AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಟ್’ ಆದ ಝೈದ್ ಖಾನ್​; ಸಖತ್ ರಗಡ್ ಆಗಿದೆ ಹೊಸ ಸಿನಿಮಾ ಪೋಸ್ಟರ್  

ಇತ್ತೀಚೆಗಷ್ಟೇ ಝೈದ್ ಖಾನ್ ಹಾಗೂ ಅನಿಲ್ ಕುಮಾರ್ ಸಿನಿಮಾ ಮಾಡುತ್ತಾರೆ ಎನ್ನುವ ವಿಚಾರ ರಿವೀಲ್ ಆಯಿತು. ಈ ಚಿತ್ರದ ಟೈಟಲ್​ನ ಶೀಘ್ರವೇ ರಿವೀಲ್ ಮಾಡುವುದಾಗಿ ತಿಳಿಸಲಾಗಿತ್ತು. ಈಗ ಚಿತ್ರದ ಟೈಟಲ್ ರಿಲೀಸ್ ಆಗಿದೆ. ಪೋಸ್ಟರ್ ಕೂಡ ಸಖತ್ ರಗಡ್ ಆಗಿ ಮೂಡಿ ಬಂದಿದೆ. ಈ

‘ಕಲ್ಟ್’ ಆದ ಝೈದ್ ಖಾನ್​; ಸಖತ್ ರಗಡ್ ಆಗಿದೆ ಹೊಸ ಸಿನಿಮಾ ಪೋಸ್ಟರ್  
ಕಲ್ಟ್ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on: Apr 10, 2024 | 6:59 AM

Share

‘ಬನಾರಸ್’ ಸಿನಿಮಾ (Banaras Movie) ಮೂಲಕ ತಮ್ಮನ್ನು ತಾವು ಸಾಬೀತು ಮಾಡಿಕೊಂಡರು ಝೈದ್ ಖಾನ್. ಮೊದಲ ಚಿತ್ರದಲ್ಲೇ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಈಗ ಅವರ ಎರಡನೇ ಚಿತ್ರದ ಟೈಟಲ್ ಘೋಷಣೆ ಆಗಿದೆ. ಯುಗಾದಿ ಹಾಗೂ ರಂಜಾನ್ ಹಬ್ಬದ ಸಂದರ್ಭದಲ್ಲಿ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದ್ದು, ‘ಕಲ್ಟ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ‘ಉಪಾಧ್ಯಕ್ಷ’ ಚಿತ್ರದ ಮೂಲಕ ಮೆಚ್ಚುಗೆ ಪಡೆದ ನಿರ್ದೇಶಕ ಅನಿಲ್ ಕುಮಾರ್ ಅವರು ‘ಕಲ್ಟ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಇತ್ತೀಚೆಗಷ್ಟೇ ಝೈದ್ ಖಾನ್ ಹಾಗೂ ಅನಿಲ್ ಕುಮಾರ್ ಸಿನಿಮಾ ಮಾಡುತ್ತಾರೆ ಎನ್ನುವ ವಿಚಾರ ರಿವೀಲ್ ಆಯಿತು. ಈ ಚಿತ್ರದ ಟೈಟಲ್​ನ ಶೀಘ್ರವೇ ರಿವೀಲ್ ಮಾಡುವುದಾಗಿ ತಿಳಿಸಲಾಗಿತ್ತು. ಈಗ ಚಿತ್ರದ ಟೈಟಲ್ ರಿಲೀಸ್ ಆಗಿದೆ. ಪೋಸ್ಟರ್ ಕೂಡ ಸಖತ್ ರಗಡ್ ಆಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ‘ಬ್ಲಡಿ ಲವ್’ ಎನ್ನೋ ಟ್ಯಾಗ್ ಲೈನ್ ಇದ್ದು, ಸಿನಿಮಾದಲ್ಲಿ ಲವ್​ ಸ್ಟೋರಿ, ಬ್ರೇಕಪ್ ಕಥೆ ಇರಲಿದೆ ಅನ್ನೋದು ಪಕ್ಕಾ ಆಗಿದೆ.

ಸಖತ್ ರಾ ಲುಕ್​ನಲ್ಲಿ ಝೈದ್ ಖಾನ್ ಕಾಣಿಸಿಕೊಂಡಿದ್ದಾರೆ. ಅವರ ಮುಖದ ಮೇಲೆ ಗಾಯಗಳಿವೆ. ಯಾವುದೋ ಹುಡುಗಿ ಕಾಲಿನ ಬೆರಳಿನ ಮಧ್ಯೆ ಸಿಗರೇಟ್ ಹಿಡಿಸಿ ಅದನ್ನು ಸೇದುತ್ತಿದ್ದಾರೆ ಝೈದ್. ಇದರಿಂದ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಈ ಚಿತ್ರಕ್ಕೆ ‘ಕಲ್ಟ್ ಶಬ್ದ ಇಡೋಕೆ ಕಾರಣ ಏನು ಎಂಬುದನ್ನು ಕೂಡ ನಿರ್ದೇಶಕರು ವಿವರಿಸಿದ್ದಾರೆ.

‘ಕಲ್ಟಿಸಂ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಬಳಕೆ ಮಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪದ ಹೆಚ್ಚು ಪ್ರಚಲಿತವಾಗಿದೆ. ಚಿತ್ರ ಕೂಡ ಯುವಜನತೆಗೆ ಹತ್ತಿರವಾಗಿರಲಿದೆ‌‌. ಈ ಕಾರಣಕ್ಕೆ ಚಿತ್ರಕ್ಕೆ ಈ ಶೀರ್ಷಿಕೆ ಫೈನಲ್ ಮಾಡಿದ್ದೇವೆ’ ಎಂದಿದ್ದಾರೆ ಅವರು. ‘ಬನಾರಸ್’ ಚಿತ್ರದಲ್ಲಿ ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದ ಝೈದ್ ಖಾನ್, ಈ ಚಿತ್ರದಲ್ಲಿ ಮಾಸ್ ಅವತಾರ ತಾಳಲಿದ್ದಾರೆ. ಶೀಘ್ರದಲ್ಲೆ ‘ಕಲ್ಟ್’ ಸಿನಿಮಾ ಸೆಟ್ಟೇರಲಿದೆ. ಮುಹೂರ್ತದ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿಯನ್ನು ತಂಡ ಬಿಟ್ಟುಕೊಡಲಿದೆ.

ಇದನ್ನೂ ಓದಿ: ಎರಡನೇ ಚಿತ್ರಕ್ಕೆ ರೆಡಿ ಆದ ಝೈದ್ ಖಾನ್; ಮತ್ತೊಂದು ವಿಭಿನ್ನ ಪ್ರಯತ್ನ

‘ಆಶ್ರಿತ್ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಜೆ.ಎಸ್ ವಾಲಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ  ಹಾಗೂ ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಝೈದ್ ಖಾನ್ ಲ್ಲಿ ಕ್ಲಿಕ್​ ಮಾಡಿ

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!