AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ
ರಾಜಮೌಳಿ- ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:49 PM

Share

‘ಪುಷ್ಪ 2’ ಸಿನಿಮಾಗೆ ಈಗಾಗಲೇ ಬುಕಿಂಗ್ ಓಪನ್ ಆಗಿದೆ. ಡಿಸೆಂಬರ್ 5ರಂದು ರಿಲೀಸ್ ಆಗಲಿರೋ ಸಿನಿಮಾಗೆ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸ ‘ಪುಷ್ಪ 2’ ತಂಡದಿಂದ ಆಗುತ್ತಿದೆ. ಈ ಚಿತ್ರದ ಹಾಡುಗಳನ್ನು ಕೂಡ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಹೈದರಾಬಾದ್​ನಲ್ಲಿ ನಡೆದಿದೆ. ಈ ವೇಳೆ ರಾಜಮೌಳಿ ಅವರು ಈ ಈವೆಂಟ್​ನಲ್ಲಿ ಮುಖ್ಯ ಅತಿಥಿಯಾಗು ಬಂದಿದ್ದರು.

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ. ಉತ್ತರ ಭಾರತದ ಕಡೆ ಪ್ರಚಾರಕ್ಕೆ ತೆರಳೋ ಅವಶ್ಯಕತೆ ಇಲ್ಲ ಎಂದಿದ್ದಾರೆ ರಾಜಮೌಳಿ.

‘ಉತ್ತರ ಭಾರತಕ್ಕೆ ನೀವು ಹೋಗಬೇಕೆಂದಿಲ್ಲ. ಪುಷ್ಪ ಸೀಕ್ವೆಲ್​ಗೆ ಪ್ರಮೋಷನ್ ಅಗತ್ಯ ಇಲ್ಲ. ಈಗಾಗಲೇ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ. ಭಾರತಾದ್ಯಂತ ಪುಷ್ಪ 2 ಚಿತ್ರಕ್ಕೆ ಟಿಕೆಟ್ ಪಡೆದು ಜನರು ಸಿನಿಮಾ ನೋಡಲು ರೆಡಿ ಆಗಿದ್ದಾರೆ’ ಎಂದಿದ್ದಾರೆ ರಾಜಮೌಳಿ.

‘ನಾನು ಇತ್ತೀಚೆಗೆ ರಾಮೋಜಿ ಫಿಲ್ಮ್​ ಸಿಟಿಗೆ ಭೇಟಿ ನೀಡಿದ್ದೆ. ಈ ವೇಳೆ ಪುಷ್ಪ 2 ಚಿತ್ರದ ಶೂಟಿಂಗ್ ಅಲ್ಲಿ ನಡೆಯುತ್ತಿದೆ ಅನ್ನೋದು ಗೊತ್ತಾಯಿತು. ಈ ವೇಳೆ ನಾನು ಅಲ್ಲಿಗೆ ತೆರಳಿದೆ. ಆಗ ಸೆಟ್​ ನೋಡಿ ಹೌಹಾರಿದೆ. ಮೊದಲ ದೃಶ್ಯ ಇಂಪ್ರೆಸ್ ಮಾಡಿದರೆ ಇಡೀ ಸಿನಿಮಾ ಮುಂದಿನ ಹಂತಕ್ಕೆ ಹೋಗುತ್ತದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರಕ್ಕೆ ಡಿಸೆಂಬರ್ 5ರ ಮಧ್ಯರಾತ್ರಿಯಿಂದಲೇ ಶೋ ಆರಂಭಗೊಳ್ಳುತ್ತಿದೆ. ಟಿಕೆಟ್ ಬೆಲೆ ಕೂಡ ಹೆಚ್ಚಿದೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ