AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ
ರಾಜಮೌಳಿ- ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:49 PM

Share

‘ಪುಷ್ಪ 2’ ಸಿನಿಮಾಗೆ ಈಗಾಗಲೇ ಬುಕಿಂಗ್ ಓಪನ್ ಆಗಿದೆ. ಡಿಸೆಂಬರ್ 5ರಂದು ರಿಲೀಸ್ ಆಗಲಿರೋ ಸಿನಿಮಾಗೆ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸ ‘ಪುಷ್ಪ 2’ ತಂಡದಿಂದ ಆಗುತ್ತಿದೆ. ಈ ಚಿತ್ರದ ಹಾಡುಗಳನ್ನು ಕೂಡ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಹೈದರಾಬಾದ್​ನಲ್ಲಿ ನಡೆದಿದೆ. ಈ ವೇಳೆ ರಾಜಮೌಳಿ ಅವರು ಈ ಈವೆಂಟ್​ನಲ್ಲಿ ಮುಖ್ಯ ಅತಿಥಿಯಾಗು ಬಂದಿದ್ದರು.

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ. ಉತ್ತರ ಭಾರತದ ಕಡೆ ಪ್ರಚಾರಕ್ಕೆ ತೆರಳೋ ಅವಶ್ಯಕತೆ ಇಲ್ಲ ಎಂದಿದ್ದಾರೆ ರಾಜಮೌಳಿ.

‘ಉತ್ತರ ಭಾರತಕ್ಕೆ ನೀವು ಹೋಗಬೇಕೆಂದಿಲ್ಲ. ಪುಷ್ಪ ಸೀಕ್ವೆಲ್​ಗೆ ಪ್ರಮೋಷನ್ ಅಗತ್ಯ ಇಲ್ಲ. ಈಗಾಗಲೇ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ. ಭಾರತಾದ್ಯಂತ ಪುಷ್ಪ 2 ಚಿತ್ರಕ್ಕೆ ಟಿಕೆಟ್ ಪಡೆದು ಜನರು ಸಿನಿಮಾ ನೋಡಲು ರೆಡಿ ಆಗಿದ್ದಾರೆ’ ಎಂದಿದ್ದಾರೆ ರಾಜಮೌಳಿ.

‘ನಾನು ಇತ್ತೀಚೆಗೆ ರಾಮೋಜಿ ಫಿಲ್ಮ್​ ಸಿಟಿಗೆ ಭೇಟಿ ನೀಡಿದ್ದೆ. ಈ ವೇಳೆ ಪುಷ್ಪ 2 ಚಿತ್ರದ ಶೂಟಿಂಗ್ ಅಲ್ಲಿ ನಡೆಯುತ್ತಿದೆ ಅನ್ನೋದು ಗೊತ್ತಾಯಿತು. ಈ ವೇಳೆ ನಾನು ಅಲ್ಲಿಗೆ ತೆರಳಿದೆ. ಆಗ ಸೆಟ್​ ನೋಡಿ ಹೌಹಾರಿದೆ. ಮೊದಲ ದೃಶ್ಯ ಇಂಪ್ರೆಸ್ ಮಾಡಿದರೆ ಇಡೀ ಸಿನಿಮಾ ಮುಂದಿನ ಹಂತಕ್ಕೆ ಹೋಗುತ್ತದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರಕ್ಕೆ ಡಿಸೆಂಬರ್ 5ರ ಮಧ್ಯರಾತ್ರಿಯಿಂದಲೇ ಶೋ ಆರಂಭಗೊಳ್ಳುತ್ತಿದೆ. ಟಿಕೆಟ್ ಬೆಲೆ ಕೂಡ ಹೆಚ್ಚಿದೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​