Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೆ ಬದುಕುವುದಕ್ಕೆ ಇಷ್ಟವಿಲ್ಲ’; ಕೊವಿಡ್​ನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಖ್ಯಾತ ಯೂಟ್ಯೂಬರ್ ಭುವನ್

‘ಒಂದೇ ತಿಂಗಳು. ಎಲ್ಲವನ್ನೂ ಛಿದ್ರಮಾಡಿ ಬಿಟ್ಟಿತು. ನನ್ನ ಎರಡು ಲೈಫ್​ಲೈನ್​ಗಳನ್ನು ಕಳೆದುಕೊಂಡೆ. ನನ್ನ ಅಪ್ಪ-ಅಮ್ಮ ಇಲ್ಲದೆ ಯಾವುದೂ ಮೊದಲಿನಂತೆ ಇರೋಕೆ ಸಾಧ್ಯವಿಲ್ಲ. ಮನೆ, ಕನಸು ಎಲ್ಲವೂ ಈಗ ನಾಶವಾಗಿದೆ’ ಎಂದು ಅವರು ಬರಹ ಆರಂಭಿಸಿದ್ದಾರೆ.

‘ಮತ್ತೆ ಬದುಕುವುದಕ್ಕೆ ಇಷ್ಟವಿಲ್ಲ’; ಕೊವಿಡ್​ನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಖ್ಯಾತ ಯೂಟ್ಯೂಬರ್ ಭುವನ್
ಕೊವಿಡ್​ನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಖ್ಯಾತ ಯೂಟ್ಯೂಬರ್ ಭುವನ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 13, 2021 | 3:42 PM

ಕೊವಿಡ್​ನಿಂದ ಸಾಕಷ್ಟು ಮಂದಿ ತಂದೆ-ತಾಯಿ ಕಳೆದುಕೊಂಡಿದ್ದಾರೆ. ಸೆಲೆಬ್ರಿಟಿಗಳ ವಲಯಕ್ಕೂ ಕೊರೊನಾ ಮುಳುವಾಗಿದೆ. ಈಗ ಭಾರತದ ಟಾಪ್​ ಕಂಟೆಂಟ್​ ಕ್ರಿಯೇಟರ್​ಗಳಲ್ಲಿ ಮುಂಚೂಣಿಯಲ್ಲಿರುವ ಭುವನ್​ ಬಾಮ್​ ಅವರ ತಂದೆ ತಾಯಿ ಇಬ್ಬರೂ ಕೊವಿಡ್​ಗೆ ಬಲಿಯಾಗಿದ್ದಾರೆ. ಈ ನೋವಿನ ಸಂಗತಿಯನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ದುಃಖ ಹೊರ ಹಾಕಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು ಭುವನ್​ಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

‘ಒಂದೇ ತಿಂಗಳು. ಎಲ್ಲವನ್ನೂ ಛಿದ್ರಮಾಡಿ ಬಿಟ್ಟಿತು. ನನ್ನ ಎರಡು ಲೈಫ್​ಲೈನ್​ಗಳನ್ನು ಕಳೆದುಕೊಂಡೆ. ನನ್ನ ಅಪ್ಪ-ಅಮ್ಮ ಇಲ್ಲದೆ ಯಾವುದೂ ಮೊದಲಿನಂತೆ ಇರೋಕೆ ಸಾಧ್ಯವಿಲ್ಲ. ಮನೆ, ಕನಸು ಎಲ್ಲವೂ ಈಗ ನಾಶವಾಗಿದೆ’ ಎಂದು ಅವರು ಬರಹ ಆರಂಭಿಸಿದ್ದಾರೆ.

‘ಅಮ್ಮ ನನ್ನ ಜತೆ ಇಲ್ಲ. ತಂದೆ ನನ್ನ ಜತೆ ಇಲ್ಲ. ನಾನು ಈಗ ಮತ್ತೆ ಬದುಕೋದಕ್ಕೆ ಕಲಿಯಬೇಕು. ಆದರೆ, ಮತ್ತೆ ಬದುಕುವುದಕ್ಕೆ ನನಗೆ ಇಷ್ಟವಿಲ್ಲ. ನಾನು ಒಳ್ಳೆಯ ಮಗನೇ? ಅವರನ್ನು ಉಳಿಸಲು ನಾನು ಮಾಡಿದ ಪ್ರಯತ್ನ ಸಾಕಾಗಲಿಲ್ಲವೇ? ಜೀವನ ಪರ್ಯಂತ ನಾನು ಈ ಪ್ರಶ್ನೆಯೊಂದಿಗೆ ಬದುಕಬೇಕಿದೆ. ನಾನು ಅವರನ್ನು ನೋಡಲು ಮತ್ತೆ ಕಾದಿದ್ದೇನೆ. ಆ ದಿನ ಬೇಗ ಬರಲಿ’ ಎಂದು ಹಾರೈಸುತ್ತೇನೆ ಎಂದಿದ್ದಾರೆ.

View this post on Instagram

A post shared by Bhuvan Bam (@bhuvan.bam22)

ಈ ಪೋಸ್ಟ್​ಗೆ ಬಾಲಿವುಡ್​ ನಟ ರಾಜ್​ಕುಮಾರ್ ರಾವ್​ ಕಮೆಂಟ್​ ಮಾಡಿದ್ದಾರೆ. ‘ನಿಮ್ಮ ಈ ನಷ್ಟಕ್ಕೆ ನನ್ನ ವಿಷಾದವಿದೆ. ಏನು ಮಾಡಬೇಕೋ ನಾವು ಅದನ್ನು ಮಾಡಿದ್ದೇವೆ. ಆದರೆ ಹಣೆಯಲ್ಲಿ ಬರೆದಿದ್ದನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಅವರ ಆಶೀರ್ವಾದ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ದೇವರು ನಿಮಗೆ ಶಕ್ತಿಯನ್ನು ನೀಡಲಿ. ನಾನು ಯಾವಾಗಲೂ ನಿಮ್ಮ ಜತೆ ಇರುತ್ತೇನೆ’ ಎಂದಿದ್ದಾರೆ. ಇದೇ ರೀತಿಯಲ್ಲಿ ಸಾಕಷ್ಟು ಸೆಲೆಬ್ರಿಟಿ ಹಾಗೂ ಅಭಿಮಾನಿಗಳು ಭುವನ್​ಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

‘ಬಿಬಿ ಕಿ ವೈನ್ಸ್’​ ಯೂಟ್ಯೂಬ್​ ಚಾನೆಲ್​ ಮೂಲಕ ಭುವನ್​ ಹೆಚ್ಚು ಗುರುತಿಸಿಕೊಂಡಿದ್ದಾರೆ. 1 ಕೋಟಿ ಸಬ್​ಸ್ಕ್ರೈಬರ್​ಗಳನ್ನು ಹೊಂದಿದ ಮೊದಲ ಇಂಡಿಯನ್​ ಯೂಟ್ಯೂಬರ್​ ಎನ್ನುವ ಖ್ಯಾತಿ ಇವರಿಗಿದೆ. ಇದಲ್ಲದೆ, ಭುವನ್​ ನಟ ಹಾಗೂ ಗಾಯಕ ಕೂಡ ಹೌದು.

ಇದನ್ನೂ ಓದಿ:  ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ