AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆ. 2ಕ್ಕೆ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್

ಜೀ ಕನ್ನಡ ವಾಹಿನಿಯು ತಾಯಂದಿರಿಗಾಗಿ ವಿಶೇಷವಾಗಿ ಹಮ್ಮಿಕೊಂಡಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ರಿಯಾಲಿಟಿ ಶೋನ ಮೊದಲ ಹಂತದ ಆಡಿಷನ್ ಆಗಸ್ಟ್ 2 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ನೃತ್ಯದ ಪ್ರತಿಭೆ ಹೊಂದಿರುವ ಅಮ್ಮಂದಿರಿಗೆ ತಮ್ಮ ಕೌಶಲವನ್ನು ಜಗತ್ತಿಗೆ ಪ್ರದರ್ಶಿಸಲು ವಾಹಿನಿಯು ಈ ಮೂಲಕ ಸುವರ್ಣ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

ಬೆಂಗಳೂರಿನಲ್ಲಿ ಆ. 2ಕ್ಕೆ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್
ಸೂಪರ್ ಮಾಮ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 01, 2026 | 7:53 AM

Share

ಜೀ ಕನ್ನಡ ವಾಹಿನಿಯಲ್ಲಿ ಹಲವು ರಿಯಾಲಿಟಿ ಶೋಗಳು ಬಂದು ಹೋಗಿವೆ. ಎಲ್ಲಾ ರಿಯಾಲಿಟಿ ಶೋಗಳು ಭಿನ್ನವಾಗಿವೆ. ಬಹುತೇಕ ರಿಯಾಲಿಟಿ ಶೋಗಳಲ್ಲಿ ಯುವ ಜನತೆಗೆ ಅವಕಾಶ ಸಿಗುತ್ತದೆ. ಈಗ ಪ್ರಮುಖ ರಿಯಾಲಿಟಿ ಶೋಗಳಲ್ಲೊಂದಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಇದೀಗ ತಾಯಂದಿರಿಗಾಗಿ ವಿಶೇಷ ಸರಣಿಯನ್ನು ಆರಂಭಿಸುತ್ತಿದ್ದು, ಇದರ ಮೊದಲ ಹಂತದ ಆಡಿಷನ್ ಆಗಸ್ಟ್ 2ರ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದೆ. ಆಸಕ್ತಿ ಇರುವವರು ಇದರಲ್ಲಿ ಭಾಗವಹಿಸಬಹುದು.

ನೃತ್ಯದಲ್ಲಿ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಈ ಶೋ ಮೂಲಕ ವೇದಿಕೆ ಕಲ್ಪಿಸಲಾಗುತ್ತಿದೆ. ಗೃಹಿಣಿಯರು ಹಾಗೂ ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಅರ್ಹ ತಾಯಂದಿರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ನಿತ್ಯ ಮಾಡುವ ಕಾಯಕವನ್ನೇ ಮಾಡುವ ಬದಲು ತಮ್ಮ ಪ್ರತಿಭೆಯನ್ನು ಜಗತ್ತಿಗೆ ತೋರಿಸಲು ಇದು ಒಳ್ಳೆಯ ಅವಕಾಶ. ಬೆಂಗಳೂರು ಸೇರಿದಂತೆ ಉಳಿದ ಆಡಿಷನ್ ವಿವರ ಸೋಶಿಯಲ್ ಮೀಡಿಯಾ ಪೋಸ್ಟ್​ನಲ್ಲಿದೆ.

View this post on Instagram

A post shared by Zee Kannada (@zeekannada)

ಆಡಿಷನ್ ನಡೆಯುವ ಸ್ಥಳ ಮತ್ತು ಸಮಯ:

ಆಗಸ್ಟ್ 2ರ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಉತ್ತರಹಳ್ಳಿ ಹೋಬಳಿ, ಚಿಕ್ಕಲಸಂದ್ರದ ಹನುಮಗಿರಿ ಲೇಔಟ್‌ನಲ್ಲಿರುವ ಮಧು ಆರ್ಟ್ಸ್ ಸ್ಟುಡಿಯೋದಲ್ಲಿ (ಅಬ್ಬಯ್ಯ ನಾಯ್ಡು ಸ್ಟುಡಿಯೋ) ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: ಅಮ್ಮಂದಿರಿಗೆ ಸುವರ್ಣಾವಕಾಶ; ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್   ಸೂಪರ್ ಮಾಮ್

ಭಾಗವಹಿಸುವವರಿಗೆ ಸೂಚನೆಗಳು:

ಆಡಿಷನ್‌ನಲ್ಲಿ ಪಾಲ್ಗೊಳ್ಳಲು ಬಯಸುವ ಸ್ಪರ್ಧಿಗಳು ತಮ್ಮ ಇತ್ತೀಚಿನ ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ವಿಳಾಸದ ಪುರಾವೆಯ ಜೆರಾಕ್ಸ್ ಪ್ರತಿಗಳನ್ನು ತರುವುದು ಕಡ್ಡಾಯವಾಗಿದೆ. ಈ ಆಡಿಷನ್ ಸಂಪೂರ್ಣ ಉಚಿತವಾಗಿದ್ದು, ಭಾಗವಹಿಸಲು ಜೀ ಕನ್ನಡ ವಾಹಿನಿಯು ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?