AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಹಲ್ ‘ಶುಗರ್ ಡ್ಯಾಡಿ’ ಟಿ-ಶರ್ಟ್ ಮೆಸೇಜ್​ಗೆ ಖಡಕ್ ಆಗಿ ಉತ್ತರಿಸಿದ ಧನಶ್ರೀ ವರ್ಮಾ

ಯಜುವೇಂದ್ರ ಚಹಲ್ ಮತ್ತು ಧನಶ್ರೀ ವರ್ಮ ಅವರ ವಿಚ್ಛೇದನದ ಸಮಯದಲ್ಲಿ ಚಹಲ್ ಅವರು ಧರಿಸಿದ್ದ "ಬಿ ಯುವರ್ ಓನ್ ಶುಗರ್ ಡ್ಯಾಡಿ" ಎಂಬ ಟಿ-ಶರ್ಟ್ ಸಾಕಷ್ಟು ಗಮನ ಸೆಳೆಯಿತು. ಈ ಬಗ್ಗೆ ಧನಶ್ರೀ ತಮ್ಮ ಮೌನವನ್ನು ಮುರಿದು ಪ್ರತಿಕ್ರಿಯಿಸಿದ್ದಾರೆ. ವಿಚ್ಛೇದನದ ದಿನದ ಘಟನೆಗಳ ಬಗ್ಗೆ ಮತ್ತು ಟಿ-ಶರ್ಟ್‌ನ ಅರ್ಥದ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಚಹಲ್ ‘ಶುಗರ್ ಡ್ಯಾಡಿ’ ಟಿ-ಶರ್ಟ್ ಮೆಸೇಜ್​ಗೆ ಖಡಕ್ ಆಗಿ ಉತ್ತರಿಸಿದ ಧನಶ್ರೀ ವರ್ಮಾ
ಧನಶ್ರೀ- ಚಹಲ್
ರಾಜೇಶ್ ದುಗ್ಗುಮನೆ
|

Updated on: Aug 20, 2025 | 1:02 PM

Share

ಟೀಂ ಇಂಡಿಯಾ ಕ್ರಿಕೆಟರ್ ಯಜುವೇಂದ್ರ ಚಹಲ್ ಹಾಗೂ ನಟಿ, ಕೊರಿಯೋಗ್ರಾಫರ್ ಧನಶ್ರೀ ವರ್ಮ (Dhanashree Verma) ವಿವಾಹ ಆಗಿ ಕೆಲವೇ ವರ್ಷಗಳಲ್ಲಿ ಬೇರೆ ಆದರು. ವಿಚ್ಛೇದನ ಪಡೆದುಕೊಳ್ಳುವ ದಿನ ಕೋರ್ಟ್​ನಲ್ಲಿ ಇಬ್ಬರೂ ಮುಖಾ ಮುಖಿ ಆದರು. ಈ ವೇಳೆ ಚಹಲ್ ಅವರು ಧರಿಸಿದ್ದ ಟಿ-ಶರ್ಟ್ ಗಮನ ಸೆಳೆದಿತ್ತು. ಇದು ಧನಶ್ರೀಗೆ ಟಾಂಗ್ ಕೊಡುವ ರೀತಿಯಲ್ಲಿ ಇತ್ತು. ಈ ಬಗ್ಗೆ ಧನಶ್ರೀ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಟಿ-ಶರ್ಟ್ ಮೇಲೆ ಏನಿತ್ತು?

ಚಹಾಲ್ ಅವರು ‘ಬಿ ಯುವರ್ ಓನ್ ಶುಗರ್ ಡ್ಯಾಡಿ’ (Be your own Sugar Daddy) ಎಂಬ ಸಾಲಿರುವ ಟಿ ಶರ್ಟ್​ನ ಧರಿಸಿ ಬಂದಿದ್ದರು. ‘ನಿಮ್ಮ ಅಗತ್ಯತೆಗಳು ಮತ್ತು ಆಸೆಗಳಿಗಾಗಿ ಶ್ರೀಮಂತ ವ್ಯಕ್ತಿಯನ್ನು ಅವಲಂಬಿಸುವ ಬದಲು ಆರ್ಥಿಕವಾಗಿ ಸ್ವತಂತ್ರರಾಗಿ ಮತ್ತು ಸ್ವಾವಲಂಬಿಯಲಾಗಿ’ ಎಂಬ ಅರ್ಥವನ್ನು ಈ ಸಾಲುಗಳು ನೀಡುತ್ತವೆ.

ಇದನ್ನೂ ಓದಿ
Image
‘ಕ್ವಾಟ್ಲೆ ಕಿಚನ್’ ಶೋ​ನಿಂದ ದಿಢೀರ್​ ಹೊರ ನಡೆದ ಕೆಂಪಮ್ಮ; ಇಲ್ಲಿದೆ ವಿವರ
Image
ಮಂಗಳೂರು ಬೆಡಗಿ ಪೂಜಾ ಹೆಗ್ಡೆ ಮುಟ್ಟಿದ್ದೆಲ್ಲವೂ ಕಬ್ಬಿಣ; ಕೈ ಕೊಟ್ಟ ಅದೃಷ್ಟ
Image
ಸಲ್ಮಾನ್ ಖಾನ್ ಬಿಗ್ ಬಾಸ್ ಸಂಭಾವನೆಗೆ ಕತ್ತರಿ; ಕಿಚ್ಚನ ವಿಚಾರದಲ್ಲಿ ಏನು?
Image
ವಿಮರ್ಶೆಯಲ್ಲಿ ಸೋತ ‘ಕೂಲಿ’ಗೆ ಮೊದಲ ಆಘಾತ ಕೊಟ್ಟ ಪ್ರೇಕ್ಷಕ

ಧನಶ್ರೀ ಉತ್ತರ..

‘ಆ ನಿರ್ದಿಷ್ಟ ದಿನದಂದು ನೀವು ಹೇಗೆ ವರ್ತಿಸುತ್ತೀರಿ ಎಂಬುದರ ಆಧಾರದ ಮೇಲೆ ನೀವು ಯಾರು ಎಂಬುದು ಗೊತ್ತಾಗುತ್ತದೆ. ಸಂಸಾರದಲ್ಲಿ ಒಳ್ಳೆಯ ದಿನಗಳು ಮತ್ತು ಕೆಟ್ಟ ದಿನಗಳು ಇರುತ್ತವೆ.ಆದರೆ, ದಾಂಪತ್ಯ ಕೊನೆಗೊಂಡಿದೆ ಎಂದರೆ ಆ ದಿನಗಳು ನಿಜವಾಗಿಯೂ ಕೆಟ್ಟದಾಗಿತ್ತು ಎಂದೇ ಅರ್ಥ. ಆ ವೇಳೆ ನೀವು ಪ್ರಬುದ್ಧರಾಗಿ ನಡೆದುಕೊಳ್ಳಬೇಕು. ನಿಮಗೆ ಮೆಸೇಜ್ ಕೊಡಬೇಕು ಎಂದಿದ್ದರೆ ವಾಟ್ಸಾಪ್ ಮಾಡಬಹುದಿತ್ತಲ್ಲ’ ಎಂದು ಧನಶ್ರೀ ಹೇಳಿದ್ದಾರೆ.

View this post on Instagram

A post shared by GlamBlitz (@glamblitzz)

‘ಆ ದಿನ ನಿಜಕ್ಕೂ ಭಾವನಾತ್ಮಕವಾಗಿತ್ತು. ನಾನು ಅಲ್ಲಿ ನಿಂತುಕೊಂಡಿದ್ದಾಗ ತೀರ್ಪನ್ನು ನೀಡಲಾಗುತ್ತಿತ್ತು. ನಾನು ಮಾನಸಿಕವಾಗಿ ಸಿದ್ಧನಾಗಿದ್ದರೂ ನಾನು ಭಾವುಕಳಾಗಿದ್ದೆ. ನಾನು ಎಲ್ಲರ ಎದುರೇ ಅಳುತ್ತಿದ್ದೆ. ಆ ಸಮಯದಲ್ಲಿ ಏನಾಗುತ್ತಿತ್ತು ಎಂಬುದನ್ನು ವಿವರಿಸಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ:ಟಿ ಶರ್ಟ್ ಮೇಲಿನ ಸಾಲುಗಳ ಮೂಲಕ ಧನಶ್ರೀಗೆ ಟಾಂಗ್ ಕೊಟ್ಟ ಚಾಹಲ್; ಕೌಂಟರ್ ಕೊಟ್ಟ ವರ್ಮಾ

ಚಹಲ್ ಹಾಗೂ ಧನಶ್ರೀ ಡ್ಯಾನ್ಸ್ ಕ್ಲಾಸ್​ನಲ್ಲಿ ಭೇಟಿ ಆದರು. ಚಹಲ್​ಗೆ ಧನಶ್ರೀ ಡ್ಯಾನ್ಸ್ ಹೇಳಿಕೊಟ್ಟರು.ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಆ ಬಳಿಕ ಡೇಟ್ ಮಾಡಿ ಇವರು ವಿವಾಹ ಆದರು. ಈಗ ವಿಚ್ಛೇದನ ಪಡೆದು ದೂರ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ