AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ರನ್​​​ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್?

Toxic movie: ‘ಟಾಕ್ಸಿಕ್’ ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನಿಮಾದ ರನ್​​ಟೈಮ್ ಜೊತೆಗೆ ಮತ್ತೊಂದು ಸುದ್ದಿಯೂ ಸಹ ಸಖತ್ ವೈರಲ್ ಆಗುತ್ತಿದೆ.

‘ಟಾಕ್ಸಿಕ್’ ರನ್​​​ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್?
Toxic Movie
ಮಂಜುನಾಥ ಸಿ.
|

Updated on: Feb 26, 2026 | 9:01 AM

Share

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮೂರು ವಾರಗಳಷ್ಟೆ ಬಾಕಿ ಇದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಪೂರ್ಣಗೊಂಡಿದ್ದು, ಸಿನಿಮಾದ ಪಾತ್ರಗಳ ಪೋಸ್ಟರ್, ಅದ್ಧೂರಿ ಟೀಸರ್ ಎಲ್ಲವೂ ಬಿಡುಗಡೆ ಆಗಿವೆ. ಇದೀಗ ಯಶ್ ಮತ್ತು ಇತರೆ ತಾರಾಗಣ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಬೇಕಿದೆ. ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನಿಮಾದ ರನ್​​ಟೈಮ್ ಜೊತೆಗೆ ಮತ್ತೊಂದು ಸುದ್ದಿಯೂ ಸಹ ಸಖತ್ ವೈರಲ್ ಆಗುತ್ತಿದೆ.

‘ಟಾಕ್ಸಿಕ್’ ಸಿನಿಮಾ ಇನ್ನೂ ಸೆನ್ಸಾರ್ ಆಗಿಲ್ಲ. ಆದರೆ ಶೀಘ್ರವೇ ಸಿನಿಮಾ ಸೆನ್ಸಾರ್ ಆಗುವ ಸಾಧ್ಯತೆ ಇದೆ. ಏಕೆಂದರೆ ಈಗಾಗಲೇ ಸಿನಿಮಾದ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು ಹೋಗಿರುವುದರಿಂದ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಕಾರಣ, ಚಿತ್ರತಂಡವು ಯೋಜಿತ ಸಮಯಕ್ಕಿಂತಲೂ ಮುಂಚಿತವಾಗಿಯೇ ಸೆನ್ಸಾರ್​​ ಮಂಡಳಿಗೆ ಸಿನಿಮಾವನ್ನು ಕಳಿಸಲಿದೆ. ಬಹುಷಃ ಮುಂದಿನ ವಾರ ಸಿನಿಮಾಕ್ಕೆ ಸೆನ್ಸಾರ್ ಆಗುವ ಸಾಧ್ಯತೆ ಇದೆ.

ಆದರೆ ಆ ಒಳಗೆ ಸಿನಿಮಾದ ರನ್​​ಟೈಮ್ ಅಂದರೆ ಸಿನಿಮಾದ ಒಟ್ಟು ಅವಧಿ ಲೀಕ್ ಆಗಿದ್ದು, ‘ಟಾಕ್ಸಿಕ್’ ಸಿನಿಮಾದ ಒಟ್ಟು ರನ್​​ಟೈಮ್ ಕೇವಲ 2 ಗಂಟೆ 20 ನಿಮಿಷ ಎನ್ನಲಾಗುತ್ತಿದೆ. ಇದು ಕೆಲವು ಯಶ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರೆ ಇನ್ನು ಕೆಲವರಿಗೆ ಡಬಲ್ ಖುಷಿಯನ್ನು ಸಹ ತಂದಿದೆ. ಈಗೆಲ್ಲ ಸಿನಿಮಾಗಳು 3 ಗಂಟೆ ವರೆಗೆ ರನ್​​ಟೈಮ್ ಹೊಂದಿರುತ್ತವೆ, ಕೆಲ ಸಿನಿಮಾಗಳು ಮೂರು ಗಂಟೆಗೂ ಹೆಚ್ಚಿನ ರನ್​​ಟೈಮ್ ಅನ್ನು ಸಹ ಹೊಂದಿವೆ. ಆದರೆ ‘ಟಾಕ್ಸಿಕ್’ ಸಿನಿಮಾ ಬಹಳ ಕಡಿಮೆ ರನ್​​ಟೈಮ್ ಹೊಂದಿರುವುದು ಆಶ್ಚರ್ಯ ತಂದಿದೆ.

ಇದನ್ನೂ ಓದಿ:ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ

‘ಟಾಕ್ಸಿಕ್’ ಸಿನಿಮಾ ಸೀಕ್ವೆಲ್​​​ನಲ್ಲಿ ಬಿಡುಗಡೆ ಆಗುತ್ತಿರುವ ಕಾರಣದಿಂದಾಗಿ ಸಿನಿಮಾದ ರನ್​​ಟೈಮ್​​ ಕಡಿಮೆ ಮಾಡಲಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ‘ಟಾಕ್ಸಿಕ್’ ಸಿನಿಮಾ ಟೀಸರ್ ಸೀಕ್ವೆಲ್​​ನ ಬಗ್ಗೆ ಸಣ್ಣ ಸುಳಿವು ನೀಡಿದೆ. ‘ಟಾಕ್ಸಿಕ್’ ಸಿನಿಮಾ ಅಪ್ಪ-ಮಗನ ಕತೆ ಆಗಿರುವ ಕಾರಣ, ಮೊದಲ ಭಾಗದಲ್ಲಿ ರಾಯನ ಇತಿಹಾಸ, ಅವರ ಸಾಹಸಗಳನ್ನು ತೋರಿಸಿ, ಕ್ಲೈಮ್ಯಾಕ್ಸ್​​ನಲ್ಲಿ ಅವನ ಮಗ ಟಿಕೆಟ್​ ಪಾತ್ರವನ್ನು ಇಂಟ್ರೊಡ್ಯೂಸ್ ಮಾಡಿಸುವ ಸಾಧ್ಯತೆ ಇದ್ದು, ಈ ಇಬ್ಬರ ನಡುವಿನ ಜಿದ್ದಾಜಿದ್ದಿನ ಕತೆಯನ್ನು ಎರಡನೇ ಭಾಗದಲ್ಲಿ ತೋರಿಸುವ ಯೋಜನೆ ಇದ್ದಂತಿದೆ.

ಇದೇ ಕಾರಣಕ್ಕೆ ‘ಟಾಕ್ಸಿಕ್’ ಸಿನಿಮಾದ ರನ್​​ಟೈಮ್ ಕಡಿಮೆ ಮಾಡಿ ಎರಡೂ ಕತೆಯನ್ನು ನಿರ್ದೇಶಕರು ಎರಡು ಭಾಗಗಳಿಗೆ ವಿಸ್ತರಿಸಿದಂತಿದ್ದಾರೆ. ಅಲ್ಲದೆ, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​​ಗಾಗಿ ಸುಮಾರು ಮೂರು ವರ್ಷಕ್ಕೂ ಹೆಚ್ಚು ಅವಧಿಯನ್ನು ಖರ್ಚು ಮಾಡಲಾಗಿದ್ದು, ಈ ಅವಧಿಯನ್ನು ಕೇವಲ 2:20 ನಿಮಿಷದ ಸಿನಿಮಾ ಮಾತ್ರವನ್ನೇ ಚಿತ್ರೀಕರಿಸಲಾಗಿದೆ ಎಂದರೆ ನಂಬಲು ತುಸು ಕಷ್ಟವೇ. ‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​​ದಾಸ್ ನಿರ್ದೇಶಿಸಿದ್ದು, ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ