AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2023: ಹೀನಾಯವಾಗಿ ಮುಗ್ಗರಿಸಿದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳು..  

ಕೆಲವು ಸಿನಿಮಾಗಳು ರಿಲೀಸ್ ಆದ ಬಳಿಕ ಅಂದುಕೊಂಡಷ್ಟು ಕಲೆಕ್ಷನ್ ಮಾಡಲು ವಿಫಲವಾಗುತ್ತವೆ. ಈ ವರ್ಷ ರಿಲೀಸ್ ಆಗಿ ನೆಲಕಚ್ಚಿದ ಹಲವು ಬಹುನಿರೀಕ್ಷಿತ ಸಿನಿಮಾಗಳು ಇವೆ. ಆ ಪೈಕಿ ಕೆಲವು ಸಿನಿಮಾಗಳ ಬಗ್ಗೆ ಇಲ್ಲಿದೆ ವಿವರ.

Year Ender 2023: ಹೀನಾಯವಾಗಿ ಮುಗ್ಗರಿಸಿದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳು..  
ಹೀನಾಯವಾಗಿ ಮುಗ್ಗರಿಸಿತು ಈ ವರ್ಷದ ಈ ಬಹುನಿರೀಕ್ಷಿತ ಚಿತ್ರಗಳು..  
ರಾಜೇಶ್ ದುಗ್ಗುಮನೆ
|

Updated on:Dec 13, 2023 | 12:55 PM

Share

ಒಂದು ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಲು ಹಲವು ಕಾರಣಗಳು ಇರುತ್ತವೆ. ಚಿತ್ರದ ಪಾತ್ರವರ್ಗ, ತಾಂತ್ರಿಕವರ್ಗ, ಸಿನಿಮಾದ ಪೋಸ್ಟರ್, ಟೀಸರ್, ಟ್ರೇಲರ್ (Trailer), ಸಾಂಗ್.. ಹೀಗೆ ಹಲವು ವಿಚಾರಗಳು ಪ್ರೇಕ್ಷಕರ ಮೇಲೆ ಪ್ರಭಾವ ಬೀರುತ್ತವೆ. ಆದರೆ, ಕೆಲವು ಸಿನಿಮಾಗಳು ರಿಲೀಸ್ ಆದ ಬಳಿಕ ಅಂದುಕೊಂಡಷ್ಟು ಕಲೆಕ್ಷನ್ ಮಾಡಲು ವಿಫಲವಾಗುತ್ತವೆ. ಈ ವರ್ಷ ರಿಲೀಸ್ ಆಗಿ ನೆಲಕಚ್ಚಿದ ಹಲವು ಬಹುನಿರೀಕ್ಷಿತ ಸಿನಿಮಾಗಳು ಇವೆ. ಆ ಪೈಕಿ ಕೆಲವು ಸಿನಿಮಾಗಳ ಬಗ್ಗೆ ಇಲ್ಲಿದೆ ವಿವರ.

‘ಆದಿಪುರುಷ್’

ಈ ವರ್ಷ ರಿಲೀಸ್ ಆದ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಆದಿಪುರುಷ್’ ಚಿತ್ರಕ್ಕೂ ಸ್ಥಾನ ಇತ್ತು. ಆದರೆ, ಸಿನಿಮ ಯಾವಾಗ ರಿಲೀಸ್ ಆಯಿತೋ ಜನರು ಚಿತ್ರವನ್ನು ನೋಡಿ ಬಾಯಿಗೆ ಬಂದಂತೆ ಬೈದರು. ರಾಮಾಯಣದ ಕಥೆಯನ್ನು ತಿರುಚಲಾಗಿದೆ ಎಂದು ಅನೇಕರು ಆರೋಪಿಸಿದರು. ಈ ಚಿತ್ರದಿಂದ ಪ್ರಭಾಸ್ ಅವರು ದೊಡ್ಡ ಸೋಲು ಕಂಡರು. ಈ ಚಿತ್ರಕ್ಕೆ ಓಂ ರಾವತ್ ನಿರ್ದೇಶನ ಮಾಡಿದ್ದರು.

ಸೆಲ್ಫೀ

ಅಕ್ಷಯ್ ಕುಮಾರ್ ಅವರ ಸಿನಿಮಾಗಳು ಬಾಲಿವುಡ್​ನಲ್ಲಿ ಅಂದುಕೊಂಡಷ್ಟು ಗಳಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ನಟನೆಯ ‘ಸೆಲ್ಫಿ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಮಕಾಡೆ ಮಲಗಿತು. ಇದರಿಂದ ಅವರಿಗೆ ಹಿನ್ನಡೆ ಆಯಿತು.

ಮಿಷನ್ ರಾಣಿಗಂಜ್

ಅಕ್ಷಯ್ ಕುಮಾರ್ ನಟನೆಯ ಮತ್ತೊಂದು ಸಿನಿಮಾ ಈ ವರ್ಷ ಸೋತಿದೆ. ಅದು ‘ಮಿಷನ್ ರಾಣಿಗಂಜ್’. ನೈಜ ಘಟನೆ ಆಧರಿಸಿ ‘ಮಿಷನ್ ರಾಣಿಗಂಜ್’ ಸಿನಿಮಾ ಸಿದ್ಧವಾಗಿತ್ತು. ಜನರು ಚಿತ್ರವನ್ನು ಇಷ್ಟಪಟ್ಟಿಲ್ಲ. ಈ ಸಿನಿಮಾ ಸಾಧಾರಣ ಗಳಿಕೆ ಮಾಡಿದೆ.

‘ಶೆಹಜಾದ’

ದಕ್ಷಿಣ ಭಾರತದ ಚಿತ್ರಗಳನ್ನು ಬಾಲಿವುಡ್​ಗೆ ರಿಮೇಕ್ ಮಾಡುವ ಕೆಲಸ ಇತ್ತೀಚೆಗೆ ಜೋರಾಗಿದೆ. ‘ಅಲಾ ವೈಕುಂಟಪುರಮಲೋ’ ಚಿತ್ರವನ್ನು ಹಿಂದಿಗೆ ‘ಶೆಹಜಾದ’ ಎಂದು ರಿಮೇಕ್ ಮಾಡಲಾಯಿತು. ಆದರೆ, ಈ ಚಿತ್ರ ಸೋಲು ಕಂಡಿತು.

ಚಂದ್ರಮುಖಿ 2

‘ಚಂದ್ರಮುಖಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರು. ಇದರ ಸೀಕ್ವೆಲ್​ ಈ ವರ್ಷ ರಿಲೀಸ್ ಆಯಿತು. ಆದರೆ, ಸಿನಿಮಾ ಸೋಲು ಕಂಡಿದೆ. ಈ ಚಿತ್ರದ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾಗೆ ಹಿನ್ನಡೆ ಆಯಿತು.

ಶಾಕುಂತಲಂ

ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಈ ವರ್ಷ ರಿಲೀಸ್ ಆಯಿತು. ಸಮಂತಾ ವೃತ್ತಿ ಬದುಕಿಗೆ ಈ ಚಿತ್ರ ಮೈಲೇಜ್ ನೀಡಲಿದೆ ಎಂದು ಹೇಳಾಗಿತ್ತು. ಆದರೆ, ಸಿನಿಮಾ ಹೀನಾಯ ಸೋಲು ಕಂಡಿತು. ಈ ಚಿತ್ರವನ್ನು ಜನರು ಇಷ್ಟಪಟ್ಟಿಲ್ಲ.

ಇದನ್ನೂ ಓದಿ: ಅಖಿಲ್​ಗೆ ಕೈಕೊಟ್ಟು ನಿಖಿಲ್ ಕೈಹಿಡಿದ ರಾಮ್ ಚರಣ್, ಅಕ್ಕಿನೇನಿ ಅಭಿಮಾನಿಗಳ ವಿರೋಧ

ಏಜೆಂಟ್

ಅಖಿಲ್ ಅಕ್ಕಿನೇನಿ ನಟನೆಯ ‘ಏಜೆಂಟ್’ ಸಿನಿಮಾ ಟೀಸರ್ ಹಾಗೂ ಟ್ರೇಲರ್ ಮೂಲಕ ಗಮನ ಸೆಳೆದಿತ್ತು. ಆದರೆ, ಸಿನಿಮಾ ನೋಡಿದವರು ಚಿತ್ರವನ್ನು ತೆಗಳಿದರು. ಸಿನಿಮಾ ತಂಡದವರು ಕೂಡ ಪ್ರೇಕ್ಷಕರ ಬಳಿ ಕ್ಷಮೆ ಕೇಳಿದರು.

ಕಸ್ಟಡಿ

ನಾಗ ಚೈತನ್ಯ ನಟನೆಯ ‘ಕಸ್ಟಡಿ’ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ಹೋಪ್ ಹೊಂದಿದ್ದರು. ಈ ಚಿತ್ರದಿಂದ ಅವರು ಗೆಲ್ಲಬಹುದು ಎಂಬುದು ಫ್ಯಾನ್ಸ್ ನಿರೀಕ್ಷೆ ಆಗಿತ್ತು. ಆದರೆ, ನಿರೀಕ್ಷೆ ಸುಳ್ಳಾಯಿತು.

ಭೋಲಾ ಶಂಕರ್

ಚಿರಂಜೀವಿ ಅವರು ಈ ವರ್ಷ ‘ಭೋಲಾ ಶಂಕರ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದರು. ಈ ಚಿತ್ರ ಹೀನಾಯ ಸೋಲು ಕಂಡಿತು. ಈ ಸಿನಿಮಾ ಅವರ ಅಭಿಮಾನಿಗಳನ್ನು ನಿರಾಸೆಗೊಳಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:53 pm, Wed, 13 December 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!