‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ

ರಾಕಿಂಗ್ ಸ್ಟಾರ್ ಯಶ್ ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರದ ಜೊತೆಗೆ ಸಹ-ನಿರ್ಮಾಪಕರಾಗಿದ್ದಾರೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಪ್ರಕಾರ, ಯಶ್ ಕೇವಲ ನಟರಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ವಿಶ್ವದರ್ಜೆಯ ಚಿತ್ರವನ್ನು ನಿರ್ಮಿಸುವ ದೃಷ್ಟಿಕೋನ ಹೊಂದಿದ್ದಾರೆ. ಭಾರತದಿಂದ ವಿಶ್ವಕ್ಕೆ ಅನನ್ಯ ಸಿನಿಮಾ ನೀಡುವ ಅವರ ಬದ್ಧತೆಯನ್ನು ನಮಿತ್ ಶ್ಲಾಘಿಸಿದ್ದಾರೆ.

‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ
ನಮಿತ್-ಯಶ್

Updated on: Jun 02, 2026 | 12:13 PM

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರ ನಟನೆಯ ‘ರಾಮಾಯಣ’ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುವುದರ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಕನ್ನಡದ ಹೀರೋ ಒಬ್ಬರು ಬಾಲಿವುಡ್ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂದರೆ ಅದು ನಿಜಕ್ಕೂ ಹೆಮ್ಮೆಯ ಸಂಗತಿ. ಯಶ್ ಅವರು ಕೇವಲ ಕಾಟಾಚಾರಕ್ಕೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿಲ್ಲ. ಈ ವಿಷಯವನ್ನು ಚಿತ್ರದ ಪ್ರಮುಖ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ವಿವರಿಸಿದ್ದಾರೆ.

‘ಯಶ್ ಅವರಲ್ಲಿರುವ ಶ್ರೇಷ್ಠ ಗುಣ ಏನೆಂದರೆ, ಅವರು ಕೇವಲ ಒಬ್ಬ ಅದ್ಭುತ ನಟ ಮಾತ್ರ ಅಲ್ಲ. ನಾವು ಹಾಕಿಕೊಂಡಿದ್ದ ಗುರಿ ಮತ್ತು ನಮ್ಮ ಆಕಾಂಕ್ಷೆಯನ್ನು ಅವರು ನೋಡಿದ ತಕ್ಷಣವೇ ನಮ್ಮೊಂದಿಗೆ ಕೈಜೋಡಿಸಿದರು. ಸಂಪೂರ್ಣ ಬೆಂಬಲವನ್ನು ನೀಡಿದ ಅವರು, ನಮಿತ್, ನಾವು ಇದನ್ನು ಒಟ್ಟಾಗಿ ಮಾಡಬೇಕು ಮತ್ತು ಇದನ್ನು ಸಾಧ್ಯವಾದಷ್ಟು ಅತ್ಯುತ್ತಮ ರೀತಿಯಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಹೇಳಿದರು’ ಎಂಬುದಾಗಿ ನಮಿತ್ ವಿವರಿಸಿದ್ದಾರೆ.

‘ಅವರ ಆ ಮಾತು ನನಗೆ ಅತ್ಯಂತ ಅಮೂಲ್ಯವಾದದ್ದು. ಏಕೆಂದರೆ, ಅವರಂತಹ ದೊಡ್ಡ ಮಟ್ಟದ ವ್ಯಕ್ತಿಯೊಬ್ಬರು ಕೇವಲ ಒಬ್ಬ ನಟನಾಗಿ ಮಾತ್ರ ಉಳಿಯದೆ, ನಮ್ಮೊಂದಿಗೆ ಜೊತೆಯಾಗಿ ನಿಂತು ತಮ್ಮ ಸಂಪೂರ್ಣ ಶಕ್ತಿಯನ್ನು ಧಾರೆ ಎರೆದಾಗ ತುಂಬಾ ದೂರದವರೆಗೆ ಸಾಗಲು ಸಹಾಯ ಮಾಡುತ್ತದೆ. ಅವರ ಆ ಧೃಢ ಸಂಕಲ್ಪವೇ ಇಂದು ಜನರ ಕಣ್ಣಮುಂದೆ ಕಾಣಿಸುತ್ತಿದೆ ಎಂದು ನಾನು ಭಾವಿಸುತ್ತೇನೆ. ಅಂತಿಮವಾಗಿ ನಾವು ಭಾರತದಿಂದ ಇಡೀ ಜಗತ್ತಿಗಾಗಿ, ಈ ಹಿಂದೆ ಎಂದೂ ಮಾಡಿರದಂತಹ ಒಂದು ವಿಶಿಷ್ಟವಾದ ಕೆಲಸವನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂಬುದು ನಮಿತ್ ಮಾತು.

ಇದನ್ನೂ ಓದಿ: ನನ್ನಲ್ಲಿದ್ದ ಕೆಟ್ಟ ಅಭ್ಯಾಸಗಳನ್ನು ರಾಮಾಯಣ ದೂರ ಮಾಡಿದೆ ಎಂದ ರಣಬೀರ್

‘ರಾಮಾಯಣ’ ಸಿನಿಮಾ ಎರಡು ಪಾರ್ಟ್​ ಅಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗ ಈ ವರ್ಷ ದೀಪಾವಳಿಗೆ, ಎರಡನೇ ಭಾಗ ಮುಂದಿನ ವರ್ಷ ದೀಪಾವಳಿಗೆ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us