AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್​ಗೆ ‘ಸಲಾರ್’ ಸಿನಿಮಾ ಬೈಕ್ ಗೆಲ್ಲೋ ಅವಕಾಶ ಕೊಟ್ಟ ಹೊಂಬಾಳೆ ಫಿಲ್ಮ್ಸ್

‘ಸಲಾರ್’ ಸಿನಿಮಾದಲ್ಲಿ ಅವರ ಲುಕ್ ಜೊತೆ ಬೈಕ್ ಸಖತ್ ಇಷ್ಟ ಆಗಿತ್ತು. ಈ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಈಗ ಈ ಬೈಕ್​ನ ಫ್ಯಾನ್ಸ್​​ಗೆ ನೀಡಲು ಹೊಂಬಾಳೆ ಫಿಲ್ಮ್ಸ್ ಮುಂದಾಗಿದೆ. ‘ಗಿವ್​ಅವೇ ಕ್ಯಾಂಪೇನ್​’ನ ಹೊಂಬಾಳೆ ಫಿಲ್ಮ್ಸ್ ಶುರು ಮಾಡಿದೆ.

ಫ್ಯಾನ್ಸ್​ಗೆ ‘ಸಲಾರ್’ ಸಿನಿಮಾ ಬೈಕ್ ಗೆಲ್ಲೋ ಅವಕಾಶ ಕೊಟ್ಟ ಹೊಂಬಾಳೆ ಫಿಲ್ಮ್ಸ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Apr 20, 2024 | 3:27 PM

Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಬೈಕ್ ಸಖತ್ ಸದ್ದು ಮಾಡಿತ್ತು. ಭಿನ್ನವಾಗಿ ಡಿಸೈನ್ ಮಾಡಿದ ಈ ಬೈಕ್ ಫ್ಯಾನ್ಸ್​ಗೆ ಇಷ್ಟ ಆಗಿತ್ತು. ಈಗ ಈ ಬೈಕ್ ಗೆಲ್ಲೋ ಅವಕಾಶವನ್ನು ಹೊಂಬಾಳೆ ಫಿಲ್ಮ್ಸ್ ನೀಡಿದೆ. ಈ ಬೈಕ್ ಗೆಲ್ಲೋಕೆ ನೀವು ಮಾಡಬೇಕಾಗಿರೋದು ಏನು ಎಂಬುದನ್ನು ಕೂಡ ಹೊಂಬಾಳೆ ಫಿಲ್ಮ್ಸ್ ಹೇಳಿದೆ.

‘ಸಲಾರ್’ ಸಿನಿಮಾದಲ್ಲಿ ಅವರ ಲುಕ್ ಜೊತೆ ಬೈಕ್ ಸಖತ್ ಇಷ್ಟ ಆಗಿತ್ತು. ಈ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಈಗ ಈ ಬೈಕ್​ನ ಫ್ಯಾನ್ಸ್​​ಗೆ ನೀಡಲು ಹೊಂಬಾಳೆ ಫಿಲ್ಮ್ಸ್ ಮುಂದಾಗಿದೆ. ‘ಗಿವ್​ಅವೇ ಕ್ಯಾಂಪೇನ್​’ನ ಹೊಂಬಾಳೆ ಫಿಲ್ಮ್ಸ್ ಶುರು ಮಾಡಿದೆ. ಓರ್ವ ಅದೃಷ್ಟಶಾಲಿಗೆ ಈ ಬೈಕ್ ಸಿಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಪ್ರಭಾಸ್ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಟಿ ನಾಯಕಿ, ಸಿನಿಮಾ ಯಾವುದು? ನಟಿ ಯಾರು?

‘ಸಲಾರ್ ಸಿನಿಮಾದಲ್ಲಿ ರೆಬೆಲ್ ಸ್ಟಾರ್ ಪ್ರಭಾಸ್ ಗೆದ್ದ ಬೈಕ್​ನ ಗೆಲ್ಲೋ ಅವಕಾಶವನ್ನು ಪಡೆದುಕೊಳ್ಳಿ’ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿದೆ. ‘ಸ್ಟಾರ್ ಮಾ’ ವಾಹಿನಿಯಲ್ಲಿ ಏಪ್ರಿಲ್ 21ರಂದು ರಾತ್ರಿ 5:30ಕ್ಕೆ ಪ್ರಸಾರ ಕಾಣಲಿದೆ. ಇದನ್ನು ನೋಡಿದ ಬಳಿಕ ವೀಕ್ಷಕರು ಒಂದು ಕೆಲಸ ಮಾಡಬೇಕು. ‘ಸ್ಟಾರ್ ಸುವರ್ಣದಲ್ಲಿ ಸಿನಿಮಾ ಪ್ರಸಾರ ಆಗುವಾಗ ಬೈಕ್ ಚಿತ್ರ ಎಷ್ಟು ಬಾರಿ ಬಂದು ಹೋಗುತ್ತದೆ ಎಂಬುದನ್ನು 9222211199 ಸಂಖ್ಯೆಗೆ ಮೆಸೇಜ್ ಮಾಡಿ’ ಎಂದು ಬರೆಯಲಾಗಿದೆ. ಏಪ್ರಿಲ್ 21ರ ರಾತ್ರಿ 8 ಗಂಟೆಯಿಂದ ಮೆಸೇಜ್ ಮಾಡಬಹುದು. SALAAR ಎಂದು ಬರೆದು ಒಂದು ಸ್ಪೇಸ್ ಕೊಡಬೇಕು. ಆ ಬಳಿಕ ಎಷ್ಟು ಬಾರಿ ಬೈಕ್ ತೆರೆಮೇಲೆ ಬಂತು ಎಂಬ ಸಂಖ್ಯೆಯನ್ನು ಬರೆದುಕಳುಹಿಸಬೇಕು.

‘ಸಲಾರ್’ ಸಿನಿಮಾದಲ್ಲಿ ‘ರಾಯಲ್​ ಎನ್​ಫೀಲ್ಡ್ಡ್’ ಕಸ್ಟಮೈಸ್ಡ್​ ಬೈಕ್ ಆಗಿದೆ. ಹೈದರಾಬಾದ್​ನ ಶಾಪ್ ಒಂದರಲ್ಲಿ ಈ ಬೈಕ್​ನ ಮಾಡಿಫೈ ಮಾಡಲಾಗಿತ್ತು. ಸದ್ಯ ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!