AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಮತ್ತು ನಟಿಯ ಬಗ್ಗೆ ವಲ್ಗರ್​ ಸುದ್ದಿ; ಯೂಟ್ಯೂಬರ್ ಅರೆಸ್ಟ್

ಯೂಟ್ಯೂಬ್​ ಚಾನೆಲ್​ನ ಅಡ್ಮಿನ್​​ನ ಬಂಧಿಸಲಾಗಿದೆ. ಈತನ ವಿರುದ್ಧ ವಿಜಯ್ ದೇವರಕೊಂಡ ದೂರು ನೀಡಿದ್ದರು. ಹೀಗಾಗಿ, ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡು ಅಡ್ಮಿನ್​ನ​ ಬಂಧಿಸಿದ್ದಾರೆ.

ವಿಜಯ್ ದೇವರಕೊಂಡ ಮತ್ತು ನಟಿಯ ಬಗ್ಗೆ ವಲ್ಗರ್​ ಸುದ್ದಿ; ಯೂಟ್ಯೂಬರ್ ಅರೆಸ್ಟ್
ವಿಜಯ್
ರಾಜೇಶ್ ದುಗ್ಗುಮನೆ
|

Updated on:Dec 14, 2023 | 8:29 AM

Share

ಯೂಟ್ಯೂಬ್ ಕಂಟೆಂಟ್​ಗಳು ಹೆಚ್ಚು ಸೇಲ್ ಆಗುತ್ತಿದೆ. ಹೀಗಾಗಿ ಗಲ್ಲಿ ಗಲ್ಲಿಯಲ್ಲಿ ಯೂಟ್ಯೂಬರ್​ಗಳು ಹುಟ್ಟಿಕೊಂಡಿದ್ದಾರೆ. ತಾವು ಏನೇ ಪೋಸ್ಟ್ ಮಾಡಿದರೂ ಯಾರೂ ಪ್ರಶ್ನೆ ಮಾಡಲ್ಲ ಎನ್ನುವ ನಂಬಿಕೆ ಅವರದ್ದು. ಆದರೆ, ಎಲ್ಲ ಸಮಯದಲ್ಲೂ ಹೀಗೆ ಇರುವುದಿಲ್ಲ. ಸುಳ್ಳು ಸುದ್ದಿ ಬಿತ್ತರಿಸಿದಾಗ ಅಂಥವರಿಗೆ ಪೊಲೀಸರು ಬಿಸಿಮುಟ್ಟಿಸುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಸಿಕ್ಕಿದೆ. ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Devarakonda) ಹಾಗೂ ನಟಿಯೊಬ್ಬರ ಮಧ್ಯೆ ಸಂಬಂಧ ಕಲ್ಪಿಸಿ ಸುಳ್ಳು ಸುದ್ದಿ ಹಬ್ಬಿಸಿದ ಯೂಟ್ಯೂಬರ್ ಈಗ ಅರೆಸ್ಟ್ ಆಗಿದ್ದಾನೆ.

CinePolis ಹೆಸರಿನ ಯೂಟ್ಯೂಬ್​ ಚಾನೆಲ್​ನ ಅಡ್ಮಿನ್​​ನ ಬಂಧಿಸಲಾಗಿದೆ. ಈತನ ವಿರುದ್ಧ ವಿಜಯ್ ದೇವರಕೊಂಡ ದೂರು ನೀಡಿದ್ದರು. ಹೀಗಾಗಿ, ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡು ಅಡ್ಮಿನ್​ನ​ ಬಂಧಿಸಿದ್ದಾರೆ. ಸದ್ಯ ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

‘ಈ ವ್ಯಕ್ತಿ ಕೆಲ ದಿನಗಳ ಹಿಂದೆ ವಿಜಯ್ ಹಾಗೂ ಮತ್ತೋರ್ವ ನಟಿಯ ಮಧ್ಯೆ ಸಂಬಂಧ ಕಲ್ಪಿಸಿ ಅಸಭ್ಯ ಸುದ್ದಿ ಹಬ್ಬಿಸಿದ್ದ. ಈ ಸುದ್ದಿ ಪೊಲೀಸರ ಗಮನಕ್ಕೆ ತಂದೆವು. ಆ ಬಳಿಕ ಪೊಲೀಸರು ತಕ್ಷಣಕ್ಕೆ ಪ್ರತಿಕ್ರಿಯಿಸಿದರು. ಆ ವ್ಯಕ್ತಿ ಇರುವ ಸ್ಥಳ ಗೊತ್ತಾಗಿದ್ದು, ವಿಡಿಯೋನ ಡಿಲೀಟ್ ಮಾಡಿರುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ವಿಜಯ್ ಟೀಂ ಹೇಳಿದೆ.

‘ಭವಿಷ್ಯದಲ್ಲಿ ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕಿದೆ. ವಿಜಯ್ ಬಗ್ಗೆ ಕೆಲವರು ವದಂತಿಗಳನ್ನು ಹರಡುತ್ತಿದ್ದಾರೆ. ಕೆಲವರು ಎಲ್ಲೆ ಮೀರಿ ವರ್ತಿಸುತ್ತಿದ್ದಾರೆ. ಅಂಥವರಿಗೆ ಈ ಪ್ರಕರಣ ಉದಾಹರಣೆ ಆಗಲಿ ಅನ್ನೋದು ವಿಜಯ್ ಉದ್ದೇಶ. ಮೂರನೇ ವ್ಯಕ್ತಿಯ ಹೆಸರನ್ನು ಎಳೆದು ತರೋದು ಸರಿ ಅಲ್ಲ’ ಎಂದಿದೆ ವಿಜಯ್ ಟೀಂ.

ಇದನ್ನೂ ಓದಿ: ‘ಡಂಕಿ’ ಎದುರು ‘ಸಲಾರ್’ ಬಿಡುಗಡೆ ಏಕೆ, ಶಾರುಖ್ ಮೇಲೆ ಹೊಂಬಾಳೆಗೆ ಏಕೀ ಸಿಟ್ಟು? ವಿಜಯ್ ಕಿರಗಂದೂರು ಹೇಳಿದ್ದು ಹೀಗೆ

ಇತ್ತೀಚೆಗೆ ‘ಹಾಯ್ ನಾನ್ನ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವೆಕೇಶನ್ ಫೋಟೋ ಶೋ ಮಾಡಲಾಯಿತು. ಈ ವಿಡಿಯೋ ಎಲ್ಲರಿಗೂ ಶಾಕ್ ಆಯಿತು. ಈ ಘಟನೆ ಬಳಿಕ ನಾನ್ನಿ ಅವರು ಕ್ಷಮೆ ಕೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Thu, 14 December 23

ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ