AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆ ಅಭಿನಂದನೆ ಸಲ್ಲಿಸಿದ ಯಶ್, ನಾಗರೀಕರಿಗೆ ಜಾಗೃತೆ ಸಂದೇಶ

Yash: ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ಇದೆ. ಭಾರತೀಯ ಸೈನಿಕರು ಪಾಕಿಸ್ತಾನದ ಸತತ ವೈಮಾನಿಕ ದಾಳಿಯನ್ನು ತಡೆಯುತ್ತಿದ್ದಾರೆ. ಇದೀಗ ನಟ ಯಶ್ ಟ್ವೀಟ್ ಮಾಡಿದ್ದು ಭಾರತೀಯ ಸೇನೆಯ ಅಚಲ ಶಕ್ತಿ ಮತ್ತು ನಿಖರತೆಗೆ ಸಲಾಂ ಎಂದಿದ್ದಾರೆ. ಇದರ ಜೊತೆಗೆ ಈ ಸಮಯದಲ್ಲಿ ನಾಗರೀಕರಾದ ನಾವು ಏನು ಮಾಡಬೇಕೆಂದು ಸಲಹೆ ನೀಡಿದ್ದಾರೆ.

ಭಾರತೀಯ ಸೇನೆ ಅಭಿನಂದನೆ ಸಲ್ಲಿಸಿದ ಯಶ್, ನಾಗರೀಕರಿಗೆ ಜಾಗೃತೆ ಸಂದೇಶ
Yash Army
ಮಂಜುನಾಥ ಸಿ.
|

Updated on: May 09, 2025 | 4:21 PM

Share

ಪಾಕಿಸ್ತಾನದ ಸತತ ದಾಳಿಯ ವಿರುದ್ಧ ಭಾರತ ಸೇನೆಯು ಪ್ರಬಲ ಹೋರಾಟ ಮಾಡುತ್ತಿದೆ. ಸೇನೆಯ ಮಾಹಿತಿಯಂತೆ ಪಾಕಿಸ್ತಾನದ ಸತತ ವೈಮಾನಿಕ ದಾಳಿಯನ್ನು ಭಾರತೀಯ ಸೇನೆಯು ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ತಡೆಯೊಡ್ಡಿದೆ. ಆಗಬಹುದಾಗಿದ್ದ ಭಾರಿ ದೊಡ್ಡ ಅನಾಹುತ, ಪ್ರಾಣಹಾನಿಯನ್ನು ಸೈನ್ಯವು ತಡೆದಿದೆ. ಅದರ ಜೊತೆಗೆ ಪಾಕಿಸ್ತಾನದ ಉಗ್ರರ ನೆಲೆಗಳು, ಸೇನಾ ನೆಲೆಗಳ ಮೇಲೆ ದಾಳಿಯನ್ನು ಮುಂದುವರೆಸಿದೆ. ಭಾರತದ ಹಲವು ಸಿನಿಮಾ ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೈನ್ಯದ ಕಾರ್ಯವೈಖರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಟ ಯಶ್ ಇದೀಗ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ನಿಖರತೆಗೆ ಸಲಾಂ, ಭಾರತೀಯ ಸೇನೆ ನಮ್ಮ ಪ್ರಬಲ ರಕ್ಷಣೆ. ಸೈನಿಕರ ಅವಿರತ ಸೇವೆಗೆ ಕೃತಜ್ಞತೆಯ ಜೊತೆಗೆ ನಾವೆಲ್ಲ ಒಗ್ಗಟ್ಟಾಗಿ ನಿಲ್ಲುತ್ತೇವೆ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಖಾತ್ರಿಪಡಿಸಬೇಕಿದೆ. ಈ ಸಮಯದಲ್ಲಿ ನಾವು ಹೆಚ್ಚು ಜಾಗೃತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ವಿಶೇಷವಾಗಿ ಆನ್​ಲೈನ್​ನಲ್ಲಿ ಮಾಹಿತಿ ಅಥವಾ ಸುದ್ದಿ ಹಂಚಿಕೊಳ್ಳುವಾಗ ಎಚ್ಚರಿಕೆಯಿಂದ ಇರಬೇಕಾಗಿದೆ. ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆಯನ್ನು ನಾವು ಖಾತ್ರಿಪಡಿಸಿಕೊಳ್ಳಬೇಕಿದೆ. ತಪ್ಪು ಮಾಹಿತಿಯ ವಿರುದ್ಧ ನಮ್ಮ ಹೋರಾಟ ಭಾರತೀಯ ಸೇನೆಗೆ ಶಕ್ತಿ ತುಂಬಲಿದೆ. ಇಂಥಹಾ ಸಂಕಷ್ಟದ ಸನ್ನಿವೇಶದಲ್ಲಿ ನಮ್ಮ ಪ್ರಾರ್ಥನೆ ದೇಶದ ಸೈನಿಕರೊಂದಿಗೆ ಇರಲಿದೆ’ ಎಂದಿದ್ದಾರೆ ನಟ ಯಶ್.

ಇದನ್ನೂ ಓದಿ:ಯಶ್ ಬಾಲಿವುಡ್ ಸಿನಿಮಾಕ್ಕೆ ಮಹಾರಾಷ್ಟ್ರ ಸಿಎಂ ಮೆಚ್ಚುಗೆ

ನಟ ಯಶ್ ಟ್ವೀಟ್ ಮಾಡುವುದು ತುಸು ಅಪರೂಪವಾಗಿದೆ. ಆದರೆ ರಾಷ್ಟ್ರೀಯ ದುರ್ಘಟನೆಗಳು ನಡೆದಾಗ ತಪ್ಪದೆ ಯಶ್ ಟ್ವೀಟ್ ಮಾಡುತ್ತಾರೆ. ಏಪ್ರಿಲ್ 23ರಂದು ನಡೆದ ಪಹಾಲ್ಗಾಮ್ ದಾಳಿಯ ಬಗ್ಗೆ ಯಶ್ ಟ್ವೀಟ್ ಮಾಡಿ ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದರು. ಅದಾದ ಬಳಿಕ ಮತ್ತೆ ಇಂದು ಟ್ವೀಟ್ ಮಾಡಿ ಭಾರತೀಯ ಸೇನೆಗೆ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಮುಂಚೆ ಜನವರಿಯಲ್ಲಿ ತಮ್ಮದೇ ಹುಟ್ಟಹಬ್ಬದಂದು ಟ್ವೀಟ್ ಮಾಡಿದ್ದರು.

ಏಪ್ರಿಲ್ 23 ರಂದು ನಡೆದ ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತವು ಪಿಓಕೆಗೆ ನುಗ್ಗಿ ಅಲ್ಲಿನ ಉಗ್ರರ ಅಡಗುತಾಣಗಳ ಮೇಲೆ ಬಾಂಬ್ ಮಳೆಗರಿದಿತ್ತು. ಈ ದಾಳಿಯಲ್ಲಿ ಹಲವಾರು ಉಗ್ರರು ನಿಧನ ಹೊಂದಿದ್ದರು. ಈ ಮಿಲಿಟರಿ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿತ್ತು. ಇದೀಗ ಆಪರೇಷನ್ ಸಿಂಧೂರದ ಬಳಿಕ ಪಾಕ್ ಸೈನ್ಯ ಭಾರತದ ವಿರುದ್ಧ ಅಪ್ರಚೋದಿತ ದಾಳಿ ನಡೆಸಿದ್ದು, ಭಾರತೀಯ ಸೇನೆಯು ಅದಕ್ಕೆ ದಿಟ್ಟ ಪ್ರತ್ಯುತ್ತರ ನೀಡುತ್ತಿದೆ. ನಟ ಯಶ್ ಮಾತ್ರವಲ್ಲದೆ ನಟ ಸುದೀಪ್, ಶಿವರಾಜ್ ಕುಮಾರ್, ಧನಂಜಯ್ ಇನ್ನೂ ಹಲವಾರು ಮಂದಿ ಭಾರತೀಯ ಸೇನೆಯ ಶೌರ್ಯವನ್ನು ಕೊಂಡಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ