Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಲ್ಲಿ ಮನರಂಜನೆ ನೀಡೋಕೆ ಬರ್ತಿವೆ ‘ಕಥಾಸಂಗಮ’ ಹಾಗೂ ‘ರಾಮಾರ್ಜುನ’

ದೇಶದಲ್ಲಿ ಕೊರೊನಾ ವೈರಸ್​ ಮಿತಿ ಮೀರಿ ಹರಡುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಹೀಗಾಗಿ ಜನರನ್ನು ಮನರಂಜಿಸೋಕೆ ವಾಹಿನಿಗಳು ಮುಂದಾಗಿವೆ.

ಲಾಕ್​ಡೌನ್​ನಲ್ಲಿ ಮನರಂಜನೆ ನೀಡೋಕೆ ಬರ್ತಿವೆ ‘ಕಥಾಸಂಗಮ’ ಹಾಗೂ ‘ರಾಮಾರ್ಜುನ’
ರಾಮಾರ್ಜುನ-ಕಥಾ ಸಂಗಮ
Follow us
ರಾಜೇಶ್ ದುಗ್ಗುಮನೆ
|

Updated on: May 12, 2021 | 6:50 PM

ಕೊರೊನಾ ವೈರಸ್​ ನಿಯಂತ್ರಿಸೋಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ ಜನರೆಲ್ಲರೂ ಮನೆಯಲ್ಲೇ ಕೂತಿದ್ದಾರೆ. ಈ ಸಂದರ್ಭದಲ್ಲಿ ವೀಕ್ಷಕರಿಗೆ ಮನರಂಜನೆ ನೀಡೋಕೆ ಜೀ ಕನ್ನಡ ವಾಹಿನಿ ಮುಂದಾಗಿದೆ. ‘ರಾಮಾರ್ಜುನ’ ಹಾಗೂ ‘ಕಥಾಸಂಗಮ’ ಸಿನಿಮಾಗಳ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಮಾಡಲು ವಾಹಿನಿ ನಿರ್ಧರಿಸಿದೆ.

ಕಿರಣ್ ರಾಜ್ ಕೆ., ಚಂದ್ರಜಿತ್ ಬೆಳ್ಳಿಯಪ್ಪ, ಶಶಿ ಕುಮಾರ್ ಪಿ., ರಾಹುಲ್ ಪಿ.ಕೆ., ಜಮದಗ್ನಿ ಮನೋಜ್, ಕರಣ್ ಅನಂತ್, ಜಯಶಂಕರ್ ನಿರ್ದೇಶನದ ವಿವಿಧ ಕಥೆಗಳ ಸಂಗಮವೇ ‘ಕಥಾಸಂಗಮ’. ಈ ಚಿತ್ರ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತ್ತು. ಹರಿಪ್ರಿಯಾ, ರಿಷಭ್ ಶೆಟ್ಟಿ, ಕಿಶೋರ್, ರಾಜ್ ಬಿ. ಶೆಟ್ಟಿ, ಯಜ್ಞಾ ಶೆಟ್ಟಿ, ಪ್ರಕಾಶ್ ಬೆಳವಾಡಿ, ಅವಿನಾಶ್, ಬಾಲಾಜಿ ಮನೋಹರ್, ಪ್ರಮೋದ್ ಶೆಟ್ಟಿ, ಹರಿ ಸಮಸ್ತಿ ಮುಂತಾದವರು ಕಥಾ ಸಂಗಮದಲ್ಲಿ ನಟಿಸಿದ್ದಾರೆ. ಇದೇ ಶನಿವಾರ (ಮೇ 15)  ರಾತ್ರಿ 7 ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಅನೀಶ್ ತೇಜೇಶ್ವರ್ ನಟನೆ ಜತೆಗೆ ನಿರ್ದೇಶನವನ್ನೂ ಮಾಡಿರುವ ‘ರಾಮಾರ್ಜುನ’ ಸಿನಿಮಾ ವಿಮೆ, ವೈದ್ಯಕೀಯ ಹಾಗೂ ರಾಜಕೀಯ ಮಾಫಿಯಾದ ಕಥೆಯನ್ನು ಹೇಳುತ್ತದೆ. ನಾಯಕ ಒಬ್ಬ ವಿಮಾ ಏಜೆಂಟ್. ಪ್ರತಿಯೊಬ್ಬರೂ ವಿಮೆ ಪಡೆಯಬೇಕೆನ್ನುವುದು ಅವನ ಬಯಕೆ. ಜನರ ಸಮಸ್ಯೆಗಳಿಗೆ ಒಂದೇ ಫೋನ್ ಕರೆಗೆ ಸ್ಪಂದಿಸುತ್ತಿರುತ್ತಾನೆ. ಆದರೆ ಆ ಪ್ರದೇಶದಲ್ಲಿ ಇನ್ನೂ ಸತ್ತಿರದ 20 ಮಂದಿಯ ಹಿಂದೆ ಬಹುದೊಡ್ಡ ಇನ್ಷೂರೆನ್ಸ್ ಹಗರಣವಿರುತ್ತದೆ. ಇದು ನಾಯಕನಿಗೆ ಗೊತ್ತಾಗುತ್ತದೆ. ನಂತರ ಆತ ಏನು ಮಾಡುತ್ತಾನೆ ಎನ್ನುವುದೇ ಸಿನಿಮಾದ ಕಥೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ರಂಗಾಯಣ ರಘು, ರವಿ ಕಾಳೆ, ಶರತ್ ಲೋಹಿತಾಶ್ವ ನಟಿಸಿದ್ದಾರೆ. ಇದೇ ಭಾನುವಾರ ರಾತ್ರಿ 7ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಸೆಟಲ್ ಆದರೂ ಕೊವಿಡ್ ಸಮಯದಲ್ಲಿ ಕನ್ನಡಿಗರ ಕಷ್ಟಕ್ಕೆ ಮಿಡಿದ ದರ್ಶನ್‌ ‘ಶಾಸ್ತ್ರಿ’ ಸಿನಿಮಾ ನಟಿ

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ