AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 3ರಂದು ಬಿಡುಗಡೆ ಆಗಲಿದೆ ಯಶ್ ನಟನೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಿಂದ ಅಪ್​ಡೇಟ್​ ಪಡೆಯಲು ಕಾಯುತ್ತಿರುವ ಅಭಿಮಾನಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಯಶ್, ರಣಬೀರ್ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡುತ್ತಿರುವ ಈ ಚಿತ್ರದಿಂದ ಫಸ್ಟ್ ಗ್ಲಿಂಪ್ಸ್ ಸಿದ್ಧವಾಗಿದೆ. ಅಭಿಮಾನಿಗಳ ಎದುರಲ್ಲಿ ಫಸ್ಟ್ ಗ್ಲಿಂಪ್ಸ್ ಅನಾವರಣ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜುಲೈ 3ರಂದು ಬಿಡುಗಡೆ ಆಗಲಿದೆ ಯಶ್ ನಟನೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್
Yash, Sai Pallavi, Ranbir Kapoor
ಮದನ್​ ಕುಮಾರ್​
|

Updated on: Jun 30, 2025 | 9:34 PM

Share

ಬಹುತಾರಾಗಣದ ‘ರಾಮಾಯಣ’ ಸಿನಿಮಾ (Ramayana Movie) ಮೇಲೆ ಅಭಿಮಾನಿಗಳು ಇಟ್ಟಿರುವ ನಿರೀಕ್ಷೆ ತುಂಬಾ ದೊಡ್ಡದಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ (Yash) ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಈವರೆಗೂ ಈ ಚಿತ್ರದಿಂದ ಯಾವುದೇ ಕಂಟೆಂಟ್ ಬಿಡುಗಡೆ ಆಗಿಲ್ಲ. ಇದೇ ಮೊದಲ ಬಾರಿಗೆ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಅದಕ್ಕೆ ದಿನಾಂಕ ಕೂಡ ನಿಗದಿ ಆಗಿದೆ. ಹೌದು, ಜುಲೈ 3ರಂದು ‘ರಾಮಾಯಣ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ (Ramayana Movie First Glimpse) ರಿಲೀಸ್ ಆಗಲಿದೆ. ಆ ಕುರಿತು ಮಾಹಿತಿ ಹೊರಬಿದ್ದಿದೆ.

‘ರಾಮಾಯಣ’ ಸಿನಿಮಾಗೆ ನಿತೀಶ್ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ದಂಗಲ್’, ‘ಚಿಚೋರೆ’ ರೀತಿಯ ಗಮನಾರ್ಹ ಸಿನಿಮಾಗಳನ್ನು ನೀಡಿರುವ ನಿತೀಶ್ ತಿವಾರಿ ಅವರು ಈಗ ಪುರಾಣದ ಕಹಾನಿಯನ್ನು ತೆರೆಗೆ ತರುತ್ತಿದ್ದಾರೆ. ಈ ಸಿನಿಮಾ ಬಹಳ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಚಿತ್ರತಂಡದಿಂದ ಜುಲೈ 3ರಂದು ಬಿಗ್ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಅಭಿಮಾನಿಗಳ ಸಮ್ಮುಖದಲ್ಲೇ ‘ರಾಮಾಯಣ’ ಚಿತ್ರದ ಫಸ್ಟ್ ಗ್ಲಿಂಪ್ಸ್ ಅನಾವರಣ ಆಗಲಿದೆ. ದೇಶದ ಪ್ರಮುಖ ನಗರಗಳಲ್ಲಿ ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯ್ದ ಚಿತ್ರಮಂದಿರಗಳಲ್ಲಿ, ಅಭಿಮಾನಿಗಳ ಎದುರಲ್ಲೇ ಫಸ್ಟ್ ಗ್ಲಿಂಪ್ಸ್ ಬಿತ್ತರ ಆಗಲಿದೆ. ಈ ಸಿನಿಮಾದ ಬಿಡುಗಡೆಗೆ ಇನ್ನೂ ಸಾಕಷ್ಟು ಸಮಯ ಇದೆ. ಆದರೆ ಈಗಲೇ ಈ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ
Image
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
Image
ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ
Image
ರಾಕಿಂಗ್ ಸ್ಟಾರ್ ಯಶ್ ಈ ವ್ಯಕ್ತಿಗೆ ಬಾಸ್ ಎಂದು ಕರೆಯುತ್ತಾರೆ ಯಶ್
Image
ಕಡಲ ತೀರದಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರ

‘ರಾಮಾಯಣ’ ಸಿನಿಮಾದ ಮೇಲೆ ಹೈಪ್ ಹೆಚ್ಚಾಗಲು ಕಾರಣವೇ ಪಾತ್ರವರ್ಗ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅವರು ನಟಿಸುತ್ತಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ರಾವಣನ ಪಾತ್ರವನ್ನು ‘ರಾಕಿಂಗ್ ಸ್ಟಾರ್’ ಯಶ್ ಅವರು ಮಾಡುತ್ತಿರುವುದು ವಿಶೇಷ. ಆ ಕಾರಣದಿಂದ ಯಶ್ ಫ್ಯಾನ್ಸ್ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ ಪುಷ್ಪ

ನಮಿತ್ ಮಲ್ಹೋತ್ರಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಯಶ್ ಅವರು ಸಹ-ನಿರ್ಮಾಪಕರಾಗಿದ್ದಾರೆ. ಎರಡು ಪಾರ್ಟ್​ನಲ್ಲಿ ರಾಮಾಯಣ ಸಿನಿಮಾ ಸಿದ್ಧವಾಗುತ್ತಿದೆ. 2026ರ ದೀಪಾವಳಿ ಸಮಯಕ್ಕೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. 2027ರ ದೀಪಾವಳಿಗೆ 2ನೇ ಪಾರ್ಟ್ ತೆರೆಕಾಣಲಿದೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?