AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಡಿ ಹೋದ ಕೆಲವೇ ದಿನಕ್ಕೆ ಹೆಣವಾದ ಯುವತಿ; ಖ್ಯಾತ ಯೂಟ್ಯೂಬರ್ ಅರೆಸ್ಟ್​

YouTuber Jeetu Jaan: ಕೋಮಲ್​ ಇತ್ತೀಚೆಗೆ ನೇಣು ಬಿಗಿದು ಮೃತಪಟ್ಟಿದ್ದರು. ಇದನ್ನು ಪೊಲೀಸರು ಆತ್ಮಹತ್ಯೆ ಎಂದು ಕೇಸ್​ ಕ್ಲೋಸ್​ ಮಾಡಿದ್ದರು. ಆದರೆ, ಕೋಮಲ್ ಅವರ ತಾಯಿ ಜಿತೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಓಡಿ ಹೋದ ಕೆಲವೇ ದಿನಕ್ಕೆ ಹೆಣವಾದ ಯುವತಿ; ಖ್ಯಾತ ಯೂಟ್ಯೂಬರ್ ಅರೆಸ್ಟ್​
ರಾಜೇಶ್ ದುಗ್ಗುಮನೆ
|

Updated on: Jun 02, 2021 | 7:54 PM

Share

ಜೀತು ಜಾನ್​ ಎಂದೇ ಖ್ಯಾತಿ ಪಡೆದಿರುವ ಜಿತೇಂದ್ರ ಹೆಸರಿನ ಖ್ಯಾತ ಯೂಟ್ಯೂಬರ್​ನನ್ನು ಮಹಾರಾಷ್ಟ್ರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅವರ ಪತ್ನಿ ಕೋಮಲ್​ ಅಗರ್​ವಾಲ್​ ಇತ್ತೀಚೆಗೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಇವರ ಸಾವಿಗೆ ಜೀತೇಂದ್ರ ಅವರೇ ಕಾರಣ ಎಂದು ಹುಡುಗಿ ಕುಟುಂಬದವರು ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್​ ಮಾಡಲಾಗಿದೆ.

ಕೋಮಲ್​ ಇತ್ತೀಚೆಗೆ ನೇಣು ಬಿಗಿದು ಮೃತಪಟ್ಟಿದ್ದರು. ಇದನ್ನು ಪೊಲೀಸರು ಆತ್ಮಹತ್ಯೆ ಎಂದು ಕೇಸ್​ ಕ್ಲೋಸ್​ ಮಾಡಿದ್ದರು. ಆದರೆ, ಕೋಮಲ್ ಅವರ ತಾಯಿ ಜಿತೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಿತೇಂದ್ರ ಅವರು ಹಿಂಸೆ ಕೊಡುತ್ತಿದ್ದರು. ಕೋಮಲ್​ ಆತ್ಮಹತ್ಯೆ ಮಾಡಿಕೊಳ್ಳಲು ಅವರೇ ಪ್ರಚೋದನೆ ನೀಡಿದ್ದರು ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಕೋಮಲ್ ತಾಯಿ​ ನೀಡಿದ ದೂರು ಆಧರಿಸಿ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದು, ಜಿತೇಂದ್ರ ಅವರನ್ನು ಅರೆಸ್ಟ್​ ಮಾಡಲಾಗಿದೆ. ‘ನನ್ನ ಅಕ್ಕನಿಗೆ ಆತ ಸಾಕಷ್ಟು ಚಿತ್ರ ಹಿಂಸೆ ಕೊಡುತ್ತಿದ್ದ. ಆತನೇ ಆಕೆಯನ್ನು ಕೊಲೆ ಮಾಡಿರಬಹುದು’ ಎಂದು ಕೋಮಲ್​ ಸಹೋದರಿ ಪ್ರಿಯಾ ಆರೋಪಿಸಿದ್ದಾರೆ. ಸದ್ಯ, ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಕೋಮಲ್​ ಹಾಗೂ ಜಿತೇಂದ್ರ ಕೆಲ ತಿಂಗಳು ಪರಸ್ಪರ ಪ್ರೀತಿಸಿದ್ದರು. ಇವರ ಮದುವೆಗೆ ಕೋಮಲ್​ ಮನೆಯವರ ಒಪ್ಪಿಗೆ ಇರಲಿಲ್ಲ. ಹೀಗಾಗಿ,  ಮಾರ್ಚ್​ 4ರಂದು ಜಿತೇಂದ್ರ ಜತೆಗೆ ಓಡಿ ಹೋಗಿ ಕೋಮಲ್​ ಮದುವೆ ಆಗಿದ್ದರು. ಈಗ ಅವರ ಸಾವು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಇದನ್ನೂ ಓದಿ: ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ ಪತ್ನಿಯ ತಲೆಗೆ ಗುಂಡಿಕ್ಕಿದ ಪತಿ; ಬಳಿಕ ಮೂವರು ಪುಟಾಣಿ ಮಕ್ಕಳನ್ನು ನಾಲೆಗೆ ಎಸೆದು ಕೊಲೆ

‘ದಿಯಾ’ ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ?

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ