AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ ‘ಎಕ್ಕ’; ಎಲ್ಲಿ ವೀಕ್ಷಿಸಬಹುದು?

ಯುವ ರಾಜ್​ಕುಮಾರ್ ನಟನೆಯ 'ಎಕ್ಕ' ಕನ್ನಡ ಸಿನಿಮಾ ಈಗ ಸನ್​ NXT​ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಥಿಯೇಟರ್ ಬಿಡುಗಡೆಯಾದ ನಾಲ್ಕು ತಿಂಗಳ ನಂತರ 'ಎಕ್ಕ' ಒಟಿಟಿಗೆ ಎಂಟ್ರಿ ಕೊಟ್ಟಿದೆ. ಕನ್ನಡ ಸಿನಿಮಾ ಒಟಿಟಿಗೆ ಬರುವುದು ಕಡಿಮೆ. ಹೀಗಾಗಿ ಅಭಿಮಾನಿಗಳಿಗೆ ಸಿನಿಮಾ ಒಟಿಟಿಗೆ ಬಂದಿದ್ದು ಖುಷಿ ಕೊಟ್ಟಿದೆ.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ ‘ಎಕ್ಕ’; ಎಲ್ಲಿ ವೀಕ್ಷಿಸಬಹುದು?
ಎಕ್ಕ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Nov 14, 2025 | 11:51 AM

Share

ವೀಕೆಂಡ್ ಬಂತು ಎಂದರೆ ಒಟಿಟಿಯಲ್ಲಿ ಯಾವುದಾದರೂ ಒಳ್ಳೆಯ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಸಿಗಬಹುದೇ ಎಂದು ನೋಡುತ್ತಾರೆ. ಪ್ರತಿ ವಾರ ಸಾಕಷ್ಟು ಸಿನಿಮಾಗಳು ಹಾಗು ವೆಬ್ ಸೀರಿಸ್​ಗಳು ಬಿಡುಗಡೆ ಆಗುತ್ತವೆ ನಿಜ. ಆದರೆ, ಕನ್ನಡ ಭಾಷೆಯ ಸಿನಿಮಾಗಳು ಒಟಿಟಿಗೆ ಬರೋದು ತುಂಬಾನೇ ಕಡಿಮೆ. ಈ ವಾರ ಕನ್ನಡದ್ದೇ ಸಿನಿಮಾ ರಿಲೀಸ್ ಆಗಿದೆ. ಅದು ಬೇರೆ ಯಾವುದೂ ಅಲ್ಲ ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’.

‘ಎಕ್ಕ’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಿದ್ದು ಜುಲೈ 18ರಂದು. ಈ ಸಿನಿಮಾಗೆ ಯುವ ರಾಜ್​ಕುಮಾರ್ ಹೀರೋ ಆದರೆ, ಸಂಜನಾ ಆನಂದ್ ನಾಯಕಿ. ರೋಹಿತ್ ಪದಕಿ ಅವರು ಈ ಚಿತ್ರ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಿತು. ಈ ಸಿನಿಮಾ ಒಟಿಟಿಗೆ ಇನ್ನೂ ಕಾಲಿಟ್ಟಿರಲಿಲ್ಲ. ಈಗ ಸಿನಿಮಾ ರಿಲೀಸ್ ಆದ ಸುಮಾರು ನಾಲ್ಕು ತಿಂಗಳ ಬಳಿಕ ಒಟಿಟಿಗೆ ಬಂದಿದೆ.

‘ಎಕ್ಕ’ ಸಿನಿಮಾ ಸನ್​ NXT​ ಒಟಿಟಿ ಮೂಲಕ ಪ್ರಸಾರ ಆರಂಭಿಸಿದೆ. ಸಾಮಾನ್ಯವಾಗಿ ಜೀ5, ಅಮೇಜಾನ್ ಪ್ರೈಮ್ ವಿಡಿಯೋ ಸಬ್​ಸ್ಕ್ರಿಪ್ಶನ್ ಅನೇಕರ ಬಳಿ ಇರುತ್ತವೆ. ಆದರೆ, ಸನ್​ NXT​ ಸಬ್​ಸ್ಕ್ರಿಪ್ಶನ್ ಹೊಂದಿರುವವರು ಕಡಿಮೆ. ಹೀಗಾಗಿ, ‘ಎಕ್ಕ’ ಸಿನಿಮಾನ ಈ ಒಟಿಟಿ ಮೂಲಕ ಪ್ರಸಾರ ಮಾಡಿದ್ದು ಅನೇಕರಿಗೆ ಬೇಸರ ಇದೆ. ಈ ಮೊದಲು ‘ಎಕ್ಕ’ ಸಿನಿಮಾ ಜೀ5 ಅಲ್ಲಿ ಬರುತ್ತದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ‘ಎಕ್ಕ’ ಸಿನಿಮಾದ ಗೆಲುವಿನಲ್ಲಿ ಅಣ್ಣಾವ್ರ ನೆನಪಿಸಿಕೊಂಡ ಯುವ ರಾಜ್​ಕುಮಾರ್

‘ಎಕ್ಕ’ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್, ಜಯಣ್ಣ-ಭೋಗೇಂದ್ರ, ಕಾರ್ತಿ ಗೌಡ ಹಾಗೂ ಯೋಗಿ ರಾಜ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಥೀಮ್ ಪುನೀತ್ ಅವರ ‘ಜಾಕಿ’ ಸಿನಿಮಾಗೆ ಅನೇಕರು ಹೋಲಿಕೆ ಮಾಡಿದ್ದರು. ಈ ಚಿತ್ರದ ಮೂಲಕ ಯುವ ಸಾಕಷ್ಟು ಜನಪ್ರಿಯತೆ ಪಡೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!