AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ ‘ಎಕ್ಕ’; ಎಲ್ಲಿ ವೀಕ್ಷಿಸಬಹುದು?

ಯುವ ರಾಜ್​ಕುಮಾರ್ ನಟನೆಯ 'ಎಕ್ಕ' ಕನ್ನಡ ಸಿನಿಮಾ ಈಗ ಸನ್​ NXT​ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಥಿಯೇಟರ್ ಬಿಡುಗಡೆಯಾದ ನಾಲ್ಕು ತಿಂಗಳ ನಂತರ 'ಎಕ್ಕ' ಒಟಿಟಿಗೆ ಎಂಟ್ರಿ ಕೊಟ್ಟಿದೆ. ಕನ್ನಡ ಸಿನಿಮಾ ಒಟಿಟಿಗೆ ಬರುವುದು ಕಡಿಮೆ. ಹೀಗಾಗಿ ಅಭಿಮಾನಿಗಳಿಗೆ ಸಿನಿಮಾ ಒಟಿಟಿಗೆ ಬಂದಿದ್ದು ಖುಷಿ ಕೊಟ್ಟಿದೆ.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ ‘ಎಕ್ಕ’; ಎಲ್ಲಿ ವೀಕ್ಷಿಸಬಹುದು?
ಎಕ್ಕ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Nov 14, 2025 | 11:51 AM

Share

ವೀಕೆಂಡ್ ಬಂತು ಎಂದರೆ ಒಟಿಟಿಯಲ್ಲಿ ಯಾವುದಾದರೂ ಒಳ್ಳೆಯ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಸಿಗಬಹುದೇ ಎಂದು ನೋಡುತ್ತಾರೆ. ಪ್ರತಿ ವಾರ ಸಾಕಷ್ಟು ಸಿನಿಮಾಗಳು ಹಾಗು ವೆಬ್ ಸೀರಿಸ್​ಗಳು ಬಿಡುಗಡೆ ಆಗುತ್ತವೆ ನಿಜ. ಆದರೆ, ಕನ್ನಡ ಭಾಷೆಯ ಸಿನಿಮಾಗಳು ಒಟಿಟಿಗೆ ಬರೋದು ತುಂಬಾನೇ ಕಡಿಮೆ. ಈ ವಾರ ಕನ್ನಡದ್ದೇ ಸಿನಿಮಾ ರಿಲೀಸ್ ಆಗಿದೆ. ಅದು ಬೇರೆ ಯಾವುದೂ ಅಲ್ಲ ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’.

‘ಎಕ್ಕ’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಿದ್ದು ಜುಲೈ 18ರಂದು. ಈ ಸಿನಿಮಾಗೆ ಯುವ ರಾಜ್​ಕುಮಾರ್ ಹೀರೋ ಆದರೆ, ಸಂಜನಾ ಆನಂದ್ ನಾಯಕಿ. ರೋಹಿತ್ ಪದಕಿ ಅವರು ಈ ಚಿತ್ರ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಿತು. ಈ ಸಿನಿಮಾ ಒಟಿಟಿಗೆ ಇನ್ನೂ ಕಾಲಿಟ್ಟಿರಲಿಲ್ಲ. ಈಗ ಸಿನಿಮಾ ರಿಲೀಸ್ ಆದ ಸುಮಾರು ನಾಲ್ಕು ತಿಂಗಳ ಬಳಿಕ ಒಟಿಟಿಗೆ ಬಂದಿದೆ.

‘ಎಕ್ಕ’ ಸಿನಿಮಾ ಸನ್​ NXT​ ಒಟಿಟಿ ಮೂಲಕ ಪ್ರಸಾರ ಆರಂಭಿಸಿದೆ. ಸಾಮಾನ್ಯವಾಗಿ ಜೀ5, ಅಮೇಜಾನ್ ಪ್ರೈಮ್ ವಿಡಿಯೋ ಸಬ್​ಸ್ಕ್ರಿಪ್ಶನ್ ಅನೇಕರ ಬಳಿ ಇರುತ್ತವೆ. ಆದರೆ, ಸನ್​ NXT​ ಸಬ್​ಸ್ಕ್ರಿಪ್ಶನ್ ಹೊಂದಿರುವವರು ಕಡಿಮೆ. ಹೀಗಾಗಿ, ‘ಎಕ್ಕ’ ಸಿನಿಮಾನ ಈ ಒಟಿಟಿ ಮೂಲಕ ಪ್ರಸಾರ ಮಾಡಿದ್ದು ಅನೇಕರಿಗೆ ಬೇಸರ ಇದೆ. ಈ ಮೊದಲು ‘ಎಕ್ಕ’ ಸಿನಿಮಾ ಜೀ5 ಅಲ್ಲಿ ಬರುತ್ತದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ‘ಎಕ್ಕ’ ಸಿನಿಮಾದ ಗೆಲುವಿನಲ್ಲಿ ಅಣ್ಣಾವ್ರ ನೆನಪಿಸಿಕೊಂಡ ಯುವ ರಾಜ್​ಕುಮಾರ್

‘ಎಕ್ಕ’ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್, ಜಯಣ್ಣ-ಭೋಗೇಂದ್ರ, ಕಾರ್ತಿ ಗೌಡ ಹಾಗೂ ಯೋಗಿ ರಾಜ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಥೀಮ್ ಪುನೀತ್ ಅವರ ‘ಜಾಕಿ’ ಸಿನಿಮಾಗೆ ಅನೇಕರು ಹೋಲಿಕೆ ಮಾಡಿದ್ದರು. ಈ ಚಿತ್ರದ ಮೂಲಕ ಯುವ ಸಾಕಷ್ಟು ಜನಪ್ರಿಯತೆ ಪಡೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ