AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ.

‘ಉತ್ತರ ಭಾರತಕ್ಕೆ ಹೋಗಿ ಸಿನಿಮಾ ಪ್ರಚಾರ ಮಾಡಬೇಡಿ’; ಅಲ್ಲು ಅರ್ಜುನ್​ಗೆ ರಾಜಮೌಳಿ ಸಲಹೆ
ರಾಜಮೌಳಿ- ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:49 PM

Share

‘ಪುಷ್ಪ 2’ ಸಿನಿಮಾಗೆ ಈಗಾಗಲೇ ಬುಕಿಂಗ್ ಓಪನ್ ಆಗಿದೆ. ಡಿಸೆಂಬರ್ 5ರಂದು ರಿಲೀಸ್ ಆಗಲಿರೋ ಸಿನಿಮಾಗೆ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸ ‘ಪುಷ್ಪ 2’ ತಂಡದಿಂದ ಆಗುತ್ತಿದೆ. ಈ ಚಿತ್ರದ ಹಾಡುಗಳನ್ನು ಕೂಡ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಹೈದರಾಬಾದ್​ನಲ್ಲಿ ನಡೆದಿದೆ. ಈ ವೇಳೆ ರಾಜಮೌಳಿ ಅವರು ಈ ಈವೆಂಟ್​ನಲ್ಲಿ ಮುಖ್ಯ ಅತಿಥಿಯಾಗು ಬಂದಿದ್ದರು.

ಹೈದರಾಬಾದ್​ನಲ್ಲಿ ದೊಡ್ಡ ಗ್ರೌಂಡ್ ಒಂದರಲ್ಲಿ ‘ಪುಷ್ಪ 2’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಡೆದಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಎಸ್​ಎಸ್ ರಾಜಮೌಳಿ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ರಾಜಮೌಳಿ ಅವರು ಅಲ್ಲು ಅರ್ಜುನ್​ಗೆ ಕಿವಿಮಾತು ಹೇಳಿದ್ದಾರೆ. ಉತ್ತರ ಭಾರತದ ಕಡೆ ಪ್ರಚಾರಕ್ಕೆ ತೆರಳೋ ಅವಶ್ಯಕತೆ ಇಲ್ಲ ಎಂದಿದ್ದಾರೆ ರಾಜಮೌಳಿ.

‘ಉತ್ತರ ಭಾರತಕ್ಕೆ ನೀವು ಹೋಗಬೇಕೆಂದಿಲ್ಲ. ಪುಷ್ಪ ಸೀಕ್ವೆಲ್​ಗೆ ಪ್ರಮೋಷನ್ ಅಗತ್ಯ ಇಲ್ಲ. ಈಗಾಗಲೇ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ. ಭಾರತಾದ್ಯಂತ ಪುಷ್ಪ 2 ಚಿತ್ರಕ್ಕೆ ಟಿಕೆಟ್ ಪಡೆದು ಜನರು ಸಿನಿಮಾ ನೋಡಲು ರೆಡಿ ಆಗಿದ್ದಾರೆ’ ಎಂದಿದ್ದಾರೆ ರಾಜಮೌಳಿ.

‘ನಾನು ಇತ್ತೀಚೆಗೆ ರಾಮೋಜಿ ಫಿಲ್ಮ್​ ಸಿಟಿಗೆ ಭೇಟಿ ನೀಡಿದ್ದೆ. ಈ ವೇಳೆ ಪುಷ್ಪ 2 ಚಿತ್ರದ ಶೂಟಿಂಗ್ ಅಲ್ಲಿ ನಡೆಯುತ್ತಿದೆ ಅನ್ನೋದು ಗೊತ್ತಾಯಿತು. ಈ ವೇಳೆ ನಾನು ಅಲ್ಲಿಗೆ ತೆರಳಿದೆ. ಆಗ ಸೆಟ್​ ನೋಡಿ ಹೌಹಾರಿದೆ. ಮೊದಲ ದೃಶ್ಯ ಇಂಪ್ರೆಸ್ ಮಾಡಿದರೆ ಇಡೀ ಸಿನಿಮಾ ಮುಂದಿನ ಹಂತಕ್ಕೆ ಹೋಗುತ್ತದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರಕ್ಕೆ ಡಿಸೆಂಬರ್ 5ರ ಮಧ್ಯರಾತ್ರಿಯಿಂದಲೇ ಶೋ ಆರಂಭಗೊಳ್ಳುತ್ತಿದೆ. ಟಿಕೆಟ್ ಬೆಲೆ ಕೂಡ ಹೆಚ್ಚಿದೆ. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ