AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಗ್ನೆಂಟ್ ಕಿಯಾರಾಗೆ ವಿಶೇಷ ಸಹಾಯ ಮಾಡಿದ ಯಶ್; ಆಹಾ ಎಷ್ಟೊಳ್ಳೆ ಮನಸ್ಸು

Toxic Movie: ಯಶ್ 'ಟಾಕ್ಸಿಕ್'ನ ಶೂಟಿಂಗ್​ನ ಗರ್ಭಿಣಿ ನಟಿ ಕಿಯಾರಾ ಅಡ್ವಾಣಿ ಅವರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸಿದ್ದಾರೆ ಎಂದು ವರದಿ ಆಗಿದೆ. ಇದು ಅವರ ಸಹಾಯ ಮನೋಭಾವ ಮತ್ತು ಉದಾರತೆಯನ್ನು ತೋರಿಸುತ್ತದೆ. ಈ ನಿರ್ಧಾರಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ .

ಪ್ರೆಗ್ನೆಂಟ್ ಕಿಯಾರಾಗೆ ವಿಶೇಷ ಸಹಾಯ ಮಾಡಿದ ಯಶ್; ಆಹಾ ಎಷ್ಟೊಳ್ಳೆ ಮನಸ್ಸು
ಯಶ್-ಕಿಯಾರಾ
ರಾಜೇಶ್ ದುಗ್ಗುಮನೆ
|

Updated on:Jun 19, 2025 | 7:35 AM

Share

ನಟ ಯಶ್ (Yash) ಅವರು ‘ಕೆಜಿಎಫ್ 2’ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಹಾಗಂದ ಮಾತ್ರಕ್ಕೆ ಅವರು ತಮ್ಮ ಗುಣವನ್ನು ಬದಲಿಸಿಕೊಂಡಿಲ್ಲ. ಅಭಿಮಾನಿಗಳು ಕಂಡಾಗ ಅವರು ಪ್ರೀತಿಯಿಂದ ಮಾತನಾಡುತ್ತಾರೆ. ಸಹಾಯ ಮನೋಭಾವನೆ ಕೂಡ ಅವರಲ್ಲಿ ಹಾಗೆಯೇ ಇದೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಗೀತು ಮೋಹನ್​ದಾಸ್ ನಿರ್ದೇಶಕಿ. ಈಗ ಯಶ್ ಅವರು ಕಿಯಾರಾ ಅಡ್ವಾಣಿಗಾಗಿ ತೆಗೆದುಕೊಂಡ ಒಂದು ನಿರ್ಧಾರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ ಚಿತ್ರಕ್ಕೆ ಬೆಂಗಳೂರು, ಮುಂಬೈ, ಗೋವಾ ಸೇರಿದಂತೆ ವಿವಿಧ ಕಡೆಗಳಲ್ಲಿ ಶೂಟ್ ನಡೆದಿದೆ. ಈ ಮೊದಲು ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲೇ ನಡೆಯಬೇಕಿತ್ತು. ಅದಾಗಾಗಲೇ ನಟಿ ಕಿಯಾರಾ ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಹೊರ ಬಂತು. ಈ ಕಾರಣಕ್ಕೆ ಚಿತ್ರದ ಶೂಟಿಂಗ್ ಲೊಕೇಶನ್​ನ ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸಿದರು ಯಶ್.

‘ಟಾಕ್ಸಿಕ್’ ಸಿನಿಮಾಗೆ ಕೆವಿಎನ್ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿದೆ. ವೆಂಕಟ್ ನಾರಾಯಣ್ ಅವರು ಈ ಚಿತ್ರಕ್ಕೆ ನಿರ್ಮಾಪಕರು. ಯಶ್ ಕೂಡ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರು. ಹೀಗಾಗಿ, ವೆಂಕಟ್ ಬಳಿ ಮನವಿ ಮಾಡಿ ಅವರು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಶೂಟ್​ನ ಮುಂಬೈಗೆ ಸ್ಥಳಾಂತರಿಸಿದ್ದಾರೆ.

ಇದನ್ನೂ ಓದಿ
Image
ಭಾರತದ ಸಿನಿಮಾ ಇತಿಹಾಸದಲ್ಲೇ ದುಬಾರಿ ಸೆಟ್ ನಿರ್ಮಿಸಿದ ರಾಜಮೌಳಿ
Image
ಅಂಬಿ ಬೈಕ್ ಮೇಲೆ ಸುದೀಪ್; ಅಪರೂಪದ ಫೋಟೋ ಇಲ್ಲಿದೆ
Image
ಮುಚ್ಚುಮರೆ ಇಲ್ಲ; ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್
Image
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ

ಪ್ರೇಗ್ನೆಂಟ್ ಆದ ಸಂದರ್ಭದಲ್ಲಿ ಓಡಾಟ ಮಾಡೋದು ಅಷ್ಟು ಸೂಕ್ತವಲ್ಲ. ಇದನ್ನು ಅರಿತ ಯಶ್ ಅವರು ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡರು. ಕಿಯಾರಾ ಅವರು ಫೆಬ್ರವರಿಯಲ್ಲಿ ಪ್ರೆಗ್ನೆನ್ಸಿ ಅನೌನ್ಸ್ ಮಾಡಿದ್ದಾರೆ. ಅದಕ್ಕೂ ಮೊದಲೇ ಕಿಯಾರಾ ಭಾಗದ ಶೂಟ್​ನ ತಂಡದವರು ಶೂಟ್ ಮುಗಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸದ್ಯ ಯಶ್ ಅವರ ನಡೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಯಶ್ ಮನಸ್ಸು ತುಂಬಾನೇ ದೊಡ್ಡದು ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಯಶ್ ಅವರು ಇದೇ ಕಾರಣಕ್ಕೆ ಇಷ್ಟ ಆಗೋದು ಎಂದು ಬಾಯ್ತುಂಬ ಹೊಗಳಿದ್ದಾರೆ.

ಇದನ್ನೂ ಓದಿ: ಯಶ್ ಜೊತೆ ಇಲ್ಲ ಕ್ಲ್ಯಾಶ್; ‘ಟಾಕ್ಸಿಕ್​’ಗೆ ಭಯಬಿದ್ದು ಹಿಂದೆ ಸರಿದ ಬನ್ಸಾಲಿ

‘ಟಾಕ್ಸಿಕ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. ಯಶ್, ಕಿಯಾರಾ ಅಡ್ವಾಣಿ, ನಯನತಾರಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Thu, 19 June 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!