಕ್ಷೆ ಮೂಡಿಸಿದೆ. ಅಪಾರ ಸಂಖ್ಯೆಯಲ್ಲಿ ರಾಮನ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು

ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಆಗಲಿದೆ. ಚಿತ್ರರಂಗದ ಅನೇಕ ಗಣ್ಯರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​, ಮಾಧುರಿ ದೀಕ್ಷಿತ್​, ಅನುಪಮ್​ ಖೇರ್​, ಅಕ್ಷಯ್​ ಕುಮಾರ್​, ರಾಜ್​ಕುಮಾರ್​ ಹಿರಾನಿ, ಸಂಜಯ್​ ಲೀಲಾ ಬನ್ಸಾಲಿ, ರೋಹಿತ್​ ಶೆಟ್ಟಿ, ಮಹಾವೀರ್​ ಜೈನ್​, ರಜನಿಕಾಂತ್​, ಚಿರಂಜೀವಿ, ಮೋಹನ್​ಲಾಲ್​, ಧನುಶ್​ ಕೂಡ ಹಾಜರಿ ಹಾಕುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:48 pm, Mon, 25 December 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?