AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ಬರ್ತಿದೆ ‘ಸರಿಗಮಪ ಲಿಟ್ಲ್​ ಚಾಂಪ್ಸ್’; ಈ ಬಾರಿಯ ವಿಶೇಷತೆ ಏನು?

ಜೀ ಕನ್ನಡದಲ್ಲಿ ಬಹುನಿರೀಕ್ಷಿತ 'ಸರಿಗಮಪ ಲಿಟ್ಲ್ ಚಾಂಪ್ಸ್' ಹೊಸ ಸೀಸನ್ ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಈ ಬಾರಿ 3ರಿಂದ 15 ವರ್ಷದ ಮಕ್ಕಳು ಭಾಗವಹಿಸಬಹುದು. ಕರ್ನಾಟಕದ ಮೂಲೆಮೂಲೆಗಳಲ್ಲಿ ಆಡಿಷನ್ ನಡೆಸಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ.

ಜೀ ಕನ್ನಡದಲ್ಲಿ ಬರ್ತಿದೆ ‘ಸರಿಗಮಪ ಲಿಟ್ಲ್​ ಚಾಂಪ್ಸ್’; ಈ ಬಾರಿಯ ವಿಶೇಷತೆ ಏನು?
ಸರೆಗಮಪ
ರಾಜೇಶ್ ದುಗ್ಗುಮನೆ
|

Updated on:Apr 17, 2026 | 7:43 AM

Share

ಜೀ ಕನ್ನಡದ ವಾಹಿನಿಯಲ್ಲಿ ಒಂದಾದ ಬಳಿಕ ಒಂದು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಲೇ ಇರುತ್ತವೆ. ಇತ್ತೀಚೆಗೆ ‘ಜೋಡಿ ನಂ.1’ ಶೋ ಪ್ರಸಾರ ಆರಂಭಿಸಿದೆ. ಇನ್ನು, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಇತ್ತೀಚೆಗೆ ಪೂರ್ಣಗೊಂಡಿದೆ. ಹೀಗಿರುವಾಗಲೇ ಜನರ ಫೇವರಿಟ್ ಶೋ ಎನಿಸಿಕೊಂಡಿರುವ ‘ಸರಿಗಮಪ ಲಿಟ್ಲ್ ಚಾಂಪ್ಸ್’ (SAREGAMAPA) ಆಗಮನಕ್ಕೆ ಜೀ ಕನ್ನಡ ವೇದಿಕೆ ರೆಡಿ ಮಾಡಿದೆ. ಈ ವೀಕೆಂಡ್​​ನಿಂದ ಶೋ ಪ್ರಾರಂಭ ಆಗಲಿದೆ. ಇದಕ್ಕಾಗಿ ವೀಕ್ಷಕರು ಕಾದಿದ್ದಾರೆ.

‘ಸರಿಗಮಪ’ ಶೋ ಅಂದರೆನೇ ಅನೇಕರಿಗೆ ಇಷ್ಟ. ಅದರಲ್ಲೂ ಈ ಬಾರಿ ಸಣ್ಣ ಮಕ್ಕಳಿಗೆ ಶೋ ವೇದಿಕೆ ಆಗಲಿದೆ ಎಂದಾಗ ಸಹಜವಾಗಿಯೇ ಕುತೂಹಲ ಹೆಚ್ಚಿರುತ್ತದೆ. ಈ ವರ್ಷ 3 ವರ್ಷದಿಂದ ಆರಂಭಿಸಿ 15 ವರ್ಷದೊಳಗಿನ ಮಕ್ಕಳು ಶೋನಲ್ಲಿ ಭಾಗವಹಿಸಬಹುದು ಎಂಬುದು ಈ ಬಾರಿಯ ವಿಶೇಷ. ಬೆಂಗಳೂರಿನಲ್ಲಿ ಮಾತ್ರ ಆಡಿಷನ್ ಮಾಡಿದರೆ ಕರ್ನಾಟಕದಲ್ಲಿರುವ ಅನೇಕರಿಗೆ ಇದರಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರಬಹುದು. ಹೀಗಾಗಿ, ಕರ್ನಾಟಕದ ಮೂಲೆ ಮೂಲೆಗೆ ತೆರಳಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ.

View this post on Instagram

A post shared by Zee Kannada (@zeekannada)

‘ಸರಿಗಮಪ ಲಿಟ್ಲ್ ಚಾಂಪ್ಸ್’ ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಸಣ್ಣ ಮಕ್ಕಳು ತಮ್ಮ ಪ್ರತಿಭೆಯನ್ನು ಕರ್ನಾಟಕದ ಜನತೆ ಮುಂದೆ ಇಡುತ್ತಿದ್ದಾರೆ. ಈ ಶೋ ಉದಯೋನ್ಮುಖ ಗಾಯಕರಿಗೆ ಉತ್ತಮ ವೇದಿಕೆ ಆಗಿದೆ.

ಇದನ್ನೂ ಓದಿ: ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

‘ಸರಿಗಮಪ’ ಶೋನ ಮತ್ತೊಂದು ಹೈಲೈಟ್ ಎಂದರೆ ಜಡ್ಜ್​​ಗಳು ಹಾಗೂ ಆ್ಯಂಕರ್ಸ್. ರಾಜೇಶ್ ಕೃಷ್ಣನ್, ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಗಾಯಕ ವಿಜಯ್ ಪ್ರಕಾಶ್ ಅವರು ತೀರ್ಪುಗಾರರಾಗಿ ಇರಲಿದ್ದಾರೆ. ಇವರುಗಳು ಯುವ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಜನಪ್ರಿಯ ನಿರೂಪಕಿ ಅನುಶ್ರೀ ಅವರು ಈ ಶೋನ ನಡೆಸಿಕೊಡಲಿದ್ದಾರೆ. ಅವರು ಸಣ್ಣ ಮಕ್ಕಳ ಜೊತೆ ಮಗುವಾಗೇ ನಡೆದುಕೊಳ್ಳುವ ಗುಣ ಹೊಂದಿರೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:37 am, Fri, 17 April 26

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ