AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಲ್ಲಿ ಮನರಂಜನೆ ನೀಡೋಕೆ ಬರ್ತಿವೆ ‘ಕಥಾಸಂಗಮ’ ಹಾಗೂ ‘ರಾಮಾರ್ಜುನ’

ದೇಶದಲ್ಲಿ ಕೊರೊನಾ ವೈರಸ್​ ಮಿತಿ ಮೀರಿ ಹರಡುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಹೀಗಾಗಿ ಜನರನ್ನು ಮನರಂಜಿಸೋಕೆ ವಾಹಿನಿಗಳು ಮುಂದಾಗಿವೆ.

ಲಾಕ್​ಡೌನ್​ನಲ್ಲಿ ಮನರಂಜನೆ ನೀಡೋಕೆ ಬರ್ತಿವೆ ‘ಕಥಾಸಂಗಮ’ ಹಾಗೂ ‘ರಾಮಾರ್ಜುನ’
ರಾಮಾರ್ಜುನ-ಕಥಾ ಸಂಗಮ
ರಾಜೇಶ್ ದುಗ್ಗುಮನೆ
|

Updated on: May 12, 2021 | 6:50 PM

Share

ಕೊರೊನಾ ವೈರಸ್​ ನಿಯಂತ್ರಿಸೋಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ ಜನರೆಲ್ಲರೂ ಮನೆಯಲ್ಲೇ ಕೂತಿದ್ದಾರೆ. ಈ ಸಂದರ್ಭದಲ್ಲಿ ವೀಕ್ಷಕರಿಗೆ ಮನರಂಜನೆ ನೀಡೋಕೆ ಜೀ ಕನ್ನಡ ವಾಹಿನಿ ಮುಂದಾಗಿದೆ. ‘ರಾಮಾರ್ಜುನ’ ಹಾಗೂ ‘ಕಥಾಸಂಗಮ’ ಸಿನಿಮಾಗಳ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಮಾಡಲು ವಾಹಿನಿ ನಿರ್ಧರಿಸಿದೆ.

ಕಿರಣ್ ರಾಜ್ ಕೆ., ಚಂದ್ರಜಿತ್ ಬೆಳ್ಳಿಯಪ್ಪ, ಶಶಿ ಕುಮಾರ್ ಪಿ., ರಾಹುಲ್ ಪಿ.ಕೆ., ಜಮದಗ್ನಿ ಮನೋಜ್, ಕರಣ್ ಅನಂತ್, ಜಯಶಂಕರ್ ನಿರ್ದೇಶನದ ವಿವಿಧ ಕಥೆಗಳ ಸಂಗಮವೇ ‘ಕಥಾಸಂಗಮ’. ಈ ಚಿತ್ರ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತ್ತು. ಹರಿಪ್ರಿಯಾ, ರಿಷಭ್ ಶೆಟ್ಟಿ, ಕಿಶೋರ್, ರಾಜ್ ಬಿ. ಶೆಟ್ಟಿ, ಯಜ್ಞಾ ಶೆಟ್ಟಿ, ಪ್ರಕಾಶ್ ಬೆಳವಾಡಿ, ಅವಿನಾಶ್, ಬಾಲಾಜಿ ಮನೋಹರ್, ಪ್ರಮೋದ್ ಶೆಟ್ಟಿ, ಹರಿ ಸಮಸ್ತಿ ಮುಂತಾದವರು ಕಥಾ ಸಂಗಮದಲ್ಲಿ ನಟಿಸಿದ್ದಾರೆ. ಇದೇ ಶನಿವಾರ (ಮೇ 15)  ರಾತ್ರಿ 7 ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಅನೀಶ್ ತೇಜೇಶ್ವರ್ ನಟನೆ ಜತೆಗೆ ನಿರ್ದೇಶನವನ್ನೂ ಮಾಡಿರುವ ‘ರಾಮಾರ್ಜುನ’ ಸಿನಿಮಾ ವಿಮೆ, ವೈದ್ಯಕೀಯ ಹಾಗೂ ರಾಜಕೀಯ ಮಾಫಿಯಾದ ಕಥೆಯನ್ನು ಹೇಳುತ್ತದೆ. ನಾಯಕ ಒಬ್ಬ ವಿಮಾ ಏಜೆಂಟ್. ಪ್ರತಿಯೊಬ್ಬರೂ ವಿಮೆ ಪಡೆಯಬೇಕೆನ್ನುವುದು ಅವನ ಬಯಕೆ. ಜನರ ಸಮಸ್ಯೆಗಳಿಗೆ ಒಂದೇ ಫೋನ್ ಕರೆಗೆ ಸ್ಪಂದಿಸುತ್ತಿರುತ್ತಾನೆ. ಆದರೆ ಆ ಪ್ರದೇಶದಲ್ಲಿ ಇನ್ನೂ ಸತ್ತಿರದ 20 ಮಂದಿಯ ಹಿಂದೆ ಬಹುದೊಡ್ಡ ಇನ್ಷೂರೆನ್ಸ್ ಹಗರಣವಿರುತ್ತದೆ. ಇದು ನಾಯಕನಿಗೆ ಗೊತ್ತಾಗುತ್ತದೆ. ನಂತರ ಆತ ಏನು ಮಾಡುತ್ತಾನೆ ಎನ್ನುವುದೇ ಸಿನಿಮಾದ ಕಥೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ರಂಗಾಯಣ ರಘು, ರವಿ ಕಾಳೆ, ಶರತ್ ಲೋಹಿತಾಶ್ವ ನಟಿಸಿದ್ದಾರೆ. ಇದೇ ಭಾನುವಾರ ರಾತ್ರಿ 7ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಸೆಟಲ್ ಆದರೂ ಕೊವಿಡ್ ಸಮಯದಲ್ಲಿ ಕನ್ನಡಿಗರ ಕಷ್ಟಕ್ಕೆ ಮಿಡಿದ ದರ್ಶನ್‌ ‘ಶಾಸ್ತ್ರಿ’ ಸಿನಿಮಾ ನಟಿ

ಬಿಗ್​ ಬಾಸ್​ನಿಂದ ಹೊರ ಬಂದ ವೈಷ್ಣವಿಗೆ ಮ್ಯಾರೇಜ್​ ಪ್ರಪೋಸಲ್​; ನಾಚುತ್ತಲೇ ವಿಚಾರ ಬಿಚ್ಚಿಟ್ಟ ಸನ್ನಿಧಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು