AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಟಿಕ್ಟಾಕ್ ಸ್ಟಾರ್ ಅತ್ಯಾಚಾರ; ಪೊಸ್ಕೊ ಕಾಯ್ದೆ ಅಡಿ ಬಂಧನ

ಭಾರ್ಗವ್​ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್​ ಠಾಣೆಯಲ್ಲಿ ಏಪ್ರಿಲ್​ 16ರಂದು ದೂರು ದಾಖಲು ಮಾಡಿದ್ದರು.

ಅಪ್ರಾಪ್ತೆ ಮೇಲೆ ಟಿಕ್ಟಾಕ್ ಸ್ಟಾರ್ ಅತ್ಯಾಚಾರ; ಪೊಸ್ಕೊ ಕಾಯ್ದೆ ಅಡಿ ಬಂಧನ
ಬಂಧಿತ ಭಾರ್ಗವ್​
ರಾಜೇಶ್ ದುಗ್ಗುಮನೆ
|

Updated on: Apr 21, 2021 | 3:20 PM

Share

ಟಿಕ್​ ಟಾಕ್​ ಸ್ಟಾರ್​ ಹಾಗೂ ಫನ್​ ಬಕೆಟ್​ ಯೂಟ್ಯೂಬ್​ ಚಾನೆಲ್​ ಖ್ಯಾತಿಯ ಭಾರ್ಗವ್​ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಪೊಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಓಹ್​ ಮೈ ಗಾಡ್..​ ಓಹ್​ ಮೈ ಗಾಡ್​ ಹೆಸರಿನ ಟಿಕ್​ ಟಾಕ್​ ವಿಡಿಯೋ ಒಂದನ್ನು ಭಾರ್ಗವ್​ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ಈ ಹಾಡನ್ನು ಅನೇಕ ಬ್ರ್ಯಾಂಡ್​ಗಳು ತಮ್ಮ ಪ್ರಮೋಷನ್​ಗೆ ಬಳಕೆ ಮಾಡಿಕೊಂಡಿದ್ದವು. ಈಗ ಭಾರ್ಗವ್​ ವಿರುದ್ಧ ಬಾಲಕಿಯ ಕುಟುಂಬದವರು ಕೇಸ್​ ದಾಖಲು ಮಾಡಿದ್ದಾರೆ.

ಭಾರ್ಗವ್​ ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ-ತಾಯಿ ವಿಶಾಖಪಟ್ಟಣಂ ಪೊಲೀಸ್​ ಠಾಣೆಯಲ್ಲಿ ಏಪ್ರಿಲ್​ 16ರಂದು ದೂರು ದಾಖಲು ಮಾಡಿದ್ದರು. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಆಂಧ್ರಪ್ರದೇಶ ಪೊಲೀಸರು ಭಾರ್ಗವ್​ ಅವರನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಎದುರು ಭಾರ್ಗವ್ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ, ಬಾಲಕಿ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ, ಆತ ಬ್ಲಾಕ್​ಮೇಲ್​ ಮಾಡಲು ಆರಂಭಿಸಿದ್ದ. ಇತ್ತೀಚೆಗೆ ಬಾಲಕಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಗರ್ಭಿಣಿ ಎನ್ನುವ ವಿಚಾರ ತಿಳಿದು ಬಂದಿದೆ. ನಂತರ ಪಾಲಕರು ಠಾಣೆ ಮೆಟ್ಟಿಲೇರಿದ್ದಾರೆ. ಈಗಾಗಲೆ ಭಾರ್ಗವ್​ ಅವರನ್ನು ಕೋರ್ಟ್​ ಎದುರು ಹಾಜರುಪಡಿಸಲಾಗಿದ್ದು, ಮೇ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಶೃಂಗೇರಿ ಅಪ್ರಾಪ್ತೆ ಅತ್ಯಾಚಾರ ಪ್ರಕರಣ: ಅಂತಿಮ ಹಂತಕ್ಕೆ ಬಂದ ತನಿಖೆ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್