AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಟಿಕ್ಟಾಕ್ ಸ್ಟಾರ್ ಅತ್ಯಾಚಾರ; ಪೊಸ್ಕೊ ಕಾಯ್ದೆ ಅಡಿ ಬಂಧನ

ಭಾರ್ಗವ್​ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್​ ಠಾಣೆಯಲ್ಲಿ ಏಪ್ರಿಲ್​ 16ರಂದು ದೂರು ದಾಖಲು ಮಾಡಿದ್ದರು.

ಅಪ್ರಾಪ್ತೆ ಮೇಲೆ ಟಿಕ್ಟಾಕ್ ಸ್ಟಾರ್ ಅತ್ಯಾಚಾರ; ಪೊಸ್ಕೊ ಕಾಯ್ದೆ ಅಡಿ ಬಂಧನ
ಬಂಧಿತ ಭಾರ್ಗವ್​
ರಾಜೇಶ್ ದುಗ್ಗುಮನೆ
|

Updated on: Apr 21, 2021 | 3:20 PM

Share

ಟಿಕ್​ ಟಾಕ್​ ಸ್ಟಾರ್​ ಹಾಗೂ ಫನ್​ ಬಕೆಟ್​ ಯೂಟ್ಯೂಬ್​ ಚಾನೆಲ್​ ಖ್ಯಾತಿಯ ಭಾರ್ಗವ್​ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಪೊಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಓಹ್​ ಮೈ ಗಾಡ್..​ ಓಹ್​ ಮೈ ಗಾಡ್​ ಹೆಸರಿನ ಟಿಕ್​ ಟಾಕ್​ ವಿಡಿಯೋ ಒಂದನ್ನು ಭಾರ್ಗವ್​ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ಈ ಹಾಡನ್ನು ಅನೇಕ ಬ್ರ್ಯಾಂಡ್​ಗಳು ತಮ್ಮ ಪ್ರಮೋಷನ್​ಗೆ ಬಳಕೆ ಮಾಡಿಕೊಂಡಿದ್ದವು. ಈಗ ಭಾರ್ಗವ್​ ವಿರುದ್ಧ ಬಾಲಕಿಯ ಕುಟುಂಬದವರು ಕೇಸ್​ ದಾಖಲು ಮಾಡಿದ್ದಾರೆ.

ಭಾರ್ಗವ್​ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್​ ಠಾಣೆಯಲ್ಲಿ ಏಪ್ರಿಲ್​ 16ರಂದು ದೂರು ದಾಖಲು ಮಾಡಿದ್ದರು. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಆಂಧ್ರಪ್ರದೇಶ ಪೊಲೀಸರು ಭಾರ್ಗವ್​ ಅವರನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಎದುರು ಭಾರ್ಗವ್ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ, ಬಾಲಕಿ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ, ಆತ ಬ್ಲಾಕ್​ಮೇಲ್​ ಮಾಡಲು ಆರಂಭಿಸಿದ್ದ. ಇತ್ತೀಚೆಗೆ ಬಾಲಕಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಗರ್ಭಿಣಿ ಎನ್ನುವ ವಿಚಾರ ತಿಳಿದು ಬಂದಿದೆ. ನಂತರ ಪಾಲಕರು ಠಾಣೆ ಮೆಟ್ಟಿಲೇರಿದ್ದಾರೆ. ಈಗಾಗಲೆ ಭಾರ್ಗವ್​ ಅವರನ್ನು ಕೋರ್ಟ್​ ಎದುರು ಹಾಜರುಪಡಿಸಲಾಗಿದ್ದು, ಮೇ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಶೃಂಗೇರಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣ: ಅಂತಿಮ ಹಂತಕ್ಕೆ ಬಂದ ತನಿಖೆ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!