AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಟಿಕ್ಟಾಕ್ ಸ್ಟಾರ್ ಅತ್ಯಾಚಾರ; ಪೊಸ್ಕೊ ಕಾಯ್ದೆ ಅಡಿ ಬಂಧನ

ಭಾರ್ಗವ್​ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್​ ಠಾಣೆಯಲ್ಲಿ ಏಪ್ರಿಲ್​ 16ರಂದು ದೂರು ದಾಖಲು ಮಾಡಿದ್ದರು.

ಅಪ್ರಾಪ್ತೆ ಮೇಲೆ ಟಿಕ್ಟಾಕ್ ಸ್ಟಾರ್ ಅತ್ಯಾಚಾರ; ಪೊಸ್ಕೊ ಕಾಯ್ದೆ ಅಡಿ ಬಂಧನ
ಬಂಧಿತ ಭಾರ್ಗವ್​
ರಾಜೇಶ್ ದುಗ್ಗುಮನೆ
|

Updated on: Apr 21, 2021 | 3:20 PM

Share

ಟಿಕ್​ ಟಾಕ್​ ಸ್ಟಾರ್​ ಹಾಗೂ ಫನ್​ ಬಕೆಟ್​ ಯೂಟ್ಯೂಬ್​ ಚಾನೆಲ್​ ಖ್ಯಾತಿಯ ಭಾರ್ಗವ್​ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಪೊಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಓಹ್​ ಮೈ ಗಾಡ್..​ ಓಹ್​ ಮೈ ಗಾಡ್​ ಹೆಸರಿನ ಟಿಕ್​ ಟಾಕ್​ ವಿಡಿಯೋ ಒಂದನ್ನು ಭಾರ್ಗವ್​ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ಈ ಹಾಡನ್ನು ಅನೇಕ ಬ್ರ್ಯಾಂಡ್​ಗಳು ತಮ್ಮ ಪ್ರಮೋಷನ್​ಗೆ ಬಳಕೆ ಮಾಡಿಕೊಂಡಿದ್ದವು. ಈಗ ಭಾರ್ಗವ್​ ವಿರುದ್ಧ ಬಾಲಕಿಯ ಕುಟುಂಬದವರು ಕೇಸ್​ ದಾಖಲು ಮಾಡಿದ್ದಾರೆ.

ಭಾರ್ಗವ್​ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್​ ಠಾಣೆಯಲ್ಲಿ ಏಪ್ರಿಲ್​ 16ರಂದು ದೂರು ದಾಖಲು ಮಾಡಿದ್ದರು. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಆಂಧ್ರಪ್ರದೇಶ ಪೊಲೀಸರು ಭಾರ್ಗವ್​ ಅವರನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಎದುರು ಭಾರ್ಗವ್ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ, ಬಾಲಕಿ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ, ಆತ ಬ್ಲಾಕ್​ಮೇಲ್​ ಮಾಡಲು ಆರಂಭಿಸಿದ್ದ. ಇತ್ತೀಚೆಗೆ ಬಾಲಕಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಗರ್ಭಿಣಿ ಎನ್ನುವ ವಿಚಾರ ತಿಳಿದು ಬಂದಿದೆ. ನಂತರ ಪಾಲಕರು ಠಾಣೆ ಮೆಟ್ಟಿಲೇರಿದ್ದಾರೆ. ಈಗಾಗಲೆ ಭಾರ್ಗವ್​ ಅವರನ್ನು ಕೋರ್ಟ್​ ಎದುರು ಹಾಜರುಪಡಿಸಲಾಗಿದ್ದು, ಮೇ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಶೃಂಗೇರಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣ: ಅಂತಿಮ ಹಂತಕ್ಕೆ ಬಂದ ತನಿಖೆ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್