AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ ಸಿನಿಮಾಗೆ ಯೋಗಿ ಆದಿತ್ಯನಾಥ್‍ ಬೆಂಬಲ; ಜೂನ್‍ 27ರಂದು ವಿಶ್ವಾದ್ಯಂತ ಬಿಡುಗಡೆ

‘ಕಣ್ಣಪ್ಪ’ ಸಿನಿಮಾದ ಬಿಡುಗಡೆ ದಿನಾಂಕವನ್ನು ಯೋಗಿ ಆದಿತ್ಯನಾಥ್‍ ಅವರು ಘೋಷಿಸಿದ್ದಾರೆ. ಅವರ ಶುಭ ಹಾರೈಕೆಗಳಿಂದ ಚಿತ್ರತಂಡಕ್ಕೆ ಖುಷಿಯಾಗಿದೆ. ಚಿತ್ರತಂಡದ ಉತ್ಸಾಹ ಇಮ್ಮಡಿ ಆಗಿದೆ. ಸದ್ಯದಲ್ಲೇ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ. ಮೋಹನ್‍ ಬಾಬು, ವಿಷ್ಣು ಮಂಚು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಣ್ಣಪ್ಪ’ ಸಿನಿಮಾಗೆ ಯೋಗಿ ಆದಿತ್ಯನಾಥ್‍ ಬೆಂಬಲ; ಜೂನ್‍ 27ರಂದು ವಿಶ್ವಾದ್ಯಂತ ಬಿಡುಗಡೆ
Kannappa Movie Team With Yogi Adityanath
ಮದನ್​ ಕುಮಾರ್​
|

Updated on: Apr 11, 2025 | 9:44 PM

Share

ಟಾಲಿವುಡ್​ನ ಪ್ರಸಿದ್ಧ ನಟ ಮೋಹನ್‍ ಬಾಬು (Mohan Babu) ಅವರು ನಿರ್ಮಿಸಿರುವ ‘ಕಣ್ಣಪ್ಪ’ ಸಿನಿಮಾ (Kannappa Movie) ಏಪ್ರಿಲ್‍ 25ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಸಿನಿಮಾದ ತಾಂತ್ರಿಕ ಕೆಲಸಗಳು ವಿಳಂಬ ಆಗಿದ್ದರಿಂದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಈಗ ಚಿತ್ರತಂಡವು ಹೊಸ ರಿಲೀಸ್ ದಿನಾಂಕ ಘೋಷಿಸಿದೆ. ಜೂನ್‍ 27ರಂದು ವಿಶ್ವಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಪ್ಯಾನ್‍ ಇಂಡಿಯಾ ಸಿನಿಮಾ ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ. ಶುಕ್ರವಾರ (ಏಪ್ರಿಲ್ 11) ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ (Yogi Adityanath) ಅವರು ‘ಕಣ್ಣಪ್ಪ’ ಸಿನಿಮಾದ ಬಿಡುಗಡೆ ದಿನಾಂಕದ ಪೋಸ್ಟರ್ ಅನಾವರಣ ಮಾಡಿದರು.

‘ಮೋಹನ್‍ ಬಾಬು ಹಾಗೂ ಅವರ ಪುತ್ರ ವಿಷ್ಣು ಮಂಚು ಅವರ ಕನಸಿನ ಕೂಸಾಗಿ ‘ಕಣ್ಣಪ್ಪ’ ಚಿತ್ರ ಮೂಡಿಬಂದಿದೆ. ಇದು ಕೇವಲ ಸಿನಿಮಾ ಆಗಿರದೇ ಒಂದು ಅಭೂತಪೂರ್ವ ಅನುಭವವಾಗಬೇಕು. ಆ ನಿಟ್ಟಿನಲ್ಲಿ ಹಗಲು-ರಾತ್ರಿ ಶ್ರಮಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಚಿತ್ರವು ಉತ್ತಮವಾಗಿ ಮೂಡಿಬಂದಿದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕ ಹಾಗೆ ನಿಲುಕಲಿದೆ’ ಎಂದು ಚಿತ್ರತಂಡ ಹೇಳಿದೆ.

ಯೋಗಿ ಆದಿತ್ಯನಾಥ್‍ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದಾಗ ಮೋಹನ್‍ ಬಾಬು, ವಿಷ್ಣು ಮಂಚು, ಪ್ರಭುದೇವ, ವಿನಯ್‍ ಮಹೇಶ್ವರಿ ಅವರು ಹಾಜರಿದ್ದರು. ಈ ಸಿನಿಮಾ ಯಶಸ್ವಿ ಆಗಲಿ ಎಂದು ಯೋಗಿ ಆದಿತ್ಯನಾಥ್ ಹಾರೈಸಿದರು. ಚಿತ್ರವು ದೇಶಾದ್ಯಂತ ಜನರಿಗೆ ಇಷ್ಟವಾಗಲಿದೆ ಎಂದು ಕೂಡ ಅವರು ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಈ ಸಿನಿಮಾದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ಅಭಿನಯಿಸಿದ್ದಾರೆ. ಮೋಹನ್‍ ಬಾಬು, ಮಧು, ಶರತ್‍ ಕುಮಾರ್, ದೇವರಾಜ್‍, ಬ್ರಹ್ಮಾನಂದಂ, ಮುಕೇಶ್‍ ರಿಶಿ ಮುಂತಾದವರು ನಟಿಸಿದ್ದಾರೆ. ಪ್ರಭಾಸ್‍, ಮೋಹನ್‍ ಲಾಲ್‍, ಅಕ್ಷಯ್‍ ಕುಮಾರ್, ಕಾಜಲ್‍ ಅಗರ್ವಾಲ್‍ ಅವರು ಅತಿಥಿ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸ್ಟೀಫನ್‍ ದೇವಸ್ಸಿ ಸಂಗೀತ, ಶೆಲ್ಡನ್‍ ಚಾವ್‍ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಕಣ್ಣಪ್ಪ’ ಎಂದೊಡನೆ ನನಗೆ ರಾಜ್​ಕುಮಾರ್ ನೆನಪಾಗ್ತಾರೆ: ಟಾಲಿವುಡ್ ಹಿರಿಯ ನಟ

‘ಕಣ್ಣಪ್ಪ’ ಚಿತ್ರವನ್ನು ‘ಎ.ವಿ.ಎ. ಎಂಟರ್ಟೈನ್ಮೆಂಟ್’ ಹಾಗೂ ‘24 ಫ್ರೇಮ್ಸ್ ಫ್ಯಾಕ್ಟರಿ’ ಮೂಲಕ ಮೋಹನ್‍ ಬಾಬು ನಿರ್ಮಿಸಿದ್ದಾರೆ. ಮುಕೇಶ್‍ ಕುಮಾರ್ ಸಿಂಗ್‍ ಅವರು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಟೀಸರ್ , ಪೋಸ್ಟರ್ ಹಾಗೂ ಹಾಡುಗಳು ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿವೆ. ಪೌರಾಣಿಕ ಕಥಾಹಂದರದ ಸಿನಿಮಾ ಆದ್ದರಿಂದ ನಿರೀಕ್ಷೆ ಹುಟ್ಟುಹಾಕಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ