AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ ಆದರೂ ಬಿಡದ ದ್ವೇಷ; ಅನುರಾಗ್ ದೊಭಾಲ್ ತಂದೆಯಿಂದ 60 ಪುಟಗಳ ದೂರು

ಅಪಘಾತದ ಬಳಿಕ ಚೇತರಿಸಿಕೊಳ್ಳುತ್ತಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಭಾಲ್ ಅವರು ಅಳಲು ತೋಡಿಕೊಂಡಿದ್ದಾರೆ. ಅವರು ತಂದೆ-ತಾಯಿಯಿಂದ ಕೇವಲ ಪ್ರೀತಿಯನ್ನು ಬಯಸಿದ್ದರು. ಆದರೆ ಪೋಷಕರೇ ತಮ್ಮ ಮೇಲೆ ಸೇಡು ತೀರಿಸಿಕೊಳ್ಳಲು ನೋಡುತ್ತಿದ್ದಾರೆ ಎಂದು ಅನುರಾಗ್ ಬೇಸರ ವ್ಯಕ್ತಪಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಭೀಕರ ಅಪಘಾತ ಆದರೂ ಬಿಡದ ದ್ವೇಷ; ಅನುರಾಗ್ ದೊಭಾಲ್ ತಂದೆಯಿಂದ 60 ಪುಟಗಳ ದೂರು
Anurag Dobhal
ಮದನ್​ ಕುಮಾರ್​
|

Updated on: May 20, 2026 | 10:46 PM

Share

ಪ್ರಖ್ಯಾತ ಯೂಟ್ಯೂಬರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಭಾಲ್ (UK07 Rider) ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದ ವಿವಾದಗಳಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ತಮ್ಮ ಅಂತರ್ ಜಾತಿ ವಿವಾಹದ ಕಾರಣಕ್ಕಾಗಿ ಕುಟುಂಬಸ್ಥರು ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಅವರು ಈ ಹಿಂದೆ ಆರೋಪಿಸಿದ್ದರು. ಈಗ ಪೋಷಕರೇ ತಮ್ಮ ವಿರುದ್ಧ ಮತ್ತೆ ದೊಡ್ಡ ಸಂಚು ರೂಪಿಸುತ್ತಿದ್ದಾರೆ ಎಂದು ಅನುರಾಗ್ ದೊಭಾಲ್ (Anurag Dobhal) ಅವರು ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಕಾರು ಅಪಘಾತದ ಬಳಿಕ ಆಸ್ಪತ್ರೆಯಲ್ಲಿ ತಾವು ಅನುಭವಿಸಿದ ನರಕಯಾತನೆಯನ್ನು ಬಿಚ್ಚಿಟ್ಟಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಲೈವ್ ಸ್ಟ್ರೀಮ್ ನಡೆಯುತ್ತಿದ್ದಾಗಲೇ ಕಾರು ಅಪಘಾತಕ್ಕೀಡಾಗಿ, ಆತ್ಮಹತ್ಯೆಗೆ ಯತ್ನಿಸಿದ ಆರೋಪ ಎದುರಿಸಿದ್ದ ಅನುರಾಗ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರ (ಮೇ 20) ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ತಾವು ಹಳೆಯದ್ದನ್ನೆಲ್ಲಾ ಮರೆತು ಹೊಸ ಜೀವನ ಆರಂಭಿಸಲು ನಿರ್ಧರಿಸಿದ್ದರೂ, ಕುಟುಂಬದವರು ಮಾತ್ರ ತಮಗೆ ತೊಂದರೆ ಕೊಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ಮಾರ್ಚ್ 8ರಂದು ತಮಗೆ ಭೀಕರ ಕಾರು ಅಪಘಾತವಾದಾಗ ಹೆತ್ತವರು ತಮ್ಮ ಜೊತೆಗಿರುತ್ತಾರೆ ಎಂದು ಅನುರಾಗ್ ಭಾವಿಸಿದ್ದರು. ಆದರೆ ವಾಸ್ತವವೇ ಬೇರೆಯಾಗಿತ್ತು. ಇತ್ತೀಚೆಗೆ ಕೆಲಸದ ನಿಮಿತ್ತ ಡೆಹ್ರಾಡೂನ್‌ಗೆ ಹೋದಾಗ ಪೊಲೀಸರಿಂದ ಕರೆ ಬಂದಿದ್ದು, ಅಲ್ಲಿ ತಮಗೆ ಶಾಕಿಂಗ್ ಸತ್ಯವೊಂದು ತಿಳಿದುಬಂದಿದೆ ಎಂದು ಅನುರಾಗ್ ಹೇಳಿದ್ದಾರೆ.

‘ನನಗೆ ಅಪಘಾತವಾದ ಅದೇ ರಾತ್ರಿ, ನನ್ನ ತಂದೆ ಪೊಲೀಸ್ ಠಾಣೆಗೆ ಹೋಗಿ ನನ್ನ ವಿರುದ್ಧವೇ ದೂರು ದಾಖಲಿಸಿದ್ದರು. ಆ ಪತ್ರದಲ್ಲಿ ನನ್ನ ವಿರುದ್ಧ ಹಲವು ವಿಷಯಗಳನ್ನು ಬರೆಯಲಾಗಿತ್ತು. ಈಗ ತನಿಖೆ ಮುಂದುವರಿದಿದ್ದು, ನನ್ನ ಕುಟುಂಬದವರು ನನ್ನ ವಿರುದ್ಧ 50-60 ಪುಟಗಳ ಸುದೀರ್ಘ ದೂರನ್ನು ನೀಡಿದ್ದಾರೆ. ಅದರಲ್ಲಿ ಬರೆದಿರುವ ವಿಷಯಗಳನ್ನು ಓದಿ ನನ್ನ ತಲೆ ಕೆಟ್ಟುಹೋಗಿದೆ’ ಎಂದು ಅನುರಾಗ್ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಅಪಘಾತದ ನಂತರ ಆಸ್ಪತ್ರೆಯಲ್ಲಿದ್ದ ಕಠಿಣ ದಿನಗಳನ್ನು ನೆನೆದು ಅನುರಾಗ್ ತೀವ್ರ ಭಾವುಕರಾಗಿದ್ದಾರೆ. ಅಪಘಾತದ ಗಾಯಗಳಿಂದಾಗಿ ಇಡೀ ಒಂದು ತಿಂಗಳು ಹಾಸಿಗೆಯಿಂದ ಏಳಲು ಸಾಧ್ಯವಾಗಿರಲಿಲ್ಲ. ‘ಒಂದು ತಿಂಗಳು ನಾನು ಹೇಗೆ ಕಾಲ ಕಳೆದಿದ್ದೇನೆ ಎಂದು ನನಗೆ ಮಾತ್ರ ಗೊತ್ತು. ಮಲಮೂತ್ರ ವಿಸರ್ಜನೆಗೂ ನಾನು ಡೈಪರ್ ಬಳಸಬೇಕಾಗಿತ್ತು. ಅದು ನನ್ನ ಪಾಲಿಗೆ ಅತ್ಯಂತ ನಾಚಿಕೆಗೇಡಿನ ಮತ್ತು ಅವಮಾನಕರ ವಿಷಯವಾಗಿತ್ತು. ನನ್ನ ಜೀವನದ ಅತ್ಯಂತ ಕೆಟ್ಟ ಹಂತ ಅದು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ