AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ
ರಾಜಮೌಳಿ- ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:49 PM

Share

‘ಪುಷ್ಪ 2’ ಸಿನಿಮಾಗೆ ಈಗಾಗಲೇ ಬುಕಿಂಗ್ ಓಪನ್ ಆಗಿದೆ. ಡಿಸೆಂಬರ್ 5ರಂದು ರಿಲೀಸ್ ಆಗಲಿರೋ ಸಿನಿಮಾಗೆ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸ ‘ಪುಷ್ಪ 2’ ತಂಡದಿಂದ ಆಗುತ್ತಿದೆ. ಈ ಚಿತ್ರದ ಹಾಡುಗಳನ್ನು ಕೂಡ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಹೈದರಾಬಾದ್​ನಲ್ಲಿ ನಡೆದಿದೆ. ಈ ವೇಳೆ ರಾಜಮೌಳಿ ಅವರು ಈ ಈವೆಂಟ್​ನಲ್ಲಿ ಮುಖ್ಯ ಅತಿಥಿಯಾಗು ಬಂದಿದ್ದರು.

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ. ಉತ್ತರ ಭಾರತದ ಕಡೆ ಪ್ರಚಾರಕ್ಕೆ ತೆರಳೋ ಅವಶ್ಯಕತೆ ಇಲ್ಲ ಎಂದಿದ್ದಾರೆ ರಾಜಮೌಳಿ.

‘ಉತ್ತರ ಭಾರತಕ್ಕೆ ನೀವು ಹೋಗಬೇಕೆಂದಿಲ್ಲ. ಪುಷ್ಪ ಸೀಕ್ವೆಲ್​ಗೆ ಪ್ರಮೋಷನ್ ಅಗತ್ಯ ಇಲ್ಲ. ಈಗಾಗಲೇ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ. ಭಾರತಾದ್ಯಂತ ಪುಷ್ಪ 2 ಚಿತ್ರಕ್ಕೆ ಟಿಕೆಟ್ ಪಡೆದು ಜನರು ಸಿನಿಮಾ ನೋಡಲು ರೆಡಿ ಆಗಿದ್ದಾರೆ’ ಎಂದಿದ್ದಾರೆ ರಾಜಮೌಳಿ.

‘ನಾನು ಇತ್ತೀಚೆಗೆ ರಾಮೋಜಿ ಫಿಲ್ಮ್​ ಸಿಟಿಗೆ ಭೇಟಿ ನೀಡಿದ್ದೆ. ಈ ವೇಳೆ ಪುಷ್ಪ 2 ಚಿತ್ರದ ಶೂಟಿಂಗ್ ಅಲ್ಲಿ ನಡೆಯುತ್ತಿದೆ ಅನ್ನೋದು ಗೊತ್ತಾಯಿತು. ಈ ವೇಳೆ ನಾನು ಅಲ್ಲಿಗೆ ತೆರಳಿದೆ. ಆಗ ಸೆಟ್​ ನೋಡಿ ಹೌಹಾರಿದೆ. ಮೊದಲ ದೃಶ್ಯ ಇಂಪ್ರೆಸ್ ಮಾಡಿದರೆ ಇಡೀ ಸಿನಿಮಾ ಮುಂದಿನ ಹಂತಕ್ಕೆ ಹೋಗುತ್ತದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರಕ್ಕೆ ಡಿಸೆಂಬರ್ 5ರ ಮಧ್ಯರಾತ್ರಿಯಿಂದಲೇ ಶೋ ಆರಂಭಗೊಳ್ಳುತ್ತಿದೆ. ಟಿಕೆಟ್ ಬೆಲೆ ಕೂಡ ಹೆಚ್ಚಿದೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್