AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಟ್ರಾಂಗ್​ ಬಾಡಿ, ಸ್ಟ್ರಾಂಗ್​ ಮನಸ್ಸು’; ವಿಡಿಯೋ ಸಹಿತ ಸಾಕ್ಷಿ ತೋರಿಸಿದ ನಟಿ ಸಮಂತಾ

Samantha: ಫಿಟ್ನೆಸ್​ ಬಗ್ಗೆ ನಟಿ ಸಮಂತಾ ಅವರಿಗೆ ಹೆಚ್ಚು ಕಾಳಜಿ ಇದೆ. ಆ್ಯಕ್ಷನ್​ ಪಾತ್ರಗಳನ್ನು ಮಾಡುತ್ತಿರುವ ಅವರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

‘ಸ್ಟ್ರಾಂಗ್​ ಬಾಡಿ, ಸ್ಟ್ರಾಂಗ್​ ಮನಸ್ಸು’; ವಿಡಿಯೋ ಸಹಿತ ಸಾಕ್ಷಿ ತೋರಿಸಿದ ನಟಿ ಸಮಂತಾ
ಸಮಂತಾ
Follow us
TV9 Web
| Updated By: ಮದನ್​ ಕುಮಾರ್​

Updated on: Apr 16, 2022 | 3:31 PM

ಒಂದಿಲ್ಲೊಂದು ಕಾರಣಕ್ಕೆ ನಟಿ ಸಮಂತಾ (Samantha) ಅವರು ಪ್ರತಿ ದಿನವೂ ಸುದ್ದಿ ಆಗುತ್ತಾರೆ. ಅವರನ್ನು ಕೆಲವರು ಟೀಕಿಸುತ್ತಾರೆ. ಆದರೆ ಅಪಾರ ಸಂಖ್ಯೆಯ ಅಭಿಮಾನಿಗಳು ಪ್ರೀತಿಸುತ್ತಾರೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಜೀವನದ ವಿಚಾರಗಳಿಗಾಗಿ ಸಮಂತಾ ಆಗಾಗ ಚರ್ಚೆಯ ವಿಷಯ ಆಗುತ್ತಾರೆ. ಪತಿ ನಾಗ ಚೈತನ್ಯ ಜೊತೆಗಿನ ಸಂಸಾರಕ್ಕೆ ಗುಡ್​ ಬೈ ಹೇಳಿದ ಬಳಿಕ ಅವರ ಬದುಕಿನ ಶೈಲಿ ಸಾಕಷ್ಟು ಬದಲಾಗಿದೆ. ಪ್ರತಿ ದಿನವೂ ಫಿಟ್ನೆಸ್​ (Samantha Fitness) ಸಲುವಾಗಿ ಸಮಯ ನೀಡುವ ಸಮಂತಾ ಅವರು ಜಿಮ್​ನಲ್ಲಿ ಕಠಿಣ ವರ್ಕೌಟ್​ ಮಾಡುತ್ತಿದ್ದಾರೆ. ಅದರ ಒಂದು ವಿಡಿಯೋವನ್ನು (Samantha Gym Video) ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಇತರರಿಗೂ ಸ್ಫೂರ್ತಿ ಬರುವಂತೆ ಮಾಡಿದ್ದಾರೆ. ಈ ವಿಡಿಯೋಗೆ ಸಮಂತಾ ಕ್ಯಾಪ್ಷನ್​ ನೀಡಿರುವುದು ಗಮನ ಸೆಳೆಯುತ್ತಿದೆ. ‘ಸ್ಟ್ರಾಂಗ್​ ಬಾಡಿ, ಸ್ಟ್ರಾಂಗ್​ ಮನಸ್ಸು’ ಎಂದು ಬರೆದುಕೊಂಡಿರುವ ಅವರು ತಮ್ಮ ಉದ್ದೇಶ ಏನು ಎಂಬುದನ್ನು ಕೂಡ ತಿಳಿಸಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ವೈರಲ್​ ಆಗಿದೆ.

ಹಲವು ಬಗೆಯ ಪಾತ್ರಗಳನ್ನು ಸಮಂತಾ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ‘ಶಾಕುಂತಲಂ’, ‘ಯಶೋಧ’, ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಮುಂತಾದ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾ ಏ.28ಕ್ಕೆ ಬಿಡುಗಡೆ ಆಗಲಿದೆ. ‘ಯಶೋದಾ’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಹರಿ ಶಂಕರ್ ಹಾಗೂ ಹರಿ ನಾರಾಯಣ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಮಂತಾ ಅವರು ಯಶೋದಾ ಆಗಿ ನಟಿಸುತ್ತಿದ್ದಾರೆ. ಉನ್ನಿ ಮುಕುಂದನ್​, ವರಲಕ್ಷ್ಮೀ ಶರತ್​ಕುಮಾರ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಸೈನ್ಸ್​ ಫಿಕ್ಷನ್​ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿದ್ದು, ಸಮಂತಾ ಆ್ಯಕ್ಷನ್ ದೃಶ್ಯಗಳಲ್ಲಿ ಮಿಂಚಲಿದ್ದಾರೆ. ಹಾಗಾಗಿ ಅವರ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

‘2022 ಮತ್ತು 2023ರ ವರ್ಷ ನನ್ನ ಪಾಲಿಗೆ ದೈಹಿಕವಾಗಿ ಹೆಚ್ಚು ಶ್ರಮ ಬೇಡುವ ಮತ್ತು ಸವಾಲಿನ ಸಮಯ ಆಗಿರಲಿದೆ’ ಎಂದು ಸಮಂತಾ ಹೇಳಿದ್ದಾರೆ. ಆ ಕಾರಣಕ್ಕಾಗಿ ಅವರು ಈ ಪರಿ ವರ್ಕೌಟ್​ ಮಾಡುತ್ತಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಅವರು ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸಿದ್ದರು. ಅವರ ಫೈಟಿಂಗ್​ ಕಂಡು ಅಭಿಮಾನಿಗಳು ಭೇಷ್​ ಎಂದಿದ್ದರು. ಈ ರೀತಿಯ ಪಾತ್ರಗಳನ್ನು ಮಾಡಲು ಬಾಡಿ ಫಿಟ್​ ಆಗಿರಬೇಕಾದ್ದು ತುಂಬ ಅಗತ್ಯ. ಹಾಗಾಗಿ ಸಮಂತಾ ಅವರು ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ.

ಅದೇ ರೀತಿ ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿಯೂ ಸಮಂತಾ ಹಿಂದೆ ಬಿದ್ದಿಲ್ಲ. ‘ಪುಷ್ಪ’ ಸಿನಿಮಾದಲ್ಲಿ ‘ಹು ಅಂತೀಯಾ ಮಾವ.. ಊಹೂ ಅಂತೀಯಾ ಮಾವ..’ ಹಾಡಿಗೆ ಹೆಜ್ಜೆ ಹಾಕಿದ ಅವರು ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದರು. ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿಯೂ ಅವರು ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುತ್ತಾರೆ ಎಂಬುದಕ್ಕೆ ಈಗ ಸಾಕ್ಷಿ ಸಿಕ್ಕಿದೆ. ಈ ಸಿನಿಮಾದಲ್ಲಿ ನಯನತಾರಾ ಮತ್ತು ವಿಜಯ್​ ಸೇತುಪತಿ ಕೂಡ ನಟಿಸಿದ್ದಾರೆ. ನಯನತಾರಾ ಪ್ರಿಯತಮ ವಿಘ್ನೇಶ್​ ಶಿವನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ‘ಟು ಟು ಟು..’ ಹಾಡಿನ ಗ್ಲಿಂಪ್ಸ್​ ರಿಲೀಸ್​ ಆಗಿದ್ದು, ಅದರಲ್ಲಿ ಸಮಂತಾ ಅವರು ಶಾರ್ಟ್​ ಡ್ರೆಸ್​ ಧರಿಸಿ ಡ್ಯಾನ್ಸ್​ ಮಾಡಿದ್ದಾರೆ.

ಇದನ್ನೂ ಓದಿ:

ಮಾಜಿ ಗಂಡನ ಫ್ಯಾಮಿಲಿ ಕಡೆಗೆ ಮತ್ತೆ ಒಲವು ತೋರಿದ ಸಮಂತಾ; ಏನಿದು ಹೊಸ ಸಮಾಚಾರ?

ಮತ್ತೆ ಚಿಕ್ಕ ಬಟ್ಟೆ ಧರಿಸಿ ಬಂದ ಸಮಂತಾ; ಆದ್ರೆ ಟ್ರೋಲ್​ ಆಗಿದ್ದು ನಯನತಾರಾ ಪ್ರಿಯಕರ: ಕಾರಣ ಏನು?

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್